ವಿವಿಧ ಕ್ಷೇತ್ರಗಳ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

KannadaprabhaNewsNetwork |  
Published : Nov 02, 2025, 02:30 AM IST
ಪಟ್ಟಣದ ಕೋಟೆ ಮೈದಾನದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ವತಿಯಿಂದ ಏರ್ಪಡಿಸಿದ್ದ 70ನೇ ಕನ್ನಡ ರಾಜ್ಯೋತ್ಸವದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಶಾಸಕ ಬಾಲಕೃಷ್ಣ ಸನ್ಮಾನಿಸಿದರು. | Kannada Prabha

ಸಾರಾಂಶ

ಮಾಗಡಿ: ನವೆಂಬರ್ ತಿಂಗಳ ಪೂರ್ಣ ಕೆಂಪೇಗೌಡ ಉತ್ಸವ ನಡೆಸಲಾಗುತ್ತದೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.

ಮಾಗಡಿ: ನವೆಂಬರ್ ತಿಂಗಳ ಪೂರ್ಣ ಕೆಂಪೇಗೌಡ ಉತ್ಸವ ನಡೆಸಲಾಗುತ್ತದೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.

ಪಟ್ಟಣದ ಕೋಟೆ ಮೈದಾನದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ಏರ್ಪಡಿಸಿದ್ದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನಕೋತ್ಸವದ ಅಂಗವಾಗಿ ತಿಂಗಳ ಕಾಲ ಕೆಂಪೇಗೌಡ ಉತ್ಸವವನ್ನು ಮಾಡಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತಿದೆ. ಸ್ಪರ್ಧೆಗಳಲ್ಲಿ ಕಿರಿಯರು, ಹಿರಿಯರು ಎಲ್ಲರೂ ಭಾಗವಹಿಸಲು ಅವಕಾಶವಿದೆ. ಇಲ್ಲಿ ಗೆದ್ದವರನ್ನು ಕನಕಪುರಕ್ಕೆ ಕಳಿಸಿಕೊಡಲಾಗುತ್ತದೆ ಕೆಂಪೇಗೌಡ ಉತ್ಸವ ನಡೆಯುವುದರಿಂದ ಇದರ ಸದುಪಯೋಗ ಪ್ರತಿಯೊಬ್ಬರೂ ಬಳಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಕೆಂಪೇಗೌಡರ ಸ್ಮಾರಕ ಅಭಿವೃದ್ಧಿಗೆ ₹ 103 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಮುಂದಿನ ತಿಂಗಳು ಕಾಮಗಾರಿ ಆರಂಭವಾಗಲಿದ್ದು ರಾಷ್ಟ್ರೀಯ ಹಬ್ಬಗಳನ್ನು ಇನ್ನು ಮುಂದೆ ಕೆಂಪೇಗೌಡ ಬೈಲೂರು ರಂಗಮಂದಿರದಲ್ಲಿ ಆಯೋಜಿಸಲಾಗುತ್ತದೆ. ರಾಷ್ಟ್ರೀಯ ಹಬ್ಬಗಳಲ್ಲಿ ಬೆಳಗ್ಗೆ ವೇದಿಕೆ ಕಾರ್ಯಕ್ರಮ ನಡೆಸಿ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಗುತ್ತದೆ. ಕುವೆಂಪು ರಚಿಸಿದ ನಾಡಗೀತೆಗೆ 100 ವರ್ಷ ತುಂಬಿದ್ದು, ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಅಂದಾಜು 1200 ಆಸನಗಳುಳ್ಳ ಕುವೆಂಪು ಸಭಾಂಗಣ ಕಾಮಗಾರಿ ಪ್ರಗತಿ ಹಂತದಲ್ಲಿದೆ. ಮುಂದಿನ ರಾಜ್ಯೋತ್ಸವಕ್ಕೆ ಹಾಗೂ ಸಾರ್ವಜನಿಕ ಸಾಂಸ್ಕೃತಿಕ ಚಟುವಟಿಕೆಗಳಿಗೆ ಲೋಕಾರ್ಪಣೆಗೊಳಿಸಲಾಗುವುದು. ತಾಲೂಕಿನಲ್ಲಿ ಕನ್ನಡ ಭವನ ಮತ್ತು ಪತ್ರಿಕಾ ಭವನಕ್ಕೆ ನಿವೇಶನ ಗುರುತಿಸಲಾಗಿದೆ ಎಂದರು.

ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರಿಗೆ ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಕನ್ನಡ ಭಾಷೆಯಲ್ಲಿ 100 ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಶಾಲಾ ಮಕ್ಕಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಶರತ್ ಕುಮಾರ್, ಪುರಸಭಾ ಅಧ್ಯಕ್ಷೆ ಶಿವರುದ್ರಮ್ಮ, ಉಪಾಧ್ಯಕ್ಷ ರಿಯಾಜ್, ಸ್ಥಾಯಿ ಸಮಿತಿ ಅಧ್ಯಕ್ಷ ಶಿವಕುಮಾರ್, ಸದಸ್ಯರಾದ ವಿಜಯಲಕ್ಷ್ಮಿ, ಭಾಗ್ಯಮ್ಮ, ರಹಮತ್, ರಾಮಣ್ಣ, ತಾಪಂ ಇಒ ಜೈಪಾಲ್, ಬಿಇಒ ಚಂದ್ರಶೇಖರ್, ಕಸಾಪ ಅಧ್ಯಕ್ಷ ತಿ.ನಾ. ಪದ್ಮನಾಭ ಹಾಗೂ ಡಾ.ಮುರಳೀಧರ್‌, ತಾಲೂಕು ಗ್ಯಾರಂಟಿ ಅಧ್ಯಕ್ಷ ಕಲ್ಕೆರೆ ಶಿವಣ್ಣ, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ತಗೀಕುಪ್ಪೆ ರಾಮು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