10ರಂದು ಚಿತ್ರದುರ್ಗದಲ್ಲಿ ಕನ್ನಡದ ಹಬ್ಬ

KannadaprabhaNewsNetwork |  
Published : Mar 09, 2024, 01:30 AM IST
ಚಿತ್ರದುರ್ಗ ಎರಡನೇ ಪುಟದ ಟಿಂಟ್ ಬಾಟಂ  | Kannada Prabha

ಸಾರಾಂಶ

ಕರುನಾಡ ವಿಜಯಸೇನೆಯಿಂದ ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಮಾ.10ರಂದು ಸಂಜೆ 5.40ಕ್ಕೆ ಕನ್ನಡ ಹಬ್ಬ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ

ಚಿತ್ರದುರ್ಗ: ಕರುನಾಡ ವಿಜಯಸೇನೆಯಿಂದ ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಮಾ.10ರಂದು ಸಂಜೆ 5.40ಕ್ಕೆ ಕನ್ನಡ ಹಬ್ಬ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖ್ಯಾತ ಜನಪದ ಗಾಯಕ ಡಾ.ಮಹದೇವಸ್ವಾಮಿ ಮಳವಳ್ಳಿ ಇವರಿಗೆ ರಾಜಾವೀರ ಮದಕರಿ ನಾಯಕ ಪ್ರಶಸ್ತಿ, ಲೇಖಕಿ ಬಾ.ಹ ರಮಾಕುಮಾರಿ ಇವರಿಗೆ ಒನಕೆ ಓಬವ್ವ ಪ್ರಶಸ್ತಿ ಹಾಗೂ 20 ಸಾವಿರ ರು. ನಗದು ನೀಡಿ ಗೌರವಿಸಲಾಗುವುದು. ಸರಿಗಮಪ ಖ್ಯಾತಿ ಗಾಯಕರು ಹಾಗೂ ಗಿಚ್ಚಿಗಿಲಿಗಿಲಿ ತಂಡದಿಂದ ಮನೋರಂಜನಾ ಕಾರ್ಯಕ್ರಮವಿರುತ್ತದೆ.

ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಯವರಿಗೆ ಕೋಟೆ ನಾಡಿನ ರಾಜಕೀಯ ಭೀಷ್ಮ, ಡಿಡಿಪಿಐ ಕೆ.ರವಿಶಂಕರ ರೆಡ್ಡಿಗೆ ಕೋಟೆನಾಡಿನ ಶಿಕ್ಷಣ ಕ್ರಾಂತಿಕಾರಿ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪನವರಿಗೆ ಕೋಟೆ ನಾಡಿನ ರಾಜಕೀಯ ಸುಪುತ್ರ ಬಿರುದು ನೀಡಿ ಸನ್ಮಾನಿಸಲಾಗುವುದು. ಇದಲ್ಲದೆ ಸಮಾಜದ ಕೊಳೆ ತೊಳೆಯುವವರು, ಪಾದರಕ್ಷೆ ಹೊಲಿಯುವವರು, ಕ್ಷೌರಿಕರು, ಅನಾಥ ಶವಗಳನ್ನು ಸಂಸ್ಕಾರ ಮಾಡುವವರು, ಬಟ್ಟೆ ಇಸ್ತ್ರಿ ಮಾಡುವವರು, ಪೌರ ಕಾರ್ಮಿಕರು, ಆಸ್ಪತ್ರೆಗಳಲ್ಲಿ ಶವದ ಪೋಸ್ಟ್ ಮಾರ್ಟಂ ನಡೆಸುವವರನ್ನು ಗುರುತಿಸಿ ಗೌರವಿಸಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕನ್ನಡದ ಹಬ್ಬವನ್ನು ಸವಿಯುವಂತೆ ಕೆ.ಟಿ.ಶಿವಕುಮಾರ್ ವಿನಂತಿಸಿದರು.

ಕರುನಾಡ ವಿಜಯಸೇನೆ ಮಹಿಳಾ ಘಟಕದ ಅಧ್ಯಕ್ಷೆ ವೀಣಗೌರಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಕಾರ್ಯದರ್ಶಿ ಅಣ್ಣಪ್ಪ, ನಿಸಾರ್ ಅಹಮದ್, ಉಪಾಧ್ಯಕ್ಷೆ ರತ್ನಮ್ಮ, ಪ್ರದೀಪ್, ಜಗದೀಶ್ ಪಿ. ಸುರೇಶ್, ವಿದ್ಯಾರ್ಥಿ ಘಟಕದ ಅಖಿಲೇಶ್, ಮಣಿಕಂಠ, ಹರೀಶ್ ಕುಮಾರ್, ಸಂತೋಷ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