ಕನ್ನಡಪ್ರಭ ವಾರ್ತೆ ಕುಶಾಲನಗರ
ಐತಿಹಾಸಿಕ ಹಿನ್ನೆಲೆಯುಳ್ಳ ಈ ದೇವಾಲಯದಲ್ಲಿ ಪ್ರತಿ ವರ್ಷವೂ ಯುಗಾದಿ ಹಬ್ಬ ಕಳೆದು 7 ದಿನಗಳಿಗೆ ಬ್ರಹ್ಮ ರಥೋತ್ಸವ ನಡೆಯುವುದು ಸಂಪ್ರದಾಯ.
ರಥೋತ್ಸವವು ಮಧ್ಯಾಹ್ನ 12.30ಕ್ಕೆ ಜರುಗಲಿದ್ದು, ರಥೋತ್ಸವಕ್ಕೆ ಜಿಲ್ಲೆಯ ಭಕ್ತಾದಿಗಳು ಸೇರಿದಂತೆ ನೆರೆಯ ಹಾಸನ ಮತ್ತು ಮೈಸೂರು ಜಿಲ್ಲೆ ಗಡಿಭಾಗದ ಗ್ರಾಮಗಳಿಂದಲೂ ಅಪಾರ ಭಕ್ತಾದಿಗಳು ಆಗಮಿಸುವ ನಿರೀಕ್ಷೆ ಇದೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ.ಹೆಬ್ಬಾಲೆ ಬಸವೇಶ್ವರ ದೇವಸ್ಥಾನ ಸಮಿತಿ ಕಾಶಿಯಿಂದ ತೀರ್ಥ ತರಿಸಿ ಅದನ್ನು ಅಡ್ಡಪಲ್ಲಕ್ಕಿ ಮೂಲಕ ತಂದು ಕಣಿವೆ ರಾಮಲಿಂಗೇಶ್ವರನಿಗೆ ಪೂಜೆ, ಅಭಿಷೇಕ ಸಲ್ಲಿಸಿದ ನಂತರ ರಥೋತ್ಸವಕ್ಕೆ ಚಾಲನೆ ನೀಡುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬರುತ್ತಿದೆ. ಈ ವಾರ್ಷಿಕ ಜಾತ್ರೆಗೆ ರಾಮಲಿಂಗೇಶ್ವರ ಸ್ವಾಮಿ ದೇವಸ್ಥಾನ ಸಮಿತಿ ಪದಾಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಂಡಿದ್ದಾರೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಕೆ.ಎನ್. ಸುರೇಶ್ ತಿಳಿಸಿದ್ದಾರೆ.
ರಾಮಾಯಣದಲ್ಲಿ ಸೀತೆ ಅಪಹರಣಗೊಂಡ ಸಂದರ್ಭ ಸೀತೆಯನ್ನು ಹುಡುಕಿಕೊಂಡು ಆಂಜನೇಯ ಮತ್ತು ಲಕ್ಷ್ಮಣನೊಂದಿಗೆ ಬಂದ ಶ್ರೀರಾಮ ಇಲ್ಲಿನ ರಮಣೀಯ ದೃಶ್ಯವನ್ನು ನೋಡಿ ಇಲ್ಲಿಯೇ ಕೆಲಕಾಲ ವಿಶ್ರಮಿಸಿ ಮುಂದೆ ಸಾಗಿದರು ಎಂದು ಹೇಳಲಾಗುತ್ತದೆ.
ಈ ಕಾರಣದಿಂದಾಗಿ ಕಣಿವೆ ದೇವಸ್ಥಾನದಲ್ಲಿರುವ ಲಿಂಗವನ್ನು ಮರಳುಲಿಂಗ ಎಂದೇ ಕರೆಯಲಾಗುತ್ತದೆ ಎಂದು ದೇವಾಲಯದ ಪ್ರಧಾನ ಅರ್ಚಕ ಎಚ್.ಆರ್.ರಾಘವೇಂದ್ರ ಆಚಾರ್ ಹೇಳುತ್ತಾರೆ.
ರಾಮಲಿಂಗೇಶ್ವರ ಪ್ರತಿಷ್ಠಾಪನೆಯಾದ ಹಿನ್ನೆಲೆಯಲ್ಲಿ ಈ ಪ್ರದೇಶಕ್ಕೆ ಶ್ರೀರಾಂಪುರ ಎಂದು ಕರೆಯಲಾಗುತ್ತದೆ.