ಕನ್ನಡಪ್ರಭ ವಾರ್ತೆ ನಾಗಮಂಗಲ
ಪಟ್ಟಣದ ಶ್ರೀ ಸೌಮ್ಯಕೇಶವಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ತಾಲೂಕು ಆಡಳಿತದ ವತಿಯಿಂದ ಶನಿವಾರ ಆಯೋಜಿಸಿದ್ದ 70ನೇ ಕನ್ನಡ ರಾಜ್ಯೋತ್ಸವದಲ್ಲಿ ರಾಷ್ಟ್ರ ಹಾಗೂ ನಾಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಕಲೆ, ಸಾಂಸ್ಕೃತಿಕ, ಸಾಮಾಜಿಕ ಹಾಗೂ ವಾಸ್ತು ಶಿಲ್ಪಕ್ಕೆ ಖ್ಯಾತಿಯಾಗಿರುವ ಕರ್ನಾಟಕದ ಇತಿಹಾಸದಲ್ಲಿ ಮೌರ್ಯರು, ಕದಂಬರು, ಗಂಗರು, ಚಾಲುಕ್ಯರು, ವಿಜಯನಗರದ ಅರಸರು ಸೇರಿದಂತೆ ಅನೇಕ ರಾಜಮನೆತನದವರು ಆಳ್ವಿಕೆ ನಡೆಸಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಎಂದರು.ಬಸವಣ್ಣ, ಪುರಂದರ ದಾಸರು, ಕನಕದಾಸರು, ರನ್ನ, ಪೊನ್ನ, ಪಂಪ, ಕುವೆಂಪು ಸೇರಿ ಅನೇಕ ಮಹಾನ್ ಕವಿಗಳು, ಸಾಹಿತಿಗಳು ರಚಿಸಿರುವ ಸಾಹಿತ್ಯದಿಂದಾಗಿ ಕನ್ನಡ ಭಾಷೆಗೆ ೮ ಜ್ಞಾನಪೀಠ ಪ್ರಶಸ್ತಿಗಳು ಹಾಗೂ ಶಾಸ್ತ್ರೀಯ ಸ್ಥಾನಮಾನವೂ ಸಿಕ್ಕಿದೆ ಎಂದು ತಿಳಿಸಿದರು.
ಸಮಾರಂಭದಲ್ಲಿ ಅಂತಾರಾಷ್ಟ್ರೀಯ ಜಾನಪದ ಕಲಾವಿದೆ ತೊಳಲಿ ಗ್ರಾಮದ ಚೈತ್ರ ಶಿವನಾಗ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 10 ಮಂದಿ ಸಾಧಕರನ್ನು ತಾಲೂಕು ಆಡಳಿತದ ವತಿಯಿಂದ ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಪುರಸಭೆ ಅಧ್ಯಕ್ಷ ಅಲಿ ಅನ್ಸರ್ ಪಾಷಾ, ಉಪಾಧ್ಯಕ್ಷೆ ವಸಂತಲಕ್ಷ್ಮೀ, ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜೆ.ವೈ.ಮಂಜುನಾಥ್, ತಾಪಂ ಇಒ ಬಿ.ಕೆ.ಸತೀಶ್, ಡಿವೈಎಸ್ ಪಿ ಬಿ.ಚಲುವರಾಜು, ಬಿಇಒ ಲೋಕೇಶ್, ಬಿಆರ್ಪಿ ಕೆ.ರವೀಶ್, ಸಿಡಿಪಿಒ ಕೃಷ್ಣಮೂರ್ತಿ, ಸಹಾಯಕ ಕೃಷಿ ನಿರ್ದೇಶಕ ಆರ್.ಹರೀಶ್, ಅಗ್ನಿಶಾಮಕ ಠಾಣಾಧಿಕಾರಿ ಮಂಜುನಾಥ್, ತಾಲೂಕು ಕಸಾಪ ಅಧ್ಯಕ್ಷ ಸಿ.ಆರ್.ಚಂದ್ರಶೇಖರ್, ಬಗರ್ಹುಕುಂ ಸಾಗುವಳಿ ಸಮಿತಿ ಸದಸ್ಯ ಎಂ.ನಾಗರಾಜಯ್ಯ ಸೇರಿದಂತೆ ಹಲವರು ಇದ್ದರು.