ಕಡೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ನಡೆದ 69ನೇ ಕನ್ನಡ ರಾಜ್ಯೋತ್ಸವ
ಕನ್ನಡಿಗರ ನಿರಂತರ ಹೋರಾಟದಿಂದ ಕನ್ನಡ ಭಾಷೆಗೆ ಬೆಲೆ ಸಿಗುವ ಮೂಲಕ ಕನ್ನಡದಲ್ಲಿಯೇ ತಾಂತ್ರಿಕ ಶಿಕ್ಷಣ, ವೈದ್ಯಕೀಯ ಮತ್ತಿತರ ಪರೀಕ್ಷೆಗಳನ್ನು ಬರೆಯುವ ವ್ಯವಸ್ಥೆ ಜಾರಿಯಿಂದ ಕನ್ನಡ ಶಕ್ತಿ ಶಕ್ತಿಶಾಲಿ ಭಾಷೆಯಾಗಿ ಬೆಳೆದಿದೆ ಎಂದು ಶಾಸಕ ಕೆ.ಎಸ್.ಆನಂದ್ ಬಣ್ಣಿಸಿದರು.
ಕಡೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ನಡೆದ 69ನೇ ಕನ್ನಡ ರಾಜ್ಯೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮಹನೀಯರನ್ನು ತಾಲೂಕು ಆಡಳಿತದಿಂದ ಗೌರವಿಸಿ ಮಾತನಾಡಿದರು. ರಾಜ್ಯಾದ್ಯಂತ ಸಂಭ್ರಮದಿಂದ 69ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ ಪ್ರಾದೇಶಿಕ ಭಾಷೆಗಳ ಆಧಾರದ ಮೇಲೆ ಮೈಸೂರು ರಾಜ್ಯವಾಗಿದ್ದ ಕನ್ನಡನಾಡನ್ನು, ಮುಖ್ಯಮಂತ್ರಿ ದೇವರಾಜ್ ಅರಸು ಅವರು ಕೈಗೊಂಡ ತೀರ್ಮಾನದಿಂದ ಕರ್ನಾಟಕ ಎಂದು 1973ರ ನವೆಂಬರ್ 1ರಂದು ನಾಮಕರಣವಾಯಿತು.ಕನ್ನಡ ಎಂಬುದೇ ಶಕ್ತಿ ಭಾಷೆಯಾಗಿದ್ದು ದೇಶದ ಅತ್ಯಂತ ಸುಂದರವಾದ ಭಾಷೆ ಕನ್ನಡಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದಿದೆ. ಕರ್ನಾಟಕದ ಹೆಮ್ಮೆಯ ಕುವೆಂಪು, ಬೇಂದ್ರೆ, ಶಿವರಾಮ ಕಾರಂತ, ವಿ ಕೃ ಗೋಕಾಕ್ ಮತ್ತಿತರರು ಕನ್ನಡದ ಭಾಷೆಗೆ ತಮ್ಮ ಕೊಡುಗೆ ನೀಡಿದ್ದಾರೆ ಎಂದರು.
ಕನ್ನಡ ಭಾಷೆ ಕಲಿತು ಕನ್ನಡಿಗರಾಗಿ ಕನ್ನಡವೇ ಸತ್ಯ ಕನ್ನಡವೇ ನಿತ್ಯಎಂಬಂತೆ ಕನ್ನಡ ನಮ್ಮ ಉಸಿರಾಗಬೇಕು ಎಂದರು.
ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಮಾತನಾಡಿ, ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಕರ್ನಾಟಕದ ಸಾಂಸ್ಕೃತಿಕ ಪ್ರತಿನಿಧಿಯಾಗಿರುವ ಮೈಸೂರು ಸಂಸ್ಕೃತಿಗಳ ತವರು ಆಗಿದ್ದು ಕವಿಗಳು ಕೂಡ ಕರ್ನಾಟಕ ಏಕತೆಗೆ ಕೊಡುಗೆ ನೀಡಿದ್ದಾರೆ. ಗೋವಾದಲ್ಲಿ ಕನ್ನಡಿ ಗರನ್ನು ವಕ್ಕಲೆಬ್ಬಿಸುವ ಸಂಧರ್ಭದಲ್ಲಿ ನಮ್ಮ ಸರಕಾರ ಕನ್ನಡಿಗರ ಪರವಾಗಿ ನಿಂತಿದ್ದನ್ನು ನೋಡಿದ್ದೇವೆ. ಎಲ್ಲರೂ ಕನ್ನಡ ಭಾಷೆ ಬೆಳವಣಿಗೆ ಕೈಜೋಡಿಸ ಬೇಕು ಎಲ್ಲೆಡೆ ಉತ್ತಮ ಮಳೆಯಿಂದ ರೈತರು ಸಂಭ್ರಮದಲ್ಲಿದ್ದಾರೆ. ಭಾಷೆ ಜೊತೆ ಸ್ವಚ್ಛತೆ ಬಗ್ಗೆಯೂ ಗಮನ ಹರಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ವೈದ್ಯ ಡಾ. ರಾಮಚಂದ್ರಪ್ಪ, ಹಿರಿಯ ಪತ್ರಕರ್ತ ಎ.ಜೆ.ಪ್ರಕಾಶಮೂರ್ತಿ, ಚಂದ್ರಪ್ಪ, ಕರವೇ ಸಿದ್ದಪ್ಪ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರನ್ನು ಗೌರವಿಸಲಾಯಿತು. ಶಾಲಾ ಮಕ್ಕಳಿಂದ ಕನ್ನಡದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.
-- ಬಾಕ್ಸ್---
ಕಡೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ನಡೆದ ರಾಜ್ಯೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮಹನೀಯರನ್ನು ತಾಲೂಕು ಆಡಳಿತದಿಂದ ಗೌರವಿಸಲಾಯಿತು.