ಕನ್ನಡ ನಾಡು-ನುಡಿ ರಕ್ಷಣೆಗಾಗಿ ಕನ್ನಡ ದೀಕ್ಷಾ ಕಾರ್ಯಕ್ರಮ

KannadaprabhaNewsNetwork |  
Published : Jan 05, 2026, 01:45 AM IST
೦೪ ಜೆಎಲ್ಆರ್ ೦೧ ) ಜಗಳೂರು ಪಟ್ಟಣದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕನ್ನಡ ದೀಕ್ಷೆ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಕರವೇ ಜಿಲ್ಲಾಧ್ಯಕ್ಷ  ರಾಮೇಗೌಡ್ರು ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಿದರು. | Kannada Prabha

ಸಾರಾಂಶ

ಕನ್ನಡ ನಾಡು, ನುಡಿ, ಗಡಿ, ಜಲ ರಕ್ಷಣೆಗೆ ಕಂಕಣಬದ್ಧರಾಗಿರುವ ೭೮ ಲಕ್ಷದಷ್ಟು ಕಾರ್ಯಕರ್ತರಿದ್ದು, ಕರ್ನಾಟಕ ರಕ್ಷಣಾ ವೇದಿಕೆ ಮೇಲೆ ನಂಬಿಕೆ ಇಟ್ಟಿದ್ದಾರೆ. ಕನ್ನಡದ ನಾಡು, ನುಡಿ, ಜಲ, ನೆಲದ ವಿಚಾರದಲ್ಲಿ ಧಕ್ಕೆಯಾದರೆ ಅದಕ್ಕೆ ಸರಿಯಾದ ಉತ್ತರ ಕೊಡುವವರು ಕಾರ್ಯಕರ್ತರು ಮಾತ್ರ. ಆದ್ದರಿಂದ ಸಂಘಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಸೇರಬೇಕು. ಇದಕ್ಕಾಗಿ ಕನ್ನಡದ ದೀಕ್ಷಾ ಕಾರ್ಯಕ್ರಮ ಆರಂಭಿಸುತ್ತಿದ್ದೇವೆ ಎಂದು ಕರವೇ ಜಿಲ್ಲಾಧ್ಯಕ್ಷ ರಾಮೇಗೌಡ ಹೇಳಿದ್ದಾರೆ.

- ಜಿಲ್ಲಾಮಟ್ಟದ ಪೂರ್ವಭಾವಿ ಸಭೆಯಲ್ಲಿ ಕರವೇ ಜಿಲ್ಲಾಧ್ಯಕ್ಷ ರಾಮೇಗೌಡ ಮಾಹಿತಿ - - -

ಕನ್ನಡಪ್ರಭ ವಾರ್ತೆ ಜಗಳೂರು

ಕನ್ನಡ ನಾಡು, ನುಡಿ, ಗಡಿ, ಜಲ ರಕ್ಷಣೆಗೆ ಕಂಕಣಬದ್ಧರಾಗಿರುವ ೭೮ ಲಕ್ಷದಷ್ಟು ಕಾರ್ಯಕರ್ತರಿದ್ದು, ಕರ್ನಾಟಕ ರಕ್ಷಣಾ ವೇದಿಕೆ ಮೇಲೆ ನಂಬಿಕೆ ಇಟ್ಟಿದ್ದಾರೆ. ಕನ್ನಡದ ನಾಡು, ನುಡಿ, ಜಲ, ನೆಲದ ವಿಚಾರದಲ್ಲಿ ಧಕ್ಕೆಯಾದರೆ ಅದಕ್ಕೆ ಸರಿಯಾದ ಉತ್ತರ ಕೊಡುವವರು ಕಾರ್ಯಕರ್ತರು ಮಾತ್ರ. ಆದ್ದರಿಂದ ಸಂಘಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಸೇರಬೇಕು. ಇದಕ್ಕಾಗಿ ಕನ್ನಡದ ದೀಕ್ಷಾ ಕಾರ್ಯಕ್ರಮ ಆರಂಭಿಸುತ್ತಿದ್ದೇವೆ ಎಂದು ಕರವೇ ಜಿಲ್ಲಾಧ್ಯಕ್ಷ ರಾಮೇಗೌಡ ಹೇಳಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಕನ್ನಡ ದೀಕ್ಷೆ ಕಾರ್ಯಕ್ರಮ ಪೂರ್ವಭಾವಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಜಗಳೂರು ತಾಲೂಕಿಗೆ ಇಮಾಂ ಸಾಹೇಬರ ಅಸ್ಮಿತೆಯ ಬಹಳ ಇದೆ. ಜಿಲ್ಲಾಮಟ್ಟದಲ್ಲಿ ಕನ್ನಡ ದೀಕ್ಷೆ ಕಾರ್ಯಕ್ರಮವನ್ನು ಫೆಬ್ರವರಿ ಕೊನೆಯ ವಾರದಲ್ಲಿ ಮಾಡಲಾಗುತ್ತದೆ. ಈ ನೆಲದ ಯುವಕರಿಗೆ ಕನ್ನಡದ ಹೋರಾಟದಲ್ಲಿ ಪಾಲ್ಗೊಳ್ಳಲು ಪ್ರೇರೇಪಿಸುವುದು ಕನ್ನಡದ ದೀಕ್ಷೆ ಕೊಡುವ ಕಾರ್ಯಕ್ರಮ ಉದ್ದೇಶ ಎಂದರು.

