ವಿಕಲಚೇತನರ ಹಕ್ಕುಗಳು, ಸರ್ಕಾರಿ ಸೌಲಭ್ಯಗಳ ಕೃತಿ ಲೋಕಾರ್ಪಣೆಗೊಳಿಸಿದ ಶಾಸಕ ದೇವೇಂದ್ರಪ್ಪ
ಕನ್ನಡ ಪ್ರಭವಾರ್ತೆ ಜಗಳೂರುನಾಡು ನುಡಿ ವಿಚಾರವಾಗಿ ಇಲ್ಲಿ ಕನ್ನಡ ಸಂಘಟನೆಗಳು ಜನ್ಮ ತಾಳುತ್ತಿದೆ. ಸಂಘಟನೆಗಳ ಹೆಸರು ಬೇರೆ. ಆದರೆ ನಮ್ಮ ನಿಮ್ಮೆಲ್ಲರ ಹೋರಾಟ ಒಂದೇ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು.
ಪಟ್ಟಣದ ವಾಲ್ಮೀಕಿ ಭವನದಲ್ಲಿ ನಡೆದ ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳಿಗೆ ಪದಗ್ರಹಣ ಹಾಗೂ ವಿಶೇಷ ಚೇತನರಿಗೆ ಸಾಧನ ಸಲಕರಣೆಗಳ ವಿತರಣೆ ಹಾಗೂ ವಿಕಲಚೇತನರ ಹಕ್ಕುಗಳು ಮತ್ತು ಸರ್ಕಾರಿ ಸೌಲಭ್ಯಗಳ ಕೃತಿ ಲೋಕಾರ್ಪಣೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.ಕನ್ನಡಕ್ಕೆ 5 ಸಾವಿರ ವರ್ಷ ಇತಿಹಾಸವಿರುವ ಕುರಿತು ಆಧಾರಗಳು ಸಿಕ್ಕಿವೆ. ಕನ್ನಡಕ್ಕೆ 8 ಜ್ಞಾನಪೀಠ ಪ್ರಶಸ್ತಿಗಳು ಲಭಿಸಿದ್ದು, ಹಲವಾರು ಕನ್ನಡ ನಟರು ಕನ್ನಡದ ಉಳಿವಿಗೆ ಹೋರಾಟ ಮಾಡಿದ್ದಾರೆ. ದೇಶಾಭಿಮಾನ ಹಾಗೂ ರಾಜ್ಯಾಭಿಮಾನವನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು. ಕನ್ನಡದ ಉಳಿವಿಗಾಗಿ ನಾವೆಲ್ಲ ಎಚ್ಚರದಿಂದ ಇರಬೇಕು ಎಂದು ತಿಳಿಸಿದರು.ನಮ್ಮ ಕನ್ನಡ ಸೇನೆ ರಾಜ್ಯಾಧ್ಯಕ್ಷ ಎಂ.ಬಸವರಾಜ್ ಪಡುಕೋಟೆ ಮಾತನಾಡಿ ಡಾ. ಸರೋಜಿನಿ ಮಹರ್ಷಿ ಹೋರಾಟ ಮಾಡಲಾಗುತ್ತಿದೆ, ಈ ಹೋರಾಟಕ್ಕೆ ಎಲ್ಲರೂ ಕೈಜೋಡಿಸಬೇಕು. ಹಲವು ಬಾರಿ ಜೈಲಿಗೆ ಹೋಗಿ ಬಂದಿದ್ದೇವೆ. ರೈಲ್ವೆ ಉದ್ಯೋಗದಲ್ಲಿ ಮೊದಲು ಹಿಂದಿ ಭಾಷೆಯಲ್ಲಿ ಪರೀಕ್ಷೆ ಬರೆದಿದ್ದರು. ನಮ್ಮ ಹೋರಾಟ ಫಲವಾಗಿ ಇಂದು ಕನ್ನಡದಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ. ಕನ್ನಡದ ಉಳಿಯುವುದಾಗಿ ಎಲ್ಲರೂ ಕೈಜೋಡಿಸೋಣ ಎಂದು ಕರೆ ನೀಡಿದರು.
