ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ನಗರದ ಕನ್ನಡ ಭವನವನ್ನು 17.83 ಕೋಟಿ ರು.ಗಳ ವೆಚ್ಚದಲ್ಲಿ ಕರ್ನಾಟಕ ಗೃಹಮಂಡಳಿ ವತಿಯಿಂದ ನಿರ್ಮಾಣ ಮಾಡಲಾಗಿದೆ. ಭವನ ನಿರ್ಮಣ ಮಾಡುವ ಸಂದರ್ಭದಲ್ಲಿ ಹಣದ ಕೊರತೆ ಎದುರಾದಾಗ ಜಿಲ್ಲಾ ಉಸ್ತುವಾರಿ ಸಚಿವರು ಹೆಚ್ಚುವರಿ ಅನುದಾನ ತರಲು ಶ್ರಮಿಸಿದ ಫಲವಾಗಿ ಪ್ರಸ್ತುತ ಉದ್ಘಾಟನೆ ಮಾಡಲು ಸಾಧ್ಯವಾಗಿದೆ ಎಂದರು.
ಸಮ್ಮೇಳನವನ್ನು ಶಿಷ್ಟಾಚಾರದಂತೆ ಜಿಲ್ಲೆಯ ಜನಪ್ರತಿನಿಧಿಗಳಿಗೆ, ಗಣ್ಯ ವ್ಯಕ್ತಿಗಳಿಗೆ, ಹಿರಿಯ ಅಧಿಕಾರಿಗಳಿಗೆ, ಕನ್ನಡ ಪರ ಸಂಘಗಳು ಹಾಗೂ ಇತರೆ ಸರ್ಕಾರೇತರ ಸಂಘ, ಸಂಸ್ಥೆ ಗಳ ಸದಸ್ಯರು, ಪದಾಧಿಕಾರಿಗಳಿಗೆ, ಸಾರ್ವಜನಿಕರಿಗೆ ಆಹ್ವಾನ ನೀಡಬೇಕು ಆ ನಿಟ್ಟಿನಲ್ಲಿ ಅಧಿಕಾರಿಗಳು ನಿಗಾ ವಹಿಸಬೇಕು.ಎಲ್ಲಾ ಕನ್ನಡಪರ ಸಂಘಟನೆಗಳು, ಸಾರ್ವಜನಿಕ ರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಈ ವೇಳೆ ಮನವಿ ಮಾಡಿದರು.ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ
ಸರ್ಕಾರಿ ಕಟ್ಟಡಗಳಿಗೆ ದೀಪಾಲಂಕಾರ
ಸರ್ಕಾರಿ ಭವನಗಳಿಗೆ ಹಾಗೂ ಕಟ್ಟಡಗಳಿಗೆ ದೀಪಾಲಂಕಾರ ಮಾಡಬೇಕು. ಆರೋಗ್ಯ ಇಲಾಖೆ ವತಿಯಿಂದ ಆಂಬುಲೆನ್ಸ್ ಸೌಲಭ್ಯ, ಎಲ್ಲಾ ಅಂಗಡಿ ಮಳಿಗೆಗಳ ಮೇಲೆ ಕನ್ನಡ ಧ್ವಜರೋಹಣೆ ಆಗಬೇಕು. ನಗರವನ್ನು ಸ್ವಚ್ಛಗೊಳಿಸಲು ಹಾಗೂ ಫ್ಲೆಕ್ಸ್, ಬ್ಯಾನರ್ ಹಾಕಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಕುಡಿಯುವ ನೀರು ವಿತರಿಸಲು ಹಾಗೂ ಮೂಲಭೂತ ಸೌಕರ್ಯ ಕಲ್ಪಿಸಲು ಅಧಿಕಾರಿಗಳಿಗೆ ತಿಳಿಸಿದರು. ಈ ಸಭೆಯಲ್ಲಿ ಜಿಪಂ ಸಿಇಒ ಪ್ರಕಾಶ್ ಜಿ.ಟಿ ನಿಟ್ಟಾಲಿ, ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಕನ್ನಡ ಮತ್ತು ಸಂಸ್ಕೃತಿಯ ಸಹಾಯಕ ನಿರ್ದೇಶಕ ಡಿ.ಎಂ ರವಿಕುಮಾರ್, ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾ ಅಧ್ಯಕ್ಷ ಪ್ರೊ.ಕೊಡಿರಂಗಪ್ಪ, ಜಿಲ್ಲಾ ಕಾರ್ಯದರ್ಶಿ ಅಮೃತ್ ಕುಮಾರ್, ಕೋಶಾಧ್ಯಕ್ಷ ಮಲ್ಲಿಕಾರ್ಜುನ್, ಕಸಾಪ ತಾಲೂಕು ಅಧ್ಯಕ್ಷ ಯಲುವಳ್ಳಿ ಸೊಣ್ಣೆಗೌಡ, ಜಿಲ್ಲಾ ಜಂಟಿ ಕಾರ್ಯದರ್ಶಿ ಮಂಚನಬೆಲೆ ಶ್ರೀನಿವಾಸ್, ಕಾಸಪ ಸದಸ್ಯರು, ಪದಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.