ಮಳೆಗಾಲದ ಸಮಸ್ಯೆಗೆ ಸ್ಪಂದಿಸಲು ಪಾಲಿಕೆ ಅಧಿಕಾರಿಗಳಿಗೆ ಕಾಮತ್‌ ಸೂಚನೆ

KannadaprabhaNewsNetwork |  
Published : Jun 07, 2025, 12:07 AM IST
ಶಾಸಕ ವೇದವ್ಯಾಸ್‌ ಕಾಮತ್‌ ಅಧ್ಯಕ್ಷತೆಯಲ್ಲಿ ಪಾಲಿಕೆಯಲ್ಲಿ ಮಳೆಗಾಲ ಸಿದ್ಧತೆಯ ಬಗ್ಗೆ ತುರ್ತು ಸಭೆ | Kannada Prabha

ಸಾರಾಂಶ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ, ಮಳೆಯಿಂದ ಉಂಟಾಗಿರುವ ಅವ್ಯವಸ್ಥೆಗಳು ಸೇರಿದಂತೆ ಜನಸಾಮಾನ್ಯರು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ಪಾಲಿಕೆ ಆಯುಕ್ತರು ಹಾಗೂ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಶುಕ್ರವಾರ ಪಾಲಿಕೆಯಲ್ಲಿ ತುರ್ತು ಸಭೆ ನಡೆಸಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ, ಮಳೆಯಿಂದ ಉಂಟಾಗಿರುವ ಅವ್ಯವಸ್ಥೆಗಳು ಸೇರಿದಂತೆ ಜನಸಾಮಾನ್ಯರು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ಪಾಲಿಕೆ ಆಯುಕ್ತರು ಹಾಗೂ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಶುಕ್ರವಾರ ಪಾಲಿಕೆಯಲ್ಲಿ ತುರ್ತು ಸಭೆ ನಡೆಸಿದರು.

ಈ ವೇಳೆ ಮಾತನಾಡಿದ ಶಾಸಕರು, ಪಾಲಿಕೆ ವ್ಯಾಪ್ತಿಯಲ್ಲಿ ವಿಪರೀತ ಮಳೆ ಸುರಿದಿದ್ದರೂ ಜನರಿಗೆ ಕುಡಿಯುವ ನೀರಿನ ಸಮಸ್ಯೆ ತಪ್ಪಿಲ್ಲ. ಇನ್ನೊಂದೆಡೆ ರಾಜಕಾಲುವೆಗಳಲ್ಲಿ ಸಮರ್ಪಕವಾಗಿ ಹೂಳೆತ್ತದಿರುವಿಕೆಯಿಂದ ಮನೆಗಳಿಗೆ ಮಳೆ ನೀರು ನುಗ್ಗಿ ಜನಸಾಮಾನ್ಯರು ತೀವ್ರ ಸಂಕಷ್ಟ ಅನುಭವಿಸುವಂತಾಗಿದೆ. ಸಾಲದ್ದಕ್ಕೆ ಮಳೆಯಿಂದ ತೊಂದರೆಗೀಡಾದವರಿಗೆ ಪಾಲಿಕೆ ವತಿಯಿಂದ ಯಾವುದೇ ನೆರವು ಸಿಗುತ್ತಿಲ್ಲ. ಕಸ ವಿಲೇವಾರಿಯ ಅವ್ಯವಸ್ಥೆಯ ಬಗ್ಗೆಯೂ ಜನರಿಂದ ದೂರುಗಳು ಬರುತ್ತಿವೆ. ಬಲ್ಲಾಳ್ ಬಾಗ್ ಬಳಿಯ ಶಿಥಿಲಗೊಂಡಿರುವ ರಾಜಕಾಲುವೆಯ ಸೇತುವೆಯಿಂದ ನೀರು ಸಾರಾಗವಾಗಿ ಹರಿಯದೇ ಅದರಿಂದಲೂ ಕೃತಕ ನೆರೆ ಸೃಷ್ಟಿಯಾಗುತ್ತಿದ್ದುದೆ. ಪಾಲಿಕೆ ಅಧಿಕಾರಿಗಳು ಯಾವುದನ್ನೂ ಹಗುರವಾಗಿ ಪರಿಗಣಿಸದೇ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಶಾಸಕರು ಕಟ್ಟುನಿಟ್ಟಿನ ಸೂಚನೆ ನೀಡಿದರು.ಈ ಸಂದರ್ಭ ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಕಾರ್ಯಪಾಲಕ ಎಂಜಿನಿಯರ್ ನರೇಶ್ ಶೆಣೈ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!