ಗಡಿ ಭಾಗದಲ್ಲಿ ಕನ್ನಡ ಶಿಕ್ಷಣ ಶ್ಲಾಘನೀಯ: ಶಾಸಕ ಯಶವಂತರಾಯಗೌಡ

KannadaprabhaNewsNetwork |  
Published : Mar 08, 2024, 01:49 AM IST
5ಐಎನ್‌ಡಿ4 ಇಂಡಿ ರೈಲು ನಿಲ್ದಾಣದಲ್ಲಿರುವ ಜ್ಞಾನಗಂಗೋತ್ರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಶಾಸಕ ಯಶವಂತರಾಯಗೌಡ ಪಾಟೀಲ ಉದ್ಘಾಟಿಸಿ ಮಾತನಾಡಿದರು. | Kannada Prabha

ಸಾರಾಂಶ

ಇಂಡಿ: ಇಂಡಿ ಕರ್ನಾಟಕ-ಮಹಾರಾಷ್ಟ್ರಗಡಿ ಭಾಗದಲ್ಲಿ ಕನ್ನಡದಲ್ಲಿ ಶಿಕ್ಷಣ ನೀಡುವ ಮೂಲಕ ಕನ್ನಡ ನಾಡಿನ ಹಿರಿಮೆ ಗರಿಮೆ ಶ್ರೀಮಂತಗೊಳಿಸುತ್ತಿರುವ ಶೈಕ್ಷಣಿಕ ಸಂಸ್ಥೆಗಳ ಕಾರ್ಯ ಶ್ಲಾಘನೀಯವಾಗಿದ್ದು, ಕ್ಷೇತ್ರ ಶೈಕ್ಷಣಿಕವಾಗಿ ಪ್ರಗತಿ ಕಾಣುತ್ತಿರುವುದು ಸಂತಸ ತಂದಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಮೆಚ್ಚುಗೆ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಇಂಡಿ

ಇಂಡಿ ಕರ್ನಾಟಕ-ಮಹಾರಾಷ್ಟ್ರಗಡಿ ಭಾಗದಲ್ಲಿ ಕನ್ನಡದಲ್ಲಿ ಶಿಕ್ಷಣ ನೀಡುವ ಮೂಲಕ ಕನ್ನಡ ನಾಡಿನ ಹಿರಿಮೆ ಗರಿಮೆ ಶ್ರೀಮಂತಗೊಳಿಸುತ್ತಿರುವ ಶೈಕ್ಷಣಿಕ ಸಂಸ್ಥೆಗಳ ಕಾರ್ಯ ಶ್ಲಾಘನೀಯವಾಗಿದ್ದು, ಕ್ಷೇತ್ರ ಶೈಕ್ಷಣಿಕವಾಗಿ ಪ್ರಗತಿ ಕಾಣುತ್ತಿರುವುದು ಸಂತಸ ತಂದಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಮೆಚ್ಚುಗೆ ವ್ಯಕ್ತಪಡಿಸಿದರು.

ಪಟ್ಟಣದ ಜ್ಞಾನಗಂಗೋತ್ರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೊತ್ಸವದಲ್ಲಿ ಭಾಗವಹಿಸಿ ಮಾತನಾಡಿದರು. ಈ ಕ್ಷೇತ್ರದಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ಸಾಕಷ್ಟು ಪ್ರಮಾಣಿಕ ಪ್ರಯತ್ನ ಮಾಡಿದ್ದೇನೆ. ಶಿಕ್ಷಣದಿಂದ ಏನೇಲ್ಲ ಬದಲಾವಣೆ ಮಾಡಬಹುದು ಎಂಬ ಉದ್ದೇಶದಿಂದ ಶೈಕ್ಷಣಿಕ ಬೆಳವಣಿಗೆಯ ವಾತಾವರಣ ನಿರ್ಮಾಣ ಮಾಡಿದ್ದೇನೆ ಎಂದರು.

ಕಸಾಪ ತಾಲೂಕಾಧ್ಯಕ್ಷ ರಾಘವೇಂದ್ರ ಕುಲಕರ್ಣಿ, ಅರಣ್ಯಾಧಿಕಾರಿ ಧನರಾಜ ಮುಜಗೊಂಡ ಮಾತನಾಡಿ, ಕೋವಿಡ್ ನಿಂದಾಗಿ ಇಲ್ಲಿಯವರೆಗೆ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳು ಕಷ್ಟದಲ್ಲದ್ದು, ಜನಪ್ರತಿನಿಧಿಗಳು, ಪಾಲಕರು, ದಾನಿಗಳು ಶಾಲೆಗೆ ಸಹಕಾರ ನೀಡುವಂತೆ ಮನವಿ ಮಾಡಿದರು.

ತಡವಲಗಾ ಮಠದ ಅಭಿನವ ರಾಚೋಟೇಶ್ವರ ಶ್ರೀ, ಎಸಿ ಅಬೀದ ಗದ್ಯಾಳ, ಡೈಯಟ್ ಉಪನ್ಯಾಸಕ ಎ.ಆರ್ ಮುಜಾವರ, ಚಿಕ್ಕಬೇವನೂರ ಗ್ರಾಪಂ ಅಧ್ಯಕ್ಷ ಸುನೀಲ ಚವ್ಹಾಣ, ಪತ್ರಕರ್ತ ಶರಣಬಸಪ್ಪ ಕಾಂಬಳೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾವೀದ ಮೋಮಿನ, ಜಟ್ಟಪ್ಪ ರವಳಿ,ಮುಖಂಡರಾದ ಯಶವಂತ ಕಾಡೆಗೋಳ,ಜಿ.ಎನ್‌.ಘೋರ್ಪಡೆ, ಭೀಮಣ್ಣಾ ಕೌಲಗಿ, ಇಲಿಯಾಸ ಬೋರಾಮಣಿ, ಯುಕೆಪಿ ಎಇಇ ಶ್ರೀಮಂತ ಅಂಗಡಿ, ಎಂ.ಡಿ.ಶೇಖ್, ದಾದಾ ಶ್ಯಾಮನವರ, ಚನ್ನಪ್ಪ ದೇಸಾಯಿ, ಎನ್.ಬಿ.ಶ್ಯಾಮನವರ, ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಜಿ.ಎನ್.ಘೋರ್ಪಡೆ, ಮುಖ್ಯ ಗುರುಗಳು, ಶಿಕ್ಷಕರು ಹಾಗೂ ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡಿಗರ ಆಕ್ರೋಶ : ರೈಲ್ವೆ ಪರೀಕ್ಷೆ ಮುಂದಕ್ಕೆ
ಎತ್ತಿನಹೊಳೆ ಯೋಜನೆಗೆ ಅರಣ್ಯ ಪ್ರದೇಶ ಬಳಕೆ : ಕೇಂದ್ರ ಷರತ್ತಿನ ಅಸ್ತು