ಅಸಮಾನತೆ ನಿವಾರಣೆಗೆ ಕನಕರ ಕೀರ್ತನೆ ಪ್ರೇರಣೆ: ಮಂಗಳಮ್ಮ

KannadaprabhaNewsNetwork |  
Published : Nov 09, 2025, 01:30 AM IST
ಪೋಟೋ೮ಸಿಎಲ್‌ಕೆ೨ ಚಳ್ಳಕೆರೆ ತಾಲ್ಲೂಕಿನ ನಗರಂಗೆರೆ ಗ್ರಾಮಪಂಚಾಯಿತಿ ಕಾರ್ಯಾಲಯದಲ್ಲಿ ಕನಕದಾಸರ ೫೩೮ನೇ ಜಯಂತಿ ಕಾರ್ಯಕ್ರಮ ನಡೆಸಿದರು.   | Kannada Prabha

ಸಾರಾಂಶ

ಕನಕದಾಸರ ಕೀರ್ತನೆಗಳು ಪ್ರತಿಯೊಬ್ಬರ ಬದುಕಿಗೂ ಹೊಸ ಆತ್ಮಸ್ಥೆöÊರ್ಯವನ್ನು ತುಂಬುವ ಶಕ್ತಿಹೊಂದಿವೆ. ಬದುಕಿನ ನೈಜ್ಯತೆಗೆ ಪೂರಕವಾದ ಎಲ್ಲಾ ಅಂಶಗಳು ಅವರ ಕೀರ್ತನೆಗಳಲ್ಲಿ ಕಾಣಬಹುದು. ಈ ನಾಡುಕಂಡ ಶ್ರೇಷ್ಠ ಸಂತ ಭಕ್ತಕನಕದಾಸರು ಎಂದು ನಗರಂಗೆರೆ ಗ್ರಾಪಂ ಅಧ್ಯಕ್ಷೆ ಮಂಗಳಮ್ಮ ರಂಗಸ್ವಾಮಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಳ್ಳಕೆರೆ

ಕನಕದಾಸರ ಕೀರ್ತನೆಗಳು ಪ್ರತಿಯೊಬ್ಬರ ಬದುಕಿಗೂ ಹೊಸ ಆತ್ಮಸ್ಥೆöÊರ್ಯವನ್ನು ತುಂಬುವ ಶಕ್ತಿಹೊಂದಿವೆ. ಬದುಕಿನ ನೈಜ್ಯತೆಗೆ ಪೂರಕವಾದ ಎಲ್ಲಾ ಅಂಶಗಳು ಅವರ ಕೀರ್ತನೆಗಳಲ್ಲಿ ಕಾಣಬಹುದು. ಈ ನಾಡುಕಂಡ ಶ್ರೇಷ್ಠ ಸಂತ ಭಕ್ತಕನಕದಾಸರು ಎಂದು ನಗರಂಗೆರೆ ಗ್ರಾಪಂ ಅಧ್ಯಕ್ಷೆ ಮಂಗಳಮ್ಮ ರಂಗಸ್ವಾಮಿ ತಿಳಿಸಿದರು.

ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಕನಕದಾಸರ ೫೩೮ನೇ ಜಯಂತಿ ಕಾರ್ಯಕ್ರಮವನ್ನು ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಸರ್ಕಾರ ಇಂತಹ ಮಹಾನೀಯರ ವಚನಗಳ ಸಾರವನ್ನು ಸಮಾಜಕ್ಕೆ ತಿಳಿಸುವ ಅವಕಾಶವನ್ನು ಮಾಡಿಕೊಟ್ಟಿರುವುದು ಸಂತಸ ತಂದಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಎಂ.ರಾಮಚಂದ್ರಪ್ಪ, ಸಮಾಜದ ಎಲ್ಲಾ ಜಾತಿಗಳನ್ನು ಒಗ್ಗೂಡಿವ ಎಲ್ಲಾ ಅಂಶಗಳು ಕನಕದಾಸರ ಕೀರ್ತನೆಯಲ್ಲಿವೆ. ಜಾತಿ, ಜಾತಿಎಂದು ವಿಷಬೀಜ ಬಿತ್ತುವ ಸಮಾಜಕ್ಕೆ ಎಚ್ಚರಿಕೆ ಗಂಟೆಯನ್ನು ತಮ್ಮ ವಚನಗಳ ಮೂಲಕವೇ ನೀಡಿದ ಕನಕದಾಸರು ಸಮಾಜಕ್ಕೆ ಮಾದರಿ ಎಂದರು.

ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ಎಂ.ಕುಮಾರಸ್ವಾಮಿ, ಅಂಗಡಿರಮೇಶ್, ಗ್ರೇಡ್-೧ ಕಾರ್ಯದರ್ಶಿ ಡಿ.ತಿಪ್ಪೇಸ್ವಾಮಿ, ಲೆಕ್ಕಸಹಾಯಕಿ ವಿ.ಮಂಜುಳಾ, ಮುಖಂಡರಾದ ರಂಗಸ್ವಾಮಿ, ರವಿಕುಮಾರ್, ತಿಪ್ಪೇಸ್ವಾಮಿ, ಗ್ರಂಥಪಾಲಕ ನಿರಂಜನಮೂರ್ತಿ ಮುಂತಾದವರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೈಕೋರ್ಟ್‌ ಹೊಸ ಕಟ್ಟಡಕ್ಕೆ 30 ಎಕ್ರೆ ಕೋರಿಕೆ : ರಾಜ್ಯ ಸರ್ಕಾರಕ್ಕೆ ನೋಟಿಸ್‌
ಬಿಎಂಐಸಿ ಮರುಪರಿಶೀಲಿಸಿ: ರಾಜ್ಯಕ್ಕೆ ಕೋರ್ಟ್‌ ಸೂಚನೆ