ಕನ್ನಡಪ್ರಭ ವಾರ್ತೆ ಕನಕಪುರ
ಮುಷ್ಕರ ಮುಂದುವರಿಸುವುದಾಗಿ ತಿಳಿಸಿದರು.
ನಗರಸಭಾ ಸದಸ್ಯ ಚಂದ್ರು, ಬಹುಜನ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ನೀಲಿ ರಮೇಶ್ ಮಾತನಾಡಿ, ನಗರದ ಸ್ವಚ್ಛತೆಯಲ್ಲಿ ಹಗಲಿರುಳು ಸೇನಾನಿಗಳಂತೆ ಶ್ರಮಿಸುತ್ತಿರುವ ಪೌರ ಕಾರ್ಮಿಕರು ದೇವರ ಪ್ರತಿರೂಪ ಎಂದರೂ ತಪ್ಪಾಗಲಾರದು. ನೌಕರರ ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರ ಶೀಘ್ರವಾಗಿ ಸ್ಪಂದಿಸಿ ಅವರಿಗೆ ನ್ಯಾಯಯುತವಾಗಿ ಸಿಗಬೇಕಾದ ಸವಲತ್ತುಗಳನ್ನು ನೀಡಬೇಕು, ಪೌರ ಕಾರ್ಮಿಕ ಬಂಧುಗಳು ಮುಷ್ಕರ ವಾಪಸ್ ಪಡೆಯದಿದ್ದರೆ ನಗರದ ನೈರ್ಮಲ್ಯ ಹಾಗೂ ಸ್ವಚ್ಛತೆಗೆ ಧಕ್ಕೆ ಬರುವುದರ ಜೊತೆಗೆ ಹಲವು ರೋಗ ರುಜಿನಗಳು ಹರಡುವುದಕ್ಕೆ ಕಾರಣವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಪುಟ್ಟಸ್ವಾಮಿ, ಶಾಖಾಧ್ಯಕ್ಷ ಪ್ರದೀಪ್,ತಾಲೂಕು ಉಪಾಧ್ಯಕ್ಷ ವೆಂಕಟರಮಣ ಸ್ವಾಮಿ, ನೀರು ಸರಬರಾಜು ನೌಕರರ ಸಂಘದ ಅಧ್ಯಕ್ಷ ಮೋಹನ್ ಸೇರಿ ನಗರಸಭೆಯ ಇತರೆ ನೌಕರರು,ಸಿಬ್ಬಂದಿ ಮುಷ್ಕರದಲ್ಲಿ ಪಾಲ್ಗೊಂಡಿದ್ದರು. ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಮಾಜಿ ಅಧ್ಯಕ್ಷ ಚಿಕ್ಕ ಕೆಂಪೇಗೌಡ ಹಾಗೂ ತಾಲೂಕಿನ ಹಲವು ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ಪಕ್ಷಾತೀತವಾಗಿ ಹಲವು ರಾಜಕೀಯ ಮುಖಂಡರು ಪೌರ ಕಾರ್ಮಿಕ ಬಂಧುಗಳ ಮುಷ್ಕರಕ್ಕೆ ಬೆಂಬಲ ಸೂಚಿಸಿ ಮುಷ್ಕರದಲ್ಲಿ ಭಾಗಿಯಾಗಿದ್ದರು.