ಕನ್ನಡಪ್ರಭ ವಾರ್ತೆ ಸೊರಬ
ಪಟ್ಟಣದ ಕನ್ನಡ ಭವನದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ಕನ್ನಡ ಸಾಹಿತ್ಯ ಪರಿಷತ್ನ ೧೧೨ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ನ ಹುಟ್ಟು, ಬೆಳವಣಿಗೆ ಕುರಿತು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಉಪನ್ಯಾಸಕಿ ಎ.ವಿ. ಪವಿತ್ರಾ ಉಪನ್ಯಾಸ ನೀಡಿ, ಕನ್ನಡ ಸಾಹಿತ್ಯ ಪರಿಷತ್ತು ನಾಡಿನ ಏಕೀಕರಣದ ಹೋರಾಟಗಾರರು, ಸಾಹಿತಿಗಳು, ವಿದ್ಯಾಂಸರು, ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್, ಎಚ್.ವಿ. ನಂಜುಂಡಯ್ಯ, ಗಂಗಾಧರರಾವ್ ದೇಶಪಾಂಡೆ, ಆಲೂರು ವೆಂಕಟರಾಯರು, ಸರ್ ಎಂ. ವಿಶ್ವೇಶ್ವರಯ್ಯ, ಕುವೆಂಪು ಸೇರಿದಂತೆ ಅಧ್ಯಾಪಕರು, ಸಾರ್ವಜನಿಕ ಗಣ್ಯರು ಹೀಗೆ ಹಲವಾರು ಗಣ್ಯ ವ್ಯಕ್ತಿಗಳ ನಾಡು, ನುಡಿ ಸೇವಕರ ಗುಂಪಿನ ಶ್ರಮ ತ್ಯಾಗಗಳ ಫಲವಾಗಿ ರೂಪಗೊಂಡಿದ್ದೇ ಕನ್ನಡ ಸಾಹಿತ್ಯ ಪರಿಷತ್ತು ಎಂದರು.ಸೊರಬ ತಾಲೂಕಿನಲ್ಲಿ ಏಳುನೂರು ಜನ ಆಜೀವ ಸದಸ್ಯರಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಆಜೀವ ಸದಸ್ಯರಾಗಬೇಕು. ಆ ಮೂಲಕ ಪರಿಷತ್ತನ್ನು ಉಳಿಸಿ ಬೆಳೆಸಲು ಮುಂದಾಗಬೇಕು. ಇದರಿಂದ ನಾಡಿನ ಭಾಷೆ, ಸಂಸ್ಕೃತಿ ಇತಿಹಾಸ, ಪರಂಪರೆ ಉಳಿಸಲು ಸಾಧ್ಯ. ಈ ನಿಟ್ಟಿನಲ್ಲಿ ಸೊರಬ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಷಣ್ಮುಖಾಚಾರ್ ಮತ್ತು ಅವರ ತಂಡವು ಅತ್ಯುತ್ತಮ ಕೆಲಸ ಮಾಡುತ್ತಿದೆ ಎಂದರು.
ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಷಣ್ಮುಖಾಚಾರ್ ಮಾತನಾಡಿ, ಕನ್ನಡ ಕಟ್ಟುವ ಕೆಲಸ ಅಷ್ಟು ಸುಲಭವಲ್ಲ. ಸಾರ್ವಜನಿಕರನ್ನು ಒಳಗೊಂಡ ಅನೇಕ ಕಾರ್ಯಕ್ರಮಗಳನ್ನು ನಡೆಸಿದ್ದೇವೆ. ಕಣಹಬ್ಬ, ಆಲೆಮನೆ ಹಬ್ಬ, ಸಾಹಿತ್ಯ ಸಮ್ಮೇಳನ, ತಾಲೂಕು ಮತ್ತು ಜಿಲ್ಲಾ ಮಟ್ಟದ ಕಥೆ, ಕವಿಗೋಷ್ಠಿಗಳು, ಮನೆಯಂಗಳದಲ್ಲಿ ಸಾಹಿತ್ಯ ಸಂಭ್ರಮ, ಬೃಹತ್ ಆಹಾರ ಮೇಳಗಳು ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಸಾರ್ವಜನಿಕರನ್ನು ಒಳಗೊಂಡು ಯಶಸ್ವಿಯಾಗಿ ನಡೆಸುತ್ತಾ ಬಂದಿದ್ದೇವೆ. ಆದರೆ ಸಾರ್ವಜನಿಕರು ನಿರೀಕ್ಷಿತ ಮಟ್ಟದಲ್ಲಿ ಕನ್ನಡಪರ ಚಟುವಟಿಕೆಗಳಲ್ಲಿ ಭಾಗವಹಿಸದಿರುವುದು ಆತಂಕದ ಸಂಗತಿ ಎಂದರು.