ಕಮಲ್ ಹಾಸನ್ ಹೇಳಿಕೆಗೆ ಕನ್ನಡ ಸಾಹಿತ್ಯ ಪರಿಷತ್ ಖಂಡನೆ

KannadaprabhaNewsNetwork |  
Published : Jun 02, 2025, 12:06 AM IST
1ಎಚ್‌ವಿಆರ್5 | Kannada Prabha

ಸಾರಾಂಶ

ಕನ್ನಡ ಬಗ್ಗೆ ಹಗುರವಾಗಿ ಮಾತನಾಡಿದ ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಲಾಯಿತು.

ಹಾವೇರಿ: ನಗರದ ಹೊರವಲಯದಲ್ಲಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ಪರಿಷತ್ತಿನ ಕಾರ್ಯಕಾರಿ ಮಂಡಳಿ ಸಭೆ ಜರುಗಿತು.ಈ ವೇಳೆ ಇತ್ತೀಚೆಗೆ ನಿಧನರಾದ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಅವರಿಗೆ ಸಂತಾಪ ಸೂಚಿಸಲಾಯಿತು. ಕನ್ನಡ ಬಗ್ಗೆ ಹಗುರವಾಗಿ ಮಾತನಾಡಿದ ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಲಾಯಿತು. ಜತೆಗೆ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ ಜೋಶಿ ಅವರಿಗೆ ನೀಡಿದ್ದ ಸಚಿವ ಸಂಪುಟ ದರ್ಜೆಯ ಸ್ಥಾನವನ್ನು ಹಿಂಪಡೆದಿರುವ ಸರ್ಕಾರ ತನ್ನ ನಿಲುವನ್ನು ಪುನರ್ ಪರಿಶೀಲಿಸಬೇಕೆಂದು ಮನವಿ ಮಾಡಲಾಯಿತು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಲಿಂಗಯ್ಯ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲೆಯ ಎಲ್ಲ ತಾಲೂಕುಗಳ ಕಸಾಪ ಅಧ್ಯಕ್ಷರಾದ ಬಿ.ಎಂ.ಜಗಾಪುರ, ಎನ್. ಸುರೇಶಕುಮಾರ, ವೈ.ಬಿ. ಆಲದಕಟ್ಟಿ, ಸಿ.ಎನ್. ಪಾಟೀಲ, ನಾಗಪ್ಪ ಬೆಂತೂರ, ರಾಜು ಹರವಿಶೆಟ್ಟರ, ಷಣ್ಮುಖಪ್ಪ ಮುಚ್ಚಂಡಿ, ಪ್ರಭಾಕರ ಶಿಗ್ಲಿ ಹಾಗೂ ಎಲ್ಲ ಹೋಬಳಿ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಇದ್ದರು.

ದೇಶದಲ್ಲಿ ಶೇ. ೯೯ ಸಂಶೋಧನೆ ಹೊಸತನದ ಮೇಲೆ ನಡೆಯುತ್ತಿಲ್ಲ

ಶಿಗ್ಗಾಂವಿ: ಭಾರತದಲ್ಲಿ ಶೇ. ೯೯ರಷ್ಟು ಸಂಶೋಧನೆಗಳು ಹೊಸತನದ ಮೇಲೆ ನಡೆಯುತ್ತಿಲ್ಲ. ಈಗಾಗಲೇ ನಡೆದಿರುವ, ಗೊತ್ತಿರುವ ವಿಷಯಗಳ ಮೇಲೆಯೇ ಸಂಶೋಧನೆಗಳು ನಡೆಯುತ್ತಿರುವುದು ವಿಷಾದನೀಯ ಎಂದು ಕರ್ನಾಟಕ ವಿಶ್ವವಿದ್ಯಾಲಯದ ವಿದ್ಯಾ ವಿಷಯಕ ಡೀನ್ ಹಾಗೂ ಸಿಂಡಿಕೇಟ್ ಸದಸ್ಯ ಪ್ರೊ. ಅರವಿಂದ ಮೂಲಿಮನಿ ತಿಳಿಸಿದರು.ತಾಲೂಕಿನ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಮಲ್ಲಿಗೆದಂಡೆ ಸಭಾಂಗಣದಲ್ಲಿ ನಡೆದ ಪಿಎಚ್‌ಡಿ ಕೋರ್ಸ್ ವರ್ಕ್ ಕಮ್ಮಟ- ೩ರಲ್ಲಿ ಅವರು ವಿಶೇಷ ಉಪನ್ಯಾಸ ನೀಡಿ, ಮಾತನಾಡಿದರು.

