ಕನ್ನಡಪ್ರಭ ವಾರ್ತೆ ಬಂಗಾರಪೇಟೆ
ಸಮುದಾಯ ಭವನ, ಪುತ್ಥಳಿ
16ನೇ ಶತಮಾನದಲ್ಲಿಯೇ ಜಾತಿವ್ಯವಸ್ಥೆ, ಮೌಢ್ಯದ ವಿರುದ್ಧ ಧ್ವನಿಯೆತ್ತಿ ತಮ್ಮ ಅನೇಕ ಕೀರ್ತನೆಗಳ ಮುಖಾಂತರ ಅರಿವು ಮೂಡಿಸಿದ ಮತ್ತು ಸರ್ವಸ್ವ ವನ್ನು ತ್ಯಾಗ ಮಾಡಿ ಸರಳವಾದ ಜೀವನವನ್ನು ಅಳವಡಿಸಿಕೊಂಡರು ಮಹಾನ್ ಪುರುಷ ಕನಕದಾಸರು. ಪಟ್ಟಣದಲ್ಲಿ ಕುರುಬ ಸಮುದಾಯದ ಭವನ ನಿರ್ಮಾಣ ಮಾಡಲು ಅನುದಾನವನ್ನು ಮಂಜೂರು ಮಾಡುವುದಾಗಿ ಮತ್ತು ಕನಕದಾಸ ಹಾಗು ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ನಿರ್ಮಾಣ ತಗಲುವ ವೆಚ್ಚವನ್ನು ವೈಯಕ್ತಿಕವಾಗಿ ನೀಡುವುದಾಗಿ ಭರವಸೆಯನ್ನು ನೀಡಿದರು.ಈ ಸಂದರ್ಭ ದಲ್ಲಿ ಕುರುಬರ ಸಂಘದ ಅಧ್ಯಕ್ಷ ಎಲ್.ರಾಮಕೃಷ್ಣ, ಸಮಾಜ ಸೇವಕ ಚಿಕ್ಕವಲಗಮಾದಿ ಮುನಿರಾಜು ತಹಸೀಲ್ದಾರ್ ಎಸ್. ವೆಂಕಟೇಶಪ್ಪ, ಇಒ ಎಚ್. ರವಿಕುಮಾರ್, ಬಿಇಒ ಗುರುಮೂರ್ತಿ, ಪುರಸಭೆ ಮುಖ್ಯಾಧಿಕಾರಿ ಸತ್ಯನಾರಾಯಣ. ಪುರಸಭೆ ಅಧ್ಯಕ್ಷ ಎಂ. ಗೋವಿಂದ, ಉಪಾಧ್ಯಕ್ಷ ಚಂದ್ರವೇಣಿ ಮಂಜುನಾಥ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷ ಸಿ. ಅಪ್ಪಯ್ಯಗೌಡ, ಬೂದಿಕೋಟೆ ಬ್ಲಾಕ್ ಕಾಂಗ್ರೆಸ್, ಅಧ್ಯಕ್ಷ ಕೆ.ವಿ. ನಾಗರಾಜ್ ಮತ್ತಿತರರು ಇದ್ದರು.