ಎಲ್ಲ ಗ್ರಾಮ ಘಟಕಗಳನ್ನು ಕಟ್ಟಿ ಸಂಘಟನೆ ಬೆಳೆಸಬೇಕು. ಸಂಘಟನೆಯಲ್ಲಿ ಉತ್ತಮ ಕೆಲಸ ಮಾಡಿದರೆ ಬೆನ್ನು ತಟ್ಟುತ್ತೇವೆ. ಇಲ್ಲವಾದರೆ ಕಿವಿ ಹಿಂಡುತ್ತೇವೆ. ಜಗಳೂರು ಘಟಕ ಕಡೆಯಿಂದ ಉತ್ತಮ ಸಂಘಟನೆಯನ್ನು ಮಾಡಿ ಗಟ್ಟಿಯಾಗಿ ನಿಲ್ಲಬೇಕು. ಆಗ ಎಲ್ಲ ಕಾರ್ಯಕ್ರಮಗಳಿಗೆ ಅರ್ಥ ಬರುತ್ತದೆ. ಮುಂದಿನ ದಿನಗಳಲ್ಲಿ ಜಗಳೂರನ್ನು ಕರವೇ ಶಕ್ತಿಕೇಂದ್ರ ಎಂಬಂತೆ ಸಂಘಟಿಸಬೇಕಾಗಿದೆ ಎಂದರು.

ಕರವೇ ತಾಲೂಕು ಅಧ್ಯಕ್ಷ ಮಹಾಂತೇಶ್ ಮಾತನಾಡಿ, ಕನ್ನಡ ದೀಕ್ಷಾ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಕರೆತರಲಾಗುವುದು. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿಯೇ ಜಗಳೂರು ಹೆಚ್ಚಿನ ಕಾರ್ಯಕರ್ತರನ್ನು ಹುಟ್ಟು ಹಾಕುವ ಕೆಲಸವನ್ನು ಮಾಡಲಾಗುವುದು ಎಂದರು.

ಜಿಲ್ಲಾ ಸಂಚಾಲಕ ಲುಕ್ಮಾನ್ ಮಾತನಾಡಿ, ಕರವೇ ಸಂಘಟನೆ ಇಲ್ಲದಿದ್ದರೆ ಕನ್ನಡ ಉಳಿಯುತ್ತಿರಲಿಲ್ಲ. ೨೨೪ ಕ್ಷೇತ್ರಗಳಲ್ಲಿ ನಮ್ಮ ಸಂಘಟನೆಗಳು ಇವೆ. ಯಾವುದೇ ಜಾತಿಭೇದ ಇಲ್ಲದೇ ಕನ್ನಡದ ಹೋರಾಟಕ್ಕೆ ಕನ್ನಡದ ಉಳಿವಿಗಾಗಿ ಹೋರಾಟ ಮಾಡುತ್ತಿದ್ದಾರೆ. ಯಾವುದೇ ಸಮಸ್ಯೆಗಳು ಬರಲಿ, ಗಟ್ಟಿತನದಿಂದ ನಮ್ಮ ಕಾರ್ಯಕರ್ತರು ಹೋರಾಟ ಮಾಡುತ್ತಾರೆ ಎಂದು ತಿಳಿಸಿದರು.

