ಭುಜಂಗೇಶ್ವರ ಬಡಾವಣೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

KannadaprabhaNewsNetwork |  
Published : Nov 04, 2025, 12:15 AM IST
ಭುಜಂಗೇಶ್ವರ ಬಡಾವಣೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ | Kannada Prabha

ಸಾರಾಂಶ

ಕನ್ನಡ ಭಾಷೆ ಅತ್ಯಂತ ಪ್ರಾಚೀನ ಭಾಷೆ. ಇದು ಒಂದು ಸುಂದರವಾದ ಸರಳ ಭಾಷೆಯಾಗಿದ್ದು, ಎಲ್ಲರಿಗೂ ಅರ್ಥವಾಗುವಂತಹ ಭಾಷೆಯಾಗಿದೆ. ಕನ್ನಡದ ಅನೇಕ ಸಾಹಿತಿಗಳು, ವಿಜ್ಞಾನಿಗಳು, ಕಲಾವಿದರು ತಮ್ಮ ಸಾಧನೆಯಿಂದ ವಿಶ್ವಖ್ಯಾತಿಯನ್ನು ಪಡೆದಿದ್ದಾರೆ.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಕನ್ನಡ ಭಾಷೆ ಒಂದು ಸುಂದರ, ಸರಳ ಭಾಷೆ ಎಂದು ಶ್ರೀ ಭುಜಂಗೇಶ್ವರ ಸ್ವಾಮಿ ಸೇವಾ ಸಮಿತಿ ಗೌರವಾಧ್ಯಕ್ಷ ಎಲ್. ಲಿಂಗರಾಜುರವರು ಬಣ್ಣಿಸಿದರು.

ಅವರು ನಗರದ ಶ್ರೀ ಭುಜಂಗೇಶ್ವರ ಸ್ವಾಮಿ ಸೇವಾ ಸಮಿತಿ ವತಿಯಿಂದ ಭುಜಂಗೇಶ್ವರ ಬಡಾವಣೆಯಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಕನ್ನಡ ಭಾಷೆ ಅತ್ಯಂತ ಪ್ರಾಚೀನ ಭಾಷೆ. ಇದು ಒಂದು ಸುಂದರವಾದ ಸರಳ ಭಾಷೆಯಾಗಿದ್ದು, ಎಲ್ಲರಿಗೂ ಅರ್ಥವಾಗುವಂತಹ ಭಾಷೆಯಾಗಿದೆ. ಕನ್ನಡದ ಅನೇಕ ಸಾಹಿತಿಗಳು, ವಿಜ್ಞಾನಿಗಳು, ಕಲಾವಿದರು ತಮ್ಮ ಸಾಧನೆಯಿಂದ ವಿಶ್ವಖ್ಯಾತಿಯನ್ನು ಪಡೆದಿದ್ದಾರೆ ಎಂದರು.

ನಗರಸಭಾ ಮಾಜಿ ಸದಸ್ಯ ಗೋಪಾಲಕೃಷ್ಣ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ಭಾಷೆಯ ಬಗ್ಗೆ ಕೇವಲ ನವೆಂಬರ್ ತಿಂಗಳಿನಲ್ಲಿ ಕೊಂಡಾಡಿದರೆ ಸಾಲದು. ವರ್ಷವಿಡೀ ಕನ್ನಡದ ನೆಲ, ಜಲ ಭಾಷೆಯ ಬಗ್ಗೆ ಅಭಿಮಾನ ಹೊಂದಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ಚಂದ್ರಶೇಖರ್, ಮಾಜಿ ನಗರಸಭಾ ಸದಸ್ಯ ಮಂಜುನಾಥ್, ನಂದೀಶ್ ಗುಂಬಳ್ಳಿ, ಉಮೇಶ್ ಸೇರಿದಂತೆ ಸಮಿತಿಯ ಹಲವಾರು ಪದಾಧಿಕಾರಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಏಕಾದಶಿ ಪ್ರಯುಕ್ತ ಶರವಣ ಟ್ರಸ್ಟ್‌ನಿಂದ ಲಕ್ಷ ಲಡ್ಡು ಹಂಚಿಕೆ
ಹಳೆ ದ್ವೇಷ: ರಸ್ತೆಯಲ್ಲಿ ಅಟ್ಟಾಡಿಸಿ ಅಪ್ಪ, ಮಗನ ಮೇಲೆ ಹಲ್ಲೆ ನಡೆಸಿ ಪರಾರಿ