ಕಣವಿ ವೀರಭದ್ರೇಶ್ವರ ಅದ್ಧೂರಿ ಮಹಾರಥೋತ್ಸವ

KannadaprabhaNewsNetwork |  
Published : Apr 01, 2025, 12:48 AM IST
ಕಣವಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ನಿಮಿತ್ಯಸಹಸ್ರಾರು ಭಕ್ತರ ಮದ್ಯ ಅದ್ದೂರಿಯಾಗಿ ಜರುಗಿದ  ಮಹಾರಥೋತ್ಸವ | Kannada Prabha

ಸಾರಾಂಶ

ಬಾಗಲಕೋಟೆ ನಗರದ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಆವರಣದಲ್ಲಿರುವ ಕಣವಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಭಾನುವಾರ ಸಹಸ್ರಾರು ಭಕ್ತರ ಮಧ್ಯೆ ಮಹಾರಥೋತ್ಸವ ಅದ್ಧೂರಿಯಾಗಿ ಜರುಗಿತು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ನಗರದ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಆವರಣದಲ್ಲಿರುವ ಕಣವಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಭಾನುವಾರ ಸಹಸ್ರಾರು ಭಕ್ತರ ಮಧ್ಯೆ ಮಹಾರಥೋತ್ಸವ ಅದ್ಧೂರಿಯಾಗಿ ಜರುಗಿತು.

ಬೆಳಗಿನ ಜಾವ ಶ್ರೀ ವೀರಭದ್ರೇಶ್ವರ ದೇವರಿಗೆ ಮಹಾರುದ್ರಾಭಿಷೇಕ, ಪುಷ್ಪಾಲಂಕಾರ, ಮಹಾಮಂಗಳಾರತಿ ಮಾಡಲಾಯಿತು ಸಂಜೆ ಸಹಸ್ರಾರು ಭಕ್ತರ ಜಯಘೋಷದ ಮಧ್ಯೆ ಮಹಾರಥೋತ್ಸವ ಜರುಗಿತು. ಬೀಳಗಿ ಕಲ್ಮಠದ ಪೂಜ್ಯರಾದ ಗುರುಪಾದ ಸ್ವಾಮೀಜಿ, ಬಿ.ವಿ.ವಿ.ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ, ಗೌರವ ಕಾರ್ಯದರ್ಶಿ ಮಹೇಶ ಅಥಣಿ, ಸಂಘದ ಸದಸ್ಯರು, ಕಣವಿ ವೀರಭದ್ರೇಶ್ವರ ಟ್ರಸ್ಟ್ ಮತ್ತು ಜಾತ್ರಾ ಕಮಿಟಿ ಸದಸ್ಯರು ಸೇರಿದಂತೆ ನಗರದ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''