ಕೆ.ಪಿ.ಪಾಲಯ್ಯ ಮಾತನಾಡಿ, ಕನ್ನಡದ ನೆಲ-ಜಲ ಉಳುವಿಗಾಗಿ ಹಲವಾರು ಹೋರಾಟಗಳನ್ನು ಮಾಡುತ್ತಿದ್ದಾರೆ. ಇದು ಒಬ್ಬರಿಂದ ಸಾಧ್ಯವಿಲ್ಲ. ಹೋರಾಟಕ್ಕೆ ನಾವು ನೀವೆಲ್ಲರೂ ಕೈಜೋಡಿಸಿದಾಗ ಮಾತ್ರ ಅದಕ್ಕೆ ಒಂದು ಅರ್ಥ ಬರುತ್ತದೆ. ನಗರದಲ್ಲಿ ಅಲ್ಲದೆ ಪ್ರತಿ ಗ್ರಾಮಗಳಲ್ಲಿ ಗ್ರಾಮ ಘಟಕವನ್ನು ಮಾಡಬೇಕೆಂದು ಸಲಹೆ ನೀಡಿದರು.ವಿದ್ಯಾರ್ಥಿಗಳಿಗೆ ಸಂಘಟನೆ ಕಡೆಯಿಂದ ನೋಟ್ಬುಕ್, ಪೆನ್ನು ವಿತರಣೆ , ಜೊತೆಗೆ ವಿಕಲಚೇತನರಿಗೆ ಸಾಧನ ಸಲಕರಣೆಗಳನ್ನು ನೀಡಲಾಯಿತು. ಇದೇ ವೇಳೆ ಶಾಸಕರು ವಿಕಲಚೇತನರ ಹಕ್ಕುಗಳು ಹಾಗೂ ಸರ್ಕಾರಿ ಸೌಲಭ್ಯಗಳು ಎಂಬ ಕೃತಿ ಬಿಡುಗಡೆ ಮಾಡಿದರು.ಈ ವೇಳೆ ರಾಜ್ಯ ಗೌರವಾಧ್ಯಕ್ಷ ಗಣೇಶ್ ರಾವ್ ಕೇಸರ್ ಕರ್, ರಾಜ ಉಪಾಧ್ಯಕ್ಷ ಚಾಕನ ಹಳ್ಳಿ ನಾಗರಾಜ್, ಮಹಿಳಾ ಘಟಕ ರಾಜ್ಯ ಉಪಾಧ್ಯಕ್ಷೆ ಸುಜಾತ, ರಾಜ್ಯ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಲಕ್ಷ್ಮಿ, ರಾಜ್ಯ ಉಪಾಧ್ಯಕ್ಷರಾದ ಶಶಿಧರ್, ಹರ್ಷವರ್ಧನ್, ಯುವ ಘಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಗುರು ದೊಡ್ಡಮನಿ, ಪದವೀಧರ ಘಟಕದ ರಾಜ್ಯ ಉಪಾಧ್ಯಕ್ಷೆ ಜಯಲಕ್ಷ್ಮಿ, ಜಿಲ್ಲಾಧ್ಯಕ್ಷೆ ಮಂಜುಳಾ, ಹರ್ಷ ಬೆಂಗಳೂರು ನಗರ ಘಟಕ ಹಾಗೂ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಲ್ಲಾಗಟ್ಟೆ ಶೇಖರಪ್ಪ, ಸೇರಿದಂತೆ ಸಂಘಟನೆಯ ಕಾರ್ಯಕರ್ತರು ಹಾಜರಿದ್ದರು.----ಪೋಟೋ: 13 ಜೆ.ಜಿ.ಎಲ್.1
ಜಗಳೂರು ಪಟ್ಟಣದ ವಾಲ್ಮೀಕಿ ಭವನದಲ್ಲಿ ನಡೆದ ನಮ್ಮ ಕರ್ನಾಟಕ ಸೇನೆಯ ಪದಾಧಿಕಾರಿಗಳಿಗೆ ಪದಗ್ರಹಣ ಹಾಗೂ ವಿಶೇಷ ಚೇತನರಿಗೆ ಸಾಧನ ಸಲಕರಣೆಗಳ ವಿತರಣೆ ಕಾರ್ಯಕ್ರಮವನ್ನು ಶಾಸಕ ಶಾಸಕ ಬಿ.ದೇವೇಂದ್ರಪ್ಪ ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.