ಮೌಢ್ಯಕ್ಕೆ ಕೊಳ್ಳಿ ಇಟ್ಟ ವೈಚಾರಿಕ ಸಂತ ಕನಕದಾಸರು: ಪಾರ್ವತಿ ಸೋನಾರೆ

KannadaprabhaNewsNetwork |  
Published : Nov 09, 2025, 01:30 AM IST
ಚಿತ್ರ 8ಬಿಡಿಆರ್53 | Kannada Prabha

ಸಾರಾಂಶ

ಕಿರ್ತನೆಗಳ ಮೂಲಕ ವಿಶ್ವಪ್ರೇಮ ಸಾರಿದ ಕನಕದಾಸರು ಸಮಾಜದಲ್ಲಿ ಬೇರೂರಿದ ಮೌಢ್ಯಕ್ಕೆ ಕೊಳ್ಳಿ ಇಟ್ಟ ವೈಚಾರಿಕ ಸಂತ ಎಂದು ಸಾಹಿತಿ, ಕಥೆಗಾರ್ತಿ ಪಾರ್ವತಿ ಸೋನಾರೆ ಅಭಿಪ್ರಾಯಪಟ್ಟರು.

ಕನ್ನಡಪ್ರಭ ವಾರ್ತೆ ಔರಾದ್

ಕಿರ್ತನೆಗಳ ಮೂಲಕ ವಿಶ್ವಪ್ರೇಮ ಸಾರಿದ ಕನಕದಾಸರು ಸಮಾಜದಲ್ಲಿ ಬೇರೂರಿದ ಮೌಢ್ಯಕ್ಕೆ ಕೊಳ್ಳಿ ಇಟ್ಟ ವೈಚಾರಿಕ ಸಂತ ಎಂದು ಸಾಹಿತಿ, ಕಥೆಗಾರ್ತಿ ಪಾರ್ವತಿ ಸೋನಾರೆ ಅಭಿಪ್ರಾಯಪಟ್ಟರು.

ಪಟ್ಟಣದ ತಹಸೀಲ್ ಕಛೇರಿಯಲ್ಲಿ ಶನಿವಾರ ತಾಲೂಕು ಆಡಳಿತದಿಂದ ಆಯೋಜಿಸಿದ ಕನಕ ಜಯಂತ್ಯುತ್ಸವ ಸಮಾರಂಭದಲ್ಲಿ ಮಾತನಾಡಿ, ಕನಕದಾಸರ ಕಿರ್ತನೆಗಳಲ್ಲಿ ಮಾನವೀಯತೆ, ಸರ್ವ ಧರ್ಮ ಸಮಾನತೆಯ ವಿಚಾರಗಳಿವೆ. ಕನಕದಾಸರು ಕನ್ನಡ ನಾಡು ಕಂಡ ಶ್ರೇಷ್ಠ ಚಿಂತಕ ಎಂದ ಅವರು, ಜಾತಿ ವ್ಯವಸ್ಥೆ, ಶೋಷಣೆ, ಅಸಮಾನತೆಯ ವಿರುದ್ಧ ಬಂಡಾಯವೆದ್ಧ ಕನಕದಾಸ ಅನಿಷ್ಠ ಪದ್ದತಿ, ಆಚರಣೆಗಳಿಂದ ಕೂಡಿದ ಭಕ್ತಿ ಮನುಕುಲಕ್ಕೆ ಮಾರಕ ಎಂಬುದನ್ನು ಎಚ್ಚರಿಸಿದರು.

ತಹಸೀಲ್ದಾರ್ ಮಹೇಶ ಪಾಟೀಲ್ ಮಾತನಾಡಿ, ಕನ್ನಡ ಸಾಹಿತ್ಯದ ತೂಕ ಹೆಚ್ಚಿಸಿದ ಕನಕದಾಸರು ಬರೆದ ರಾಮಧಾನ್ಯ ಚರಿತೆ ಕೃತಿ ಮೇಲು ಕೀಳು ಎಂಬ ಮನಸ್ಥಿತಿಗೆ ಉತ್ತರಿಸಿದಂತಿದೆ. ಶ್ರಮಿಕವರ್ಗದವರೇ ದೇವರಿಗೆ ಪ್ರಿಯವಾಗಿರುತ್ತಾರೆ, ಬದುಕಿನಲ್ಲಿ ಗಟ್ಟಿಯಾಗಿರುತ್ತಾರೆ ಎಂದರು.

ಈ ಸಂದರ್ಭದಲ್ಲಿ ಪಪಂ ಮುಖ್ಯಾಧಿಕಾರಿ ಸರುಬಾಯಿ ಘುಳೆ, ಖಜಾನೆ ಅಧಿಕಾರಿ ಮಾಣಿಕ ನೇಳಗಿ, ಬಿಇಒ ರಂಗೇಶ, ಶಿವಕುಮಾರ ಘಾಟೆ, ಪಪಂ ಸದಸ್ಯ ಗುಂಡಪ್ಪ ಮುದಾಳೆ, ಕಸಾಪ ಅಧ್ಯಕ್ಷ ಬಿ.ಎಂ ಅಮರವಾಡಿ, ರಾಮಣ್ಣ ವಡೆಯರ್, ಡಾ. ವೈಜಿನಾಥ ಬುಟ್ಟೆ, ಶಿವಕುಮಾರ್ ಮೇತ್ರೆ, ಶಿವರಾಜ ಅಲಮಾಜೆ, ಶಿವಾಜಿರಾವ ಪಾಮುದಾಳೆ, ಶ್ರಾವಣಕುಮಾರ ಭಂಡೆ, ರಾಜಕುಮಾರ ಮುದಾಳೆ, ಅರ್ಜುನ ಭಂಗೆ, ಸಂತೋಷ ಮುದಾಳೆ, ಕೃಷ್ಣ ಸಾಗಾವೆ, ಬೀರಪ್ಪ ರಕ್ಷಾಳೆ, ಧನರಾಜ ಮಾನೆ ಸೇರಿದಂತೆ ಇನ್ನಿತರರಿದ್ದರು.

ಭವ್ಯ ಮೆರವಣಿಗೆ ಕುಣಿದು ಕುಪ್ಪಳಿಸಿದ ಮಕ್ಕಳು ಕನಕದಾಸ ಜಯಂತಿ ನಿಮಿತ್ತ ಪಟ್ಟಣದ ಬಸ್ ನಿಲ್ದಾಣ ಬಳಿ ಕನಕ ವೃತ್ತದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಪ.ಪಂ. ಅಧ್ಯಕ್ಷೆ ಸರುಬಾಯಿ ಘುಳೆ ಚಾಲನೆ ನೀಡಿದರು.

ಮೆರವಣಿಗೆಯು ಕನಕದಾಸ ವೃತ್ತದಿಂದ ಬಸವೇಶ್ವರ ವೃತ್ತ, ಸಾರ್ವಜನಿಕ ಆಸ್ಪತ್ರೆ, ಪೊಲೀಸ್ ಠಾಣೆ, ನ್ಯಾಯಾಲಯ ರಸ್ತೆಯಿಂದ ತಹಸೀಲ್ ಆವರಣಕ್ಕೆ ತೆರಳಿತು. ಮೆರವಣಿಗೆಯಲ್ಲಿ ಮಕ್ಕಳು, ಕಳಸ ಹೊತ್ತ ಮಹಿಳೆಯರು, ತಾಲೂಕು ಅಧಿಕಾರಿಗಳು ಡಿಜೆ ಸದ್ದಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ-ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಒತ್ತಾಯ