ಕನ್ನಡಪ್ರಭ ವಾರ್ತೆ ಯಳಂದೂರು
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಬೆಂಗಳೂರಿನಂತಹ ಮಹಾನಗರದಲ್ಲಿ ಕನ್ನಡ ಭಾಷೆ ಮಾತನಾಡುವರ ಸಂಖ್ಯೆ ಕಡಿಮೆಯಾಗುತ್ತಿದೆ. ನಾವು ಕನ್ನಡದಲ್ಲೇ ವ್ಯವಹರಿಸುವ ಪರಿಪಾಠವನ್ನು ಬೆಳೆಸಿಕೊಳ್ಳಬೇಕು. ಭಾಷೆಯ ಬಗ್ಗೆ ಅಭಿಮಾನವನ್ನು ಮೂಡಿಸಿಕೊಳ್ಳಬೇಕು ಎಂದರು. ನಮ್ಮ ಜಿಲ್ಲೆಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಪುಟ್ಟೀರಮ್ಮ ಹಾಗೂ ಸುವರ್ಣ ಮಹೋತ್ಸವ ಸಾಧಕ ಪ್ರಶಸ್ತಿಗೆ ಎಂ.ಪಿ. ರಾಜು ಹಾಗೂ ಪ್ರೇಮಲತಾ ಪುಟ್ಟಸ್ವಾಮಿ ಎಂಬ ಮೂವರು ಆಯ್ಕೆಯಾಗಿರುವುದು ಅತೀವ ಸಂತಸ ತಂದಿದ್ದು ಇವರಿಗೆ ನಾನು ಅಭಿನಂದಿಸುತ್ತೇನೆ ಎಂದರು.ಗ್ರಾಮೀಣ ಭಾಗದಲ್ಲಿ ಸಿಎಸ್ಆರ್ ಫಂಡ್ನಿಂದ ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಹೊಂಗನೂರು, ಕೆಸ್ತೂರು, ಕುದೇರು ಗ್ರಾಮಗಳಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ನೂತನ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು ಈ ಮೂಲಕ ಗ್ರಾಮೀಣ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಅನುವು ಮಾಡಿಕೊಡಲಾಗುವುದು. ತಾಲೂಕಿನಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣಕ್ಕೆ ಜಾಗದ ಕೊರತೆ ಇದೆ. ಈಗಾಗಲೇ ಹೊನ್ನೂರು, ಮೆಳ್ಳಹಳ್ಳಿ, ವಡಗೆರೆ ಗ್ರಾಮಗಳಲ್ಲಿ ಜಾಗವನ್ನು ಗುರುತಿಸಲಾಗಿದ್ದು ಶೀಘ್ರದಲ್ಲೇ ಕ್ರೀಡಾಂಗಣ ನಿರ್ಮಾಣ ಮಾಡಲು ಕ್ರಮ ವಹಿಸಲಾಗುವುದು ಎಂದರು.
ಕನ್ನಡದಲ್ಲಿ ಹೆಚ್ಚು ಅಂಕಗಳಿದ ವಿದ್ಯಾರ್ಥಿಗಳಿಗೆ ಗೋಪಾಲಸ್ವಾಮಿ ಗ್ಯಾಸ್ ಏಜೆನ್ಸೀಸ್ ವತಿಯಿಂದ ನಗದು ಬಹುಮಾನ ಹಾಗೂ ಪ್ರಶಂಸನಾ ಪತ್ರವನ್ನು ವಿತರಣೆ ಮಾಡಲಾಯಿತು. ಶಾಲಾ ಮಕ್ಕಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆಯಿತು.
ಟಿ.ನರಸೀಪುರ ಬಿಆರ್ಸಿ ಎನ್.ನಾಗೇಶ್ ಗಂಗವಾಡಿ, ಪಪಂ ಅಧ್ಯಕ್ಷೆ ಲಕ್ಷ್ಮಿಮಲ್ಲು, ಉಪಾಧ್ಯಕ್ಷೆ ಶಾಂತಮ್ಮ ನಿಂಗರಾಜು, ಸದಸ್ಯರಾದ ಮಹೇಶ್, ವೈ.ಜಿ. ರಂಗನಾಥ, ಸವಿತಾ ಬಸವರಾಜು, ಬಿ.ರವಿ, ಸುಶೀಲಾ ಪ್ರಕಾಶ್ ನಾಮ ನಿರ್ದೇಶಿತ ಸದಸ್ಯರಾದ ಲಿಂಗರಾಜಮೂರ್ತಿ, ಮುನವ್ವರ್ ಬೇಗ್, ಶ್ರೀಕಂಠಸ್ವಾಮಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನದ ಅಧ್ಯಕ್ಷ ಎಚ್.ವಿ.ಚಂದ್ರು, ಜಿಪಂ ಮಾಜಿ ಉಪಾಧ್ಯಕ್ಷ ಜೆ. ಯೋಗೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್ ತಹಸೀಲ್ದಾರ್ ಜಯಪ್ರಕಾಶ್ ಮುಖ್ಯಾಧಿಕಾರಿ ಎಂಪಿ. ಮಹೇಶ್ಕುಮಾರ್, ಬಿಇಒ ಮಾರಯ್ಯ, ಉಪಪ್ರಾಂಶುಪಾಲ ನಂಜುಂಡಯ್ಯ ಕಸಾಪ ಅಧ್ಯಕ್ಷ ಯರಿಯೂರು ನಾಗೇಂದ್ರ, ಕರವೇ ಜಿಲ್ಲಾ ಉಪಾಧ್ಯಕ್ಷ ವೈ.ಕೆ.ಮೋಳೆ ನಾಗರಾಜು ಇದ್ದರು.