- 20ನೇ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಡಾ. ಎಚ್ ಎಂ ಮರುರು ಸಿದ್ದಯ್ಯ ಪಟೇಲ್ ಗೆ ಅಧಿಕೃತ ಆಹ್ವಾನ
ಕನ್ನಡ ಸಾಹಿತ್ಯಕ್ಕೆ ತನ್ನದೇ ಆದ ಪ್ರಬುದ್ಧತೆ ಇದೆ ಎಂದು ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದ್ದಾರೆ.
ಸೋಮವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಕಸಾಪ ಮತ್ತು ವಿವಿಧ ಸಂಘ ಸಂಸ್ಥೆಗಳಿಂದ 20ನೇ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆಯಾದ ಸಾಹಿತಿ, ಹಿರಿಯ ಸಂಶೋಧಕ ಮರುಳಸಿದ್ದಯ್ಯ ಪಟೇಲ್ ಅವರಿಗೆ ಅಧಿಕೃತ ಆಹ್ವಾನ ನೀಡುವ ಸಮಾರಂಭದಲ್ಲಿ ಮಾತನಾಡಿದರು. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ಸಾಹಿತಿ ಗೊರು ಚನ್ನಬಸಪ್ಪ ಈ ನೆಲದವರು. ಜಿಲ್ಲೆಯಲ್ಲಿ ಈ ವರೆಗೆ 19 ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿವೆ. ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಗಳು ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಬಹುದೊಡ್ಡ ಇತಿಹಾಸ ಹೊಂದಿದೆ ಎಂದರು.ಮಾರ್ಚ್ 7 ಮತ್ತು 8 ರಿಂದ ತರೀಕೆರೆ ಪಟ್ಟಣದ ಬಯಲು ರಂಗ ಮಂದಿರದಲ್ಲಿ ನಡೆಯಲಿರುವ ಚಿಕ್ಕಮಗಳೂರು 20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಸಾಹಿತಿಗಳು, ಹಿರಿಯ ಸಂಶೋಧಕ ರಂಗೇನಹಳ್ಳಿ ಡಾ.ಎಚ್.ಎಂ.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಮ್ಮೇಳನಾಧ್ಯಕ್ಷ ರಿಗೆ ಶಾಲು ಹೊದಿಸಿ, ಪೇಟ ತೊಡಿಸಿ, ಫಲತಾಂಬೂಲ ನೀಡಿ ಸನ್ಮಾನಿಸಿ, ಅಧಿಕೃತ ಆಹ್ವಾನ ನೀಡಲಾಯಿತು.ಜಿಲ್ಲಾ ಕಸಾಪ ಸಂಚಾಲಕ ಇಮ್ರಾನ್ ಅಹಮದ್ ಬೇಗ್, ಪ್ರಧಾನ ಕಾರ್ಯದರ್ಶಿ ಪವನ್ ಕುಮಾರ್, ತಾ.ಕಸಾಪ ಅಧ್ಯಕ್ಷರವಿ ದಳವಾಯಿ, ಸಮ್ಮೇಳನ ಸ್ವಾಗತ ಸಮಿತಿ ಕೋಶಾಧ್ಯಕ್ಷ ಮಿಲ್ಟ್ರಿ ಶ್ರೀನಿವಾಸ್, ಲೇಖಕ ತ.ಮ.ದೇವಾನಂದ್, ಮಹಿಳಾ ಘಟಕ ಅಧ್ಯಕ್ಷೆ ಸುನಿತಾ ಕಿರಣ್, ಜಿಲ್ಲಾ ಕನ್ನಡ ಜಾನಪದ ಜಿಲ್ಲಾದ್ಯಕ್ಷೆ ವಿಶಾಲಾಕ್ಷಮ್ಮ, ಸ್ಮರಣ ಸಂಚಿಕೆ ಸಂಪಾದಕರಾದ ಉಮಾ ಪ್ರಕಾಶ್, ಕೆ.ಎಸ್.ಶಿವಣ್ಣ, ಸೈಯದ್ ಮುಹೀಬುಲ್ಲಾ, ನವೀನ್ ಪೆನ್ನಯ್ಯ, ಜಯಸ್ವಾಮಿ, ಟಿ.ಎನ್.ಜಗದೀಶ್, ಚಿಕ್ಕ ಮಗಳೂರು ಕಸಾಪ ಅಧ್ಯಕ್ಷ ದಯಾನಂದ್, ನಾಟಕ ಅಕಾಡಮಿ ಸದಸ್ಯರಾದ ಬಿ.ಎಸ್.ಸೋಮಶೇಖರ್, ಅರ್ಚನಾ, ರಶ್ಮಿ, ಮತ್ತಿತರರು ಭಾಗವಹಿಸಿದ್ದರು.10ಕೆಟಿಆರ್.ಕೆ.1ಃ