ಕನ್ನಡಪ್ರಭ ವಾರ್ತೆ ಗುಬ್ಬಿ
ತಾಲೂಕು ಕಚೇರಿಯ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪಟ್ಟಣದಲ್ಲಿ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಪ್ರತಿ ವರ್ಷವೂ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸುತ್ತಾ ಬಂದಿದ್ದು, ಕನ್ನಡಿಗರು ಇಂಗ್ಲೀಷ್ ವ್ಯಾಮೋಹಕ್ಕೆ ಒಳಗಾಗಿ ಕನ್ನಡ ಶಾಲೆಗಳನ್ನು ಮುಚ್ಚುವ ಸ್ಥಿತಿ ಇಂದು ನಿರ್ಮಾಣ ಆಗುತ್ತಿರುವುದು ಕಳವಳಕಾರಿ ಸಂಗತಿ. ಉದ್ಯೋಗಕ್ಕಾಗಿ ಇಂಗ್ಲೀಷ್ ಭಾಷೆಯನ್ನು ಮಾತನಾಡಿ. ಆದರೆ, ಮಾತೃ ಭಾಷೆಯನ್ನು ಉಳಿಸಲು ಕನ್ನಡ ಮಾಧ್ಯಮ ಶಾಲೆಗಳಿಗೆ ಆದ್ಯತೆ ನೀಡುವಂತೆ ಕರೆ ನೀಡಿದರು.
ತಹಸೀಲ್ದಾರ್ ಆರತಿ ಬಿ. ಮಾತನಾಡಿ, ಕನ್ನಡ ಭಾಷೆ ಮಾತನಾಡುವುದು, ಬರೆಯುವುದು, ಕನ್ನಡದಲ್ಲೇ ವ್ಯವಹಾರ ನಡೆಸುವದನ್ನು ನಾವು ಕಲಿಯಬೇಕಾಗಿದೆ. ಕನ್ನಡ ಸಂಸ್ಕೃತಿ, ಆಚಾರ, ವಿಚಾರ ಉಳಿಸಿ, ಬೆಳೆಸುವ ಕಡೆ ಹೆಚ್ಚು ಒತ್ತು ಕೊಡಬೇಕು ಎಂದು ತಮ್ಮ ಸಂದೇಶದಲ್ಲಿ ತಿಳಿಸಿದರು.ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ, ಶಾಲಾ ಮಕ್ಕಳಿಂದ ಧ್ವಜ ವಂದನೆ ಸ್ವೀಕಾರ ಹಾಗೂ ಕವಾಯತ್ ಮೂಡಿಬಂತು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.