ಸರ್ವರೂ ಸಮಾನರು ಎಂಬ ಸಂದೇಶ ಸಾರಿದ ಕನಕರು: ಶಾಸಕ ಕೋನರಡ್ಡಿ

KannadaprabhaNewsNetwork |  
Published : Nov 09, 2025, 02:45 AM IST
ನವಲಗುಂದ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಕನಕ ಜಯಂತಿಯಲ್ಲಿ ಹಲವರನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಸರ್ವ ಜನಾಂಗಗಳ ನಡುವೆ ಸಮಾನತೆ, ಸೌಹಾರ್ದತೆ ಮತ್ತು ಪ್ರೀತಿಯ ಸಂದೇಶವನ್ನು ತಮ್ಮ ಕಾವ್ಯದ ಮೂಲಕ ಹರಡಿದವರು ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.

ನವಲಗುಂದ: ದಾಸಶ್ರೇಷ್ಠ ಕನಕದಾಸರು ಕೇವಲ ಕವಿಯಲ್ಲ, ಸಾಮಾಜಿಕ ಕ್ರಾಂತಿಯೂ ಹೌದು. ಸರ್ವ ಜನಾಂಗಗಳ ನಡುವೆ ಸಮಾನತೆ, ಸೌಹಾರ್ದತೆ ಮತ್ತು ಪ್ರೀತಿಯ ಸಂದೇಶವನ್ನು ತಮ್ಮ ಕಾವ್ಯದ ಮೂಲಕ ಹರಡಿದವರು ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.

ತಾಲೂಕು ಆಡಳಿತದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತ್ಯುತ್ಸವದಲ್ಲಿ ಮಾತನಾಡಿದರು.

ಕುಲ ಕುಲವೆಂದು ಹೊಡದಾಡದಿರಿ ನಿಮ್ಮ ಕುಲದ ನೆಲೆಯನೇನಾದರು ಬಲ್ಲಿರಾ ಎಂಬ ಕನಕದಾಸ ವಾಣಿಯಂತೆ ಉಡುಪಿಯ ಕೃಷ್ಣ ದೇವರನ್ನೇ ಕೇವಲ ದೇವಸ್ಥಾನದ ಒಳಗಡೆ ಸೀಮಿತವಲ್ಲ, ಕೃಷ್ಣದೇವರನ್ನು ತನ್ನತ್ತ ಕಿಂಡಿಯ ಮೂಲಕ ನೋಡುವಂತೆ ಮಾಡಿದ ಮಹಾಪುರುಷ ಕನಕದಾಸರು ಎಂದರು.

ನಿವೃತ್ತ ಮುಖ್ಯೋಪಾಧ್ಯಾಯ ಎನ್.ಎನ್. ಹಾಲಿಗೇರಿ, ಶಿವಾನಂದ ಕಂಬಳಿ, ಶಿವಾನಂದ ಕಿಲಾರಿ, ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿ ವೈಷ್ಣವಿ ಹರ್ಲಿ ಹಾಗೂ ರಾಷ್ಟ್ರಮಟ್ಟದ ಕರಾಟೆ ಕ್ರೀಡಾ ಪಟು ಅನುಷಾ ಬಾವಿಕಟ್ಟಿ ಅವರನ್ನು ಸನ್ಮಾನಿಸಲಾಯಿತು.

ಮಾಜಿ ಸಚಿವ ಕೆ.ಎನ್.‌ ಗಡ್ಡಿ, ತಹಸೀಲ್ದಾರ್ ಸುಧೀರ ಸಾವಕಾರ, ತಾಪಂ ಇಒ ಭಾಗ್ಯಶ್ರೀ ಜಹಗೀರದಾರ, ಪಿಎಸ್ಐ ಜನಾರ್ಧನ ಭಟ್ರಳ್ಳಿ, ಕನಕ ಕಲ್ಯಾಣ ಮಂಟಪದ ಅಧ್ಯಕ್ಷೆ ಪ್ರೇಮಾ ನಾಯ್ಕರ, ವಿಧಾನಸಭಾ ಕ್ಷೇತ್ರದ ಯುವ ಕಾಗ್ರೆಸ್‌ ಅಧ್ಯಕ್ಷ ವಿಕಾಸ ತದ್ದೆವಾಡಿ, ಜೀವನ ಪವಾರ, ದೇವಪ್ಪ ರೋಣದ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ
ಹೋರಾಟಗಾರರ ಮೇಲಿನ ಎಲ್ಲ ಕೇಸ್ ಹಿಂಪಡೆಯಿರಿ