ನಶಿಸಿಹೋಗುತ್ತಿರುವ ಸಮುದಾಯ, ಪ್ರಚಲಿತ ವಿದ್ಯಮಾನಗಳ ಮೇಲೆ ಬೆಳಕು ಚೆಲ್ಲುವಂಥ ಮಹತ್ವದ ವಿಷಯಗಳ ಕುರಿತು ಸಂಶೋಧನೆ ಮಾಡುವ ಅಗತ್ಯತೆ ಇದೆ. ಹೆಳವರು ನಮ್ಮ ಜನಾಂಗದ, ಮನೆತನದ ಎಲ್ಲ ಮಾಹಿತಿಯನ್ನು ಹೊಂದಿರುತ್ತಾರೆ. ಅಜ್ಜ, ಮುತ್ತಜ್ಜ, ಅವರ ಅಜ್ಜ, ಮುತ್ತಜ್ಜ ಹೀಗೆ ಹತ್ತು, ಇಪ್ಪತ್ತು ತಲೆಮಾರಿನ ಮಾಹಿತಿ ಹೊಂದಿರುತ್ತಾರೆ. ಅಂತಹ ಹೆಳವರ ಸಂಖ್ಯೆ ಕಡಿಮೆಯಾಗುತ್ತಿದೆ ನಶಿಸಿಹೋಗುತ್ತಿರುವ ಹೆಳವರ ಬಗ್ಗೆ ಅಧ್ಯಯನ ಆಗಬೇಕಿದೆ ಎಂದರು.

ಕುಲಪತಿ ಪ್ರೊ. ಟಿ.ಎಂ. ಭಾಸ್ಕರ್ ಮಾತನಾಡಿ, ಡಾ. ಅರವಿಂದ ಮೂಲಿಮನಿ ಅವರು ಪಿಎಚ್‌ಡಿ ಸಂಶೋಧನಾರ್ಥಿಗಳಿಗೆ ಅಧ್ಯಯನಕ್ಕೆ ಅನುಕೂಲ ಆಗುವ ರೀತಿಯಲ್ಲಿ ಸರಳವಾಗಿ ಅರ್ಥೈಸಿ ಹೇಳಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಕುಲಸಚಿವರಾದ ಪ್ರೊ. ಸಿ.ಟಿ. ಗುರುಪ್ರಸಾದ್, ಕರ್ನಾಟಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಮನೋಜ ಡೊಳ್ಳಿ ಉಪಸ್ಥಿತರಿದ್ದರು. ಜನಪದ ಕಲಾವಿದ ಶರೀಫ ಮಾಕಪ್ಪನವರ ಪ್ರಾರ್ಥಿಸಿದರು. ಕೋರ್ಸ್ ವರ್ಕ್ ಸಂಚಾಲಕರು, ಸಹಾಯಕ ಸಂಶೋಧನಾಧಿಕಾರಿ ಡಾ. ಮಲ್ಲಿಕಾರ್ಜುನ ಮಾನ್ಪಡೆ ಸ್ವಾಗತಿಸಿದರು. ಕೋರ್ಸ್ ವರ್ಕ್ ಸಂಚಾಲಕರು, ಸಹಾಯಕ ಕುಲಸಚಿವ ಶಹಜಹಾನ್ ಮುದಕವಿ, ಸಂಚಾಲಕರು, ಸಹಾಯಕ ಪ್ರಾಧ್ಯಾಪಕರಾದ ಡಾ. ಗಿರೇಗೌಡ ಅರಳಿಹಳ್ಳಿ ಇತರರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