ಕನ್ನಡಪ್ರಭ ವಾರ್ತೆ ರಾಯಚೂರು
ಸ್ಥಳೀಯ ಕನ್ನಡ ಭವನದಲ್ಲಿ ಹೊಸಮನಿ ಪ್ರಕಾಶನದಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ನೃಪತುಂಗ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರಿಸ್ತಪೂರ್ವ 4000 ವರ್ಷಗಳ ಹಿಂದೆ ಕನ್ನಡ ಜನ್ಮವೆತ್ತಿದೆ ಎಂದು ಡಿವಿ ಗುಂಡಪ್ಪ ಅವರು ಪ್ರತಿಪಾದಿಸಿದ್ದಾರೆ, ಕ್ರಿಸ್ತಶಕ 458 ಕನ್ನಡಕ್ಕೆ ಅಕ್ಷರರೂಪ ಬಂದಿದ್ದು, ಹಲ್ಮಿಡಿ ಶಾಸನದಿಂದ ಗೊತ್ತಾಗುತ್ತದೆ ಇವು ಕನ್ನಡ ಭಾಷೆಯು ನೆಲೆಸಿರುವುದಕ್ಕೆ ಪುರಾವೆಗಳಾಗಿವೆ ಎಂದರು.
ಕನ್ನಡ ನಾಡು, ನುಡಿ, ಜಲ ಹಾಗೂ ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಸಾಧಕರನ್ನು ಸರ್ಕಾರ ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡಬೇಕು ಅಂತಹ ಕಾರ್ಯವನ್ನು ಹೊಸಮನಿ ಪ್ರಕಾಶನವು ಮಾಡಿಕೊಂಡು ಬರುತ್ತಿರುವುದು ಇತರರಿಗೆ ಮಾದರಿಯಾಗಿದೆ ಎಂದು ಹೇಳಿದರು.ಅಖಿಲ ಕರ್ನಾಟಕ ಡಾ.ರಾಜಕುಮಾರ್ ಅಭಿಮಾನಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಜೆ.ಎಲ್.ಗೋಪಿ ಹಾಗೂ ಶಿಕ್ಷಕಿ ಷಂಷಾದಬೇಗಂ ಅವರು ಮಾತನಾಡಿದರು.
ಈ ವೇಳೆ ಹೊಸಮನಿ ಪ್ರಕಾಶನದ ಅಧ್ಯಕ್ಷ ಬಶೀರ ಅಹ್ಮದ ಹೊಸಮನಿ, ಉಪಾಧ್ಯಕ್ಷೆ ಪರ್ವಿನಬೇಗಂ, ಪ್ರಧಾನ ಕಾರ್ಯದರ್ಶಿ ಶಿಫಾ ಹೊಸಮನಿ, ಕೋಶಾಧ್ಯಕ್ಷೆ ಖುಷಿ ಬ.ಹೊಸಮನಿ, ಶಿವಮ್ಮ ಸೇರಿದಂತೆ ಪದಾಧಿಕಾರಿಗಳು, ಸದಸ್ಯರು, ವಿವಿಧ ಸಂಘಟನೆಗಳ ಪ್ರಮುಖರು, ಕನ್ನಡಾಭಿಮಾನಿಗಳು ಮತ್ತಿತರರು ಇದ್ದರು.