ಸಂಕೀರ್ತನಾ ಗುರು ಮಟ್ಟು ಮಧ್ಯಸ್ಥರಿಗೆ ಕನ್ನಡ ಸಾಹಿತ್ಯ ಪರಿಷತ್ ಗೌರವ

KannadaprabhaNewsNetwork |  
Published : Dec 16, 2025, 02:45 AM IST
ಸಂಕೀರ್ತನಾ ಗುರು, ಕಲಾವಿದ ಮಟ್ಟು ವಿಷ್ಣುಮೂರ್ತಿ ಮಧ್ಯಸ್ಥಅವರನ್ನು ಕಾಪು ಕಸಾಪ ವತಿಯಿಂದ ಸ್ವಗೃಹದಲ್ಲಿ ಸನ್ಮಾನಿಸಲಾಯಿತು  | Kannada Prabha

ಸಾರಾಂಶ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದ ವತಿಯಿಂದ ‘ಮಟ್ಟು ಮಧ್ಯಸ್ಥರ ಮನೆ’ಯಲ್ಲಿ ‘ಹಿರಿಯರೆಡೆಗೆ ಸಾಹಿತ್ಯದ ನಡಿಗೆ’ ಕಾರ್ಯಕ್ರಮ ಸಂಪನ್ನಗೊಂಡಿತು.

ಕಾಪು: ಧಾರ್ಮಿಕ ಕ್ಷೇತ್ರದಿಂದ ಯುವ ಪೀಳಿಗೆ ವಿಚಲಿತರಾಗುತ್ತಿರುವ ಪ್ರಸ್ತಕ ಸನ್ನಿವೇಶದಲ್ಲಿ ಭಕ್ತಿ ಸಂಕೀರ್ತನೆಗಳಿಗೆ ಹೆಚ್ಚಿನ ಒತ್ತು ನೀಡಬೇಕು. ಮನೆ ಮನಗಳಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿಸುವಲ್ಲಿ ಸಂಕೀರ್ತನೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಹಿರಿಯ ಸಂಕೀರ್ತನಾ ಗುರು, ಕಲಾವಿದ 88 ರ ಹರೆಯದ ಮಟ್ಟು ವಿಷ್ಣುಮೂರ್ತಿ ಮಧ್ಯಸ್ಥ ಹೇಳಿದ್ದಾರೆ.ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದ ವತಿಯಿಂದ ‘ಮಟ್ಟು ಮಧ್ಯಸ್ಥರ ಮನೆ’ಯಲ್ಲಿ ಏರ್ಪಡಿಸಿದ ‘ಹಿರಿಯರೆಡೆಗೆ ಸಾಹಿತ್ಯದ ನಡಿಗೆ’ ಕಾರ್ಯಕ್ರಮದಲ್ಲಿ ‘ಸಾಹಿತ್ಯ ಪರಿಷತ್ತು ಗೌರವ’ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಪರಿಷತ್ತಿನ ಗೌರವಾನ್ವಿತರು ಮನೆಗೆ ಬಂದು ಕನ್ನಡ ಸಾಹಿತ್ಯ ಪ್ರಶಸ್ತಿ ನೀಡಿ ಗೌರವಿಸಿದ್ದು, ಬದುಕಿನಲ್ಲಿ ಹೊಸ ಲವಲವಿಕೆಯನ್ನು ಮೂಡಿಸಿದೆ ಎಂದರು. ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ಹಿರಿಯರ ಜೀವನ, ಸಾಧನೆಗಳು ಅಪೂರ್ವವಾಗಿದ್ದು, ಭವಿಷ್ಯದ ಪೀಳಿಗೆಗೆ ಜ್ಞಾನದೀವಿಗೆಯಾಗಿ ಉಳಿಸುವ ನಿಟ್ಟಿನಲ್ಲಿ ಪುಸ್ತಕಗಳ ರೂಪದಲ್ಲಿ ದಾಖಲಿಸುವ ಕಾರ್ಯವನ್ನು ಸಾಹಿತ್ಯ ಪರಿಷತ್ತು ಮಾಡಲಿದೆ ಎಂದರು.ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಂಶುಪಾಲ ಎಂ.ಗೋಪಾಲಕೃಷ್ಣ ರಾವ್ ಮಟ್ಟು, ನಿವೃತ್ತ ಪ್ರಾಂಶುಪಾಲೆ ಎ.ಲಕ್ಷ್ಮೀ ಬಾಯಿ ಮಾತನಾಡಿದರು.

ಜಿಲ್ಲಾ ಕಸಾಪ ಜಿಲ್ಲಾ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಪ್ರಮುಖರಾದ ದೇವದಾಸ್ ಹೆಬ್ಬಾರ್, ನರಸಿಂಹಮೂರ್ತಿ ರಾವ್, ಭಾಸ್ಕರ ಕಾಮತ್, ಬಿಳಿಯಾರು ಭಾಸ್ಕರ್ ಆಚಾರ್ಯ, ಪುಷ್ಪಾ ವಿ.ಮಧ್ಯಸ್ಥ ವೇದಿಕೆಯಲ್ಲಿದ್ದರು.

ಸಮಾರಂಭದ ಅಧ್ಯಕ್ಷತೆಯನ್ನು ಕಾಪು ತಾಲೂಕು ಕಸಾಪ ಅದ್ಯಕ್ಷ ಬಿ.ಪುಂಡಲೀಕ ಮರಾಠೆ ವಹಿಸಿದ್ದರು. ಕಾರ್ಯಕ್ರಮ ಸಂಚಾಲಕ ಕೃಷ್ಣಕುಮಾರ್ ರಾವ್ ಮಟ್ಟು ಪರಿಚಯಿಸಿದರು. ಕಾರ್ಯದರ್ಶಿ ನೀಲಾನಂದ ನಾಯ್ಕ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಸಾಪ ಕೋಶಾಧಿಕಾರಿ ವಿದ್ಯಾಧರ ಪುರಾಣಿಕ್ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!