ಕರವೇ ನೂತನ ಪದಾಧಿಕಾರಿಗಳ ಆಯ್ಕೆಗೊಳಿಸಿ, ಸನ್ಮಾನಿಸಲಾಯಿತು. ಕಾನೂನು ಸಲಹೆಗಾರ ಓಬಳೇಶ್ , ಜಿಲ್ಲಾ ಯುವ ಘಟಕ ಅಧ್ಯಕ್ಷ ಗೋಪಾಲ್ ದೇವರ ಮನೆ, ಪಿಂಜಾರ್ ಸಂಘದ ಅಧ್ಯಕ್ಷರಾದ ಪರ್ವೀಜ್, ಮಹಿಳಾ ಘಟಕದ ಅಧ್ಯಕ್ಷರಾದ ಶಾಹೀನ ಬೇಗಂ, ಗೌರವ ಅಧ್ಯಕ್ಷರಾದ ಸುರೇಶ್ ಸಂಗೋಳ್ಳಿ, ಉಪಾಧ್ಯಕ್ಷರಾದ ಹಫೀಸ್, ಕೆ.ಎಂ. ಜಗದೀಶ್, ಮುನ್ನ, ಜಿಲ್ಲಾ ಕಾರ್ಯದರ್ಶಿ ಕರಿಬಸವರಾಜ, ಕಾರ್ಯದರ್ಶಿ ಹರ್ಷ, ಮಂಜುಳಾ, ಫರ್ ಬನ್, ಚಂಪಾವತಿ, ಲಕ್ಷ್ಮೀ, ಲಿಂಗರಾಜ್, ಶಿವಾಜಿ, ಗಿರೀಶ್, ಸ್ವಾಮಿ, ರಕೀಬ್, ವಾಸಿಂ, ತಾಲೂಕು ಘಟಕ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಗ್ರಾಮ ಪದಾಧಿಕಾರಿಗಳು, ಮಹಿಳಾ ಪದಾಧಿಕಾರಿಗಳು ಹಾಜರಿದ್ದರು.

- - -

(ಕೋಟ್‌) ಕರವೇ ಸಂಘಟನೆಯಲ್ಲಿ ಇರುವರು ಎಲ್ಲರೂ ನಮ್ಮ ಕುಟುಂಬದ ಸದಸ್ಯರು. ಕುಟುಂಬಗಳಲ್ಲೂ ಮಹಿಳೆಯರ ಕೆಲಸಗಳು ಇರುತ್ತವೆ. ಇಂತಹ ಕಾರ್ಯಕ್ರಮಗಳಿಗೆ ಬಂದಾಗ ಸಮಯ ನೀಡಬೇಕಾಗುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಕಾರ್ಯಕ್ರಮಕ್ಕೆ ಬರಬೇಕು.

- ಬಸಮ್ಮ, ಜಿಲ್ಲಾಧ್ಯಕ್ಷೆ. ಕರವೇ.

- - -

-೦೪ಜೆಎಲ್ಆರ್೦೧: ಜಿಲ್ಲಾಮಟ್ಟದ ಕನ್ನಡ ದೀಕ್ಷೆ ಕಾರ್ಯಕ್ರಮ ಪೂರ್ವಭಾವಿ ಸಭೆಯನ್ನು ಕರವೇ ಜಿಲ್ಲಾಧ್ಯಕ್ಷ ರಾಮೇಗೌಡ ಅವರು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೀರ್ಘಾವಧಿ ಸಿಎಂ ಸಂಭ್ರಮಕ್ಕೆ ಗೃಹಲಕ್ಷ್ಮಿ ಹಣ ನೀಡಿದ ಮಹಿಳೆ!
4 ಜಿಲ್ಲೆಗಳಲ್ಲಿ 13 ಸಾವಿರ ಕೇಸ್‌ ಬಾಕಿ : ಸಚಿವ ತರಾಟೆ