ಕನಕಪುರ: ವಿದ್ಯಾರ್ಥಿ ಮೇಲೆ ದರ್ಪ ತೋರಿದ ವಾರ್ಡನ್

KannadaprabhaNewsNetwork |  
Published : Jul 25, 2025, 12:30 AM IST
5.ಕನಕಪುರ ನಗರದ ಬೂದಿಕೇರಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ಹಾಸ್ಟೆಲ್ ಚಿತ್ರ | Kannada Prabha

ಸಾರಾಂಶ

ವಿದ್ಯಾರ್ಥಿಯ ತಾಯಿಯನ್ನು ನಿಂದಿಸಿದ ನಂತರ ಅದನ್ನು ಪ್ರಶ್ನಿಸಿದಾಗ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದು, ಅದನ್ನು ತಡೆಯಲು ಮುಂದಾದ ವಿದ್ಯಾರ್ಥಿಯನ್ನು ನಿನ್ನ ಮೇಲೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ಹೆದರಿದ ಯುವಕ ಹಾಸ್ಟೆಲ್ ತೊರೆದು ಹಿಂದುಳಿದ ವರ್ಗಗಳ ತಾಲೂಕು ಅಧಿಕಾರಿಗೆ ದೂರು ನೀಡಿದ್ದಾನೆ.

ಕನ್ನಡಪ್ರಭ ವಾರ್ತೆ ಕನಕಪುರ

ವಿದ್ಯಾರ್ಥಿ ಮೇಲೆ ವಿದ್ಯಾರ್ಥಿನಿಲಯದ ವಾರ್ಡನ್ ಹಲ್ಲೆ ನಡೆಸಿದ್ದಲ್ಲದೆ ಹಾಸ್ಟೆಲ್ ತೊರೆಯುವಂತೆ ಬೆದರಿಕೆ ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ನಗರದ ಬೂದಿಕೇರಿ ರಸ್ತೆಯಲ್ಲಿರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಯಲದ ವಾರ್ಡನ್ ಯೋಗೀಶ್ ವೈದ್ಯಕೀಯ ವಿದ್ಯಾರ್ಥಿ ಅಮೋಘ್ ಮೇಲೆ ಹಲ್ಲೆ ನಡೆಸಿದ್ದಾರೆ.

ಹಲ್ಲೆಗೊಳಗಾದ ವಿದ್ಯಾರ್ಥಿ ಅಮೋಘ್ ವಿಜಯಪುರ ಜಿಲ್ಲೆಯವನಾಗಿದ್ದು, ದಯಾನಂದಸಾಗರ್ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಈತ ಹಾಸ್ಟೆಲ್ ನ ಕಂಪ್ಯೂಟರ್ ರೂಮಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ರಿಲಾಕ್ಸ್ ಆಗಲು ಮೊಬೈಲ್ ನೋಡುವ ವಿಚಾರವಾಗಿ ಯೋಗೀಶ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದನ್ನು ಪ್ರಶ್ನಿಸಿದ ವಿದ್ಯಾರ್ಥಿ ಅಮೋಘ್ ಮೇಲೆ ಹಲ್ಲೆ ಮಾಡಿದ್ದಾರೆನ್ನಲಾಗಿದೆ.

ವಿದ್ಯಾರ್ಥಿಯ ತಾಯಿಯನ್ನು ನಿಂದಿಸಿದ ನಂತರ ಅದನ್ನು ಪ್ರಶ್ನಿಸಿದಾಗ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದು, ಅದನ್ನು ತಡೆಯಲು ಮುಂದಾದ ವಿದ್ಯಾರ್ಥಿಯನ್ನು ನಿನ್ನ ಮೇಲೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ಹೆದರಿದ ಯುವಕ ಹಾಸ್ಟೆಲ್ ತೊರೆದು ಹಿಂದುಳಿದ ವರ್ಗಗಳ ತಾಲೂಕು ಅಧಿಕಾರಿಗೆ ದೂರು ನೀಡಿದ್ದಾನೆ.

ವಿದ್ಯಾರ್ಥಿ ಹಾಸ್ಟೆಲ್ ನಿಯಮ ಮೀರಿದ್ದರಿಂದ ಇಂತಹ ಘಟನೆ ನಡೆದಿದೆ. ವಿದ್ಯಾರ್ಥಿ ಬಳಿ ಮಾತನಾಡಿ ಬೇರೆ ವಸತಿ ನಿಲಯಕ್ಕೆ ವರ್ಗಾವಣೆ ಮಾಡಲಾಗಿದೆ. ಶೀಘ್ರದಲ್ಲಿ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದು ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಬಿಲಾಲ್ ಪ್ರತಿಕ್ರಿಯೆ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''