ಕನ್ನಡಪ್ರಭ ವಾರ್ತೆ ಚಾಮರಾಜನಗರ
ಅವರು ನಗರದ ಶ್ರೀ ಭುಜಂಗೇಶ್ವರ ಸ್ವಾಮಿ ಸೇವಾ ಸಮಿತಿ ವತಿಯಿಂದ ಭುಜಂಗೇಶ್ವರ ಬಡಾವಣೆಯಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಕನ್ನಡ ಭಾಷೆ ಅತ್ಯಂತ ಪ್ರಾಚೀನ ಭಾಷೆ. ಇದು ಒಂದು ಸುಂದರವಾದ ಸರಳ ಭಾಷೆಯಾಗಿದ್ದು, ಎಲ್ಲರಿಗೂ ಅರ್ಥವಾಗುವಂತಹ ಭಾಷೆಯಾಗಿದೆ. ಕನ್ನಡದ ಅನೇಕ ಸಾಹಿತಿಗಳು, ವಿಜ್ಞಾನಿಗಳು, ಕಲಾವಿದರು ತಮ್ಮ ಸಾಧನೆಯಿಂದ ವಿಶ್ವಖ್ಯಾತಿಯನ್ನು ಪಡೆದಿದ್ದಾರೆ ಎಂದರು.
ನಗರಸಭಾ ಮಾಜಿ ಸದಸ್ಯ ಗೋಪಾಲಕೃಷ್ಣ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ಭಾಷೆಯ ಬಗ್ಗೆ ಕೇವಲ ನವೆಂಬರ್ ತಿಂಗಳಿನಲ್ಲಿ ಕೊಂಡಾಡಿದರೆ ಸಾಲದು. ವರ್ಷವಿಡೀ ಕನ್ನಡದ ನೆಲ, ಜಲ ಭಾಷೆಯ ಬಗ್ಗೆ ಅಭಿಮಾನ ಹೊಂದಬೇಕು ಎಂದು ಕರೆ ನೀಡಿದರು.ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ಚಂದ್ರಶೇಖರ್, ಮಾಜಿ ನಗರಸಭಾ ಸದಸ್ಯ ಮಂಜುನಾಥ್, ನಂದೀಶ್ ಗುಂಬಳ್ಳಿ, ಉಮೇಶ್ ಸೇರಿದಂತೆ ಸಮಿತಿಯ ಹಲವಾರು ಪದಾಧಿಕಾರಿಗಳು ಹಾಜರಿದ್ದರು.