ಸಾಹಿತ್ಯ ಪರಂಪರೆಗೆ ಕನಕರ ಕೊಡುಗೆ ಅಪಾರ: ಕಾಳಗಿ

KannadaprabhaNewsNetwork |  
Published : Nov 09, 2025, 03:00 AM IST
ಪೋಟೊ18ಕೆಎಸಟಿ4: ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮ ಪಂಚಾಯತಿಯಲ್ಲಿ 538ನೇಯ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು. | Kannada Prabha

ಸಾರಾಂಶ

ಕನಕದಾಸರು ದಾಸ ಸಾಹಿತ್ಯದ ಕಾಲಘಟ್ಟದಲ್ಲಿ ಜಾತಿ ವ್ಯವಸ್ಥೆಯ ವಿರುದ್ಧ ತಮ್ಮ ಕೀರ್ತನೆಗಳ ಮೂಲಕ ಸಮರ ಸಾರಿದ ಭಕ್ತ

ಕುಷ್ಟಗಿ: ಕನಕದಾಸರು ಕೀರ್ತನಕಾರರಾಗಿ,ತತ್ತ್ವಜ್ಞಾನಿಯಾಗಿ, ಸಂತರಾಗಿ, ದಾರ್ಶನಿಕರಾಗಿ ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಗೆ ಅನನ್ಯ ಕೊಡುಗೆ ನೀಡಿದ್ದಾರೆ ಎಂದು ಗ್ರಾಪಂ ಅದ್ಯಕ್ಷ ಮಹೇಶ ಕಾಳಗಿ ಹೇಳಿದರು.

ತಾಲೂಕಿನ ದೋಟಿಹಾಳ ಗ್ರಾಪಂನಲ್ಲಿ 538ನೇಯ ಕನಕದಾಸರ ಜಯಂತಿಯ ಅಂಗವಾಗಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರ, ಕನಕದಾಸರು ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರಾಗಿದ್ದರು. ಕನಕದಾಸರು ದಾಸ ಸಾಹಿತ್ಯದ ಕಾಲಘಟ್ಟದಲ್ಲಿ ಜಾತಿ ವ್ಯವಸ್ಥೆಯ ವಿರುದ್ಧ ತಮ್ಮ ಕೀರ್ತನೆಗಳ ಮೂಲಕ ಸಮರ ಸಾರಿದ ಭಕ್ತ ಕನಕದಾಸರು ದಾಸ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಅವರು, ಕನ್ನಡ ಭಾಷೆಯ ಕೀರ್ತನೆಕಾರರಾಗಿ ಕರ್ನಾಟಕ ಸಂಗೀತಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಶಿವನಗೌಡ ಪಾಟೀಲ, ಗೌಸುಸಾಬ್‌ ಕೊಣ್ಣೂರು, ರುಕುಮುದ್ದೀನಸಾಬ್‌ ನೀಲಗಾರ ಸೇರಿದಂತೆ ಗ್ರಾಮಸ್ಥರು, ಹಾಲುಮತ ಸಮಾಜದ ಯುವಕರು ಗ್ರಾಪಂ ಸಿಬ್ಬಂದಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು, ನಾಳೆ ಪಿಇಎಸ್ ಕಾಲೇಜಲ್ಲಿ ಹ್ಯಾಕ್ ಮಲೆನಾಡು: ನಾಗರಾಜ್
ಯುವಶಕ್ತಿಯಿಂದ ಬಸವ ಜಯಂತಿ 2026ಕ್ಕೆ ಹೊಸ ಚೈತನ್ಯ