ಕನ್ನಡಪ್ರಭ ವಾರ್ತೆ ವಿರಾಜಪೇಟೆ
ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ನಡೆದ 69ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಎನ್. ಎಸ್. ಎಸ್ ಘಟಕದ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ಕನ್ನಡ ಹಲವು ಭಾಷೆಗಳೊಂದಿಗೆ ಒಡಮೂಡಿ ಬಂದಂತಹ ಸುಂದರ ಭಾಷೆಯಾಗಿದೆ. ಜಗತ್ತಿನಲ್ಲಿ ಮಾತನಾಡಿದಂತೆ ಬರೆಯುವ, ಬರೆದಂತೆ ಓದುವ , ಓದಿದಂತೆ ಮಾತನಾಡುವ ಭಾಷೆ ಎಂದರೆ ಕನ್ನಡ ಮಾತ್ರ ಎಂದರು.
ಹತ್ತನೇ ಶತಮಾನದಿಂದ ಇಂದಿನವರೆಗೆ ವಿವಿಧ ಸಾಹಿತ್ಯ ಪ್ರಕಾರಗಳ ಮೂಲಕ ಸಾಹಿತ್ಯ ಬೆಳೆದು ಬಂದ ಜಗತ್ತಿನ ಶ್ರೇಷ್ಠ ಭಾಷೆ ಕನ್ನಡ ಎಂಬ ಹೆಮ್ಮೆ ನಮ್ಮೆಲ್ಲರಲ್ಲಿ ಇರಬೇಕೆಂದರು.ರಾಷ್ಟ್ರೀಯ ಸೇವಾ ಯೋಜನೆ ಸಮಾಜದಲ್ಲಿ ನಮ್ಮ ಪಾತ್ರವೇನು, ವ್ಯಕ್ತಿಯಲ್ಲಿ ಇರಬೇಕಾದಂತಹ ಸೇವಾ ಮನೋಭಾವ ಹಾಗೂ ಭವಿಷ್ಯದ ಉತ್ತಮ ಸಮಾಜದ ನಿರ್ಮಾಣದ ಪರಿಕಲ್ಪನೆಯನ್ನು ನಮ್ಮಲ್ಲಿ ತುಂಬುವಂತಹ ಜಾಗೃತಿಯೊಂದಿಗೆ ಸಮಾಜಕ್ಕೆ ಯುವ ಸಮೂಹ ಏನು ಕೊಡುಗೆಯನ್ನು ಕೊಡಬೇಕು ಎಂಬ ಧನಾತ್ಮಕ ಜೀವನ ಶೈಲಿಯನ್ನು ಕಲಿಸುತ್ತದೆ ಎಂದರು.
ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾಲೇಜಿನ ಉಪ ಪ್ರಾಂಶುಪಾಲ ಡಾ. ವೀಣಾ, ಐಕ್ಯೂಎಸಿ ಸಂಚಾಲಕಿ ಪ್ರಿಯ, ವಿದ್ಯಾರ್ಥಿ ಕ್ಷೇಮ ಪಾಲನ ಸಮಿತಿ ಸಂಚಾಲಕ ನಾಗರಾಜು, ಕನ್ನಡ ವಿಭಾಗ ಮುಖ್ಯಸ್ಥ ಸುನಿಲ್ ಕುಮಾರ್ ಇದ್ದರು.