ಕನಕರ ಚಿಂತನೆ ಸಾರ್ವಕಾಲಿಕ: ಡಾ.ಹನುಮಂತ

KannadaprabhaNewsNetwork |  
Published : Nov 12, 2025, 02:30 AM IST
ಪೋಟೊ11.10: ಕೊಪ್ಪಳ ನಗರದ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಕನಕದಾಸರ ಜಯಂತಿಯ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ಕನಕದಾಸರು ಜಾತಿಯ ವಿರುದ್ಧ ಧ್ವನಿಯತ್ತಿ ಸಾಮಾಜಿಕ ಮೌಲ್ಯ ಸಾರಿದ ದಾಸ ಶ್ರೇಷ್ಟರಾಗಿದ್ದಾರೆ

ಕೊಪ್ಪಳ: ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ನೀಡಿದ ಕನಕದಾಸರು ಶತಮಾನದ ಸಂತ, ಮೇರು ಸಾಹಿತಿಗಳಾಗಿದ್ದಾರೆ. ತಮ್ಮ ಅಮೂಲ್ಯ ಕೀರ್ತನೆಗಳು ಹಾಗೂ ಶ್ರೇಷ್ಟ ಸಾಹಿತ್ಯ ಕೃತಿಗಳ ಮೂಲಕ ಕನ್ನಡ ಸಾರಸ್ವತ ಲೋಕ ಬೆಳಗಿದ ದಾಸ ವೇರಣ್ಯರಾದ ಕನಕದಾಸರ ಚಿಂತನೆಗಳು ಸರ್ವಕಾಲೀಕ ಶ್ರೇಷ್ಟವಾಗಿವೆ ಎಂದು ಡಾ. ಹನುಮಂತ ಹೇರೂರ್ ಹೇಳಿದರು.

ನಗರದ ಶ್ರೀಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಆಯೋಜಿಸಿದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನಕದಾಸರು ಜಾತಿಯ ವಿರುದ್ಧ ಧ್ವನಿಯತ್ತಿ ಸಾಮಾಜಿಕ ಮೌಲ್ಯ ಸಾರಿದ ದಾಸ ಶ್ರೇಷ್ಟರಾಗಿದ್ದಾರೆ. ಭಕ್ತಿ, ಜ್ಞಾನ ಮತ್ತು ಕಾವ್ಯ ಗುಣದ ಗಣಿ ಅವರಾಗಿದ್ದರು. ಕನ್ನಡ ನಾಡಿನ ಆಧ್ಯಾತ್ಮೀಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಮೌಲ್ಯಗಳ ಉನ್ನತಿಗೆ ಕನಕದಾಸರ ಕೊಡುಗೆ ಅನುಪಮವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಚನ್ನಬಸವ ಮಾತನಾಡಿ, ಕನಕದಾಸರ ಜೀವನವೇ ಒಂದು ಆದರ್ಶ. ಅವರ ಜಯಂತಿ ಆಚರಣೆ ಮತ್ತು ಅಧ್ಯಯನದ ಮೂಲಕ ಅವರ ಜೀವನ ತಾವು ಅರಿಯಬೇಕು, ಅವರ ಆದರ್ಶ ಅಳವಡಿಸಿಕೊಳ್ಳಬೇಕು. ಅಂದಾಗ ಮಾತ್ರ ಇಂತಹ ಆಚರಣೆಗಳು ಸಾರ್ಥಕಗೊಳ್ಳುತ್ತವೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕನ್ನಡ ವಿಭಾಗದ ಮುಖ್ಯಸ್ಥ ಡಾ.ನಾಗರಾಜ ದಂಡೋತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಶಿವಪ್ಪ ನಿರೂಪಿಸಿದರು, ಡಾ. ಸುಮಲತಾ ಬಿ.ಎಂ. ಸ್ವಾಗತಿಸಿದರು, ಚೇತನಾ ಪ್ರಾರ್ಥಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