ಮುನಿರಾಬಾದ: ಕನ್ನಡದ ಜ್ಯೋತಿ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಂಪಿಯಲ್ಲಿ ಚಾಲನೆ ನೀಡಿದ ನಂತರ ಕನ್ನಡ ಜ್ಯೋತಿ ಯಾತ್ರೆ ವಿಜಯನಗರ ಜಿಲ್ಲೆಯಿಂದ ಕೊಪ್ಪಳ ಜಿಲ್ಲೆಯ ಮುನಿರಾಬಾದಿಗೆ ಪ್ರವೇಶಿಸಿತು. ಈ ವೇಳೆ ರಥಕ್ಕೆ ಮಹಿಳೆಯರಿಂದ ಪೂರ್ಣಕುಂಬದ ಸ್ವಾಗತ ನೀಡಲಾಯಿತು. 100ಕ್ಕೂ ಅಧಿಕ ಮಹಿಳೆಯರು ರಥಕ್ಕೆ ಆರತಿ ಬೆಳಗಿದರು.
200ಕ್ಕೂ ಅಧಿಕ ಶಾಲಾ ವಿದ್ಯಾರ್ಥಿಗಳು ಕೋಲಾಟದ ಪ್ರದರ್ಶನ ನೀಡಿದರು. ಸಂಸದ, ಶಾಸಕರು ಶಾಲಾ ಮಕ್ಕಳೊಂದಿಗೆ ಕೋಲಾಟ ಆಡಿದರು. ವಿವಿಧ ಕಲಾ ತಂಡಗಳು, ಡೊಳ್ಳು ಕುಣಿತ, ಮೆರವಣಿಗೆಗೆ ರಂಗು ನೀಡಿತು. ಸುಮಾರು 5ಸಾವಿರಕ್ಕೂ ಅಧಿಕ ಜನರು ಕನ್ನಡ ಜ್ಯೋತಿ ರಥಕ್ಕೆ ಪುಷ್ಪಗುಚ್ಚ ಮಾಡಿ ಸ್ವಾಗತ ನೀಡಿದರು.
ಈ ಸಂದರ್ಭದಲ್ಲಿ ಕನ್ನಡಪರ ಸಂಘಟನೆಯ ಕಾರ್ಯಕರ್ತರು, ಮುನಿರಾಬಾದ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.