21ರಂದು ಕನ್ನಡ ಸಾಹಿತ್ಯ ಸಮ್ಮೇಳನ

KannadaprabhaNewsNetwork |  
Published : Feb 05, 2024, 01:47 AM IST
03ಜಿಯುಡಿ1 | Kannada Prabha

ಸಾರಾಂಶ

ಫೆ.21 ರಂದು ಗುಡಿಬಂಡೆಯಲ್ಲಿ ತಾಲೂಕು ಮಟ್ಟದ ಕನ್ನಡ ಹಬ್ಬಕ್ಕೆ ಪ್ರತಿಯೊಬ್ಬರೂ ಸಹ ಭಾಗವಹಿಸಬೇಕು. ಈ ಬಾರಿ ಅದ್ಧೂರಿಯಾಗಿ ಸಾಹಿತ್ಯ ಸಮ್ಮೇಳನ ಮಾಡಲು ಗುಡಿಬಂಡೆ ಸಾರ್ವಜನಿಕರು ಸಹಕರಿಸಬೇಕು

ಕನ್ನಡಪ್ರಭ ವಾರ್ತೆ ಗುಡಿಬಂಡೆ

ಕೋವಿಡ್ ಹಿನ್ನೆಲೆಯಲ್ಲಿ ಕೆಲವು ವರ್ಷಗಳ ಕಾಲ ಗುಡಿಬಂಡೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ನಡೆದಿರಲಿಲ್ಲ. ಇದೀಗ ಎಲ್ಲರ ಸರ್ವಾನುಮತದ ಮೇರೆಗೆ ಫೆ.21 ರಂದು ಸಾಹಿತ್ಯ ಸಮ್ಮೇಳನ ಕಾರ್ಯಕ್ರಮವನ್ನು ನಡೆಸಲು ತೀರ್ಮಾನಿಸಿದ್ದು, ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಶಾಸಕ ಸುಬ್ಬಾರೆಡ್ಡಿ ಸೂಚನೆ ನೀಡಿದರು.

ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಕಸಾಪ ತಾಲೂಕು ಘಟಕದ ವತಿಯಿಂದ ಹಮ್ಮಿಕೊಂಡಿದ್ದ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಕನ್ನಡ ಹಬ್ಬದಲ್ಲಿ ಭಾಗಿಯಾಗಿ

ಕೆಲವೊಂದು ಜಾತಿಗಳ ಹಬ್ಬಗಳಂದು ಬೆಳಗಿನಿಂದಲೇ ಮೆರವಣಿಗೆ ಸೇರಿದಂತೆ ಪ್ರತಿಯೊಂದು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. ಆದರೆ ರಾಷ್ಟ್ರೀಯ ಹಬ್ಬಗಳು, ಕನ್ನಡ ಹಬ್ಬಗಳಲ್ಲಿ ಸರ್ಕಾರಿ ಅಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು ಮಾತ್ರ ಭಾಗಿಯಾಗುತ್ತಾರೆ. ಇದು ಸರಿಯಲ್ಲ, ಕನ್ನಡ ಹಬ್ಬಕ್ಕೆ ಪ್ರತಿಯೊಬ್ಬರೂ ಸಹ ಭಾಗವಹಿಸಬೇಕು. ಈ ಬಾರಿ ಅದ್ಧೂರಿಯಾಗಿ ಸಾಹಿತ್ಯ ಸಮ್ಮೇಳನ ಮಾಡಲು ಗುಡಿಬಂಡೆ ಸಾರ್ವಜನಿಕರು ಸಹಕರಿಸಬೇಕು ಎಂದರು.

ಸಮ್ಮೇಳನ ಯಶಸ್ವಿಗೊಳಿಸಿ

ಕಸಾಪ ತಾಲೂಕು ಅಧ್ಯಕ್ಷ ಸುಬ್ಬರಾಯಪ್ಪ ಮಾತನಾಡಿ, ಫೆ.21 ರಂದು ಗುಡಿಬಂಡೆಯಲ್ಲಿ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ಎಲ್ಲರೂ ತೀರ್ಮಾನಿಸಲಾಗಿದೆ. ಈ ಹಬ್ಬಕ್ಕೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು. ಕಾರ್ಯಕ್ರಮವನ್ನು ಅದ್ದೂರಿಯಾಗಿ, ಅರ್ಥಪೂರ್ಣವಾಗಿ ಯಶ್ವಸಿಗೊಳಿಸಬೇಕು. ಈ ನಿಟ್ಟಿನಲ್ಲಿ ವಿವಿಧ ಸಮಿತಿಗಳನ್ನು ಸಹ ರಚನೆ ಮಾಡಲಾಗುವುದು. ಸಮ್ಮೇಳನದ ಯಶಸ್ಸಿಗೆ ಎಲ್ಲರೂ ಒಗ್ಗಟ್ಟಿನಿಂದ ಸಹಕಾರ ನೀಡಬೇಕು ಎಂದರು.

ಸಭೆಯಲ್ಲಿ ಪಪಂ ಮಾಜಿ ಅಧ್ಯಕ್ಷ ದ್ವಾರಕನಾಥನಾಯ್ಡು, ತಹಸೀಲ್ದಾರ್ ಮನಿಷಾ, ತಾಪಂ ಇಒ ಹೇಮಾವತಿ, ಕಸಾಪ ಮತ್ತು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವೈಯಕ್ತಿಕ ಕಾರಣದಿಂದ ಬೇಸತ್ತು ಕಿರುತೆರೆ ಯುವ ನಟಿ ಆತ್ಮ*ತ್ಯೆ
ಜ.6 ಇಲ್ಲವೇ 9ಕ್ಕೆ ಡಿಕೆಶಿ ಸಿಎಂ 200% ಕನ್ಫರ್ಮ್: ಇಕ್ಬಾಲ್