ಕನ್ನಡಪ್ರಭ ವಾರ್ತೆ ಕೋಲಾರ ರಾಜ್ಯದಲ್ಲಿ ಅನ್ಯ ಭಾಷಿಕರ ಹಾವಳಿ ಹೆಚ್ಚಾಗಿದೆ. ಮುಂದೊಂದು ದಿನ ಕನ್ನಡ ಹುಡುಕುವ ಸಂದರ್ಭ ಬಂದರೂ ಆಶ್ಚರ್ಯವಿಲ್ಲ. ಕನ್ನಡಕ್ಕೆ ಮೊದಲ ಆದ್ಯತೆ ನೀಡಿ ನಾವೆಲ್ಲರೂ ಕನ್ನಡವನ್ನು ಉಳಿಸಿ ಬೆಳೆಸಬೇಕಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.ತಾಲೂಕಿನ ನರಸಾಪುರದಲ್ಲಿ ಕನ್ನಡಸೇನೆ ಕರ್ನಾಟಕದಿಂದ ೭೦ನೇಯ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.ಕನ್ನಡೇತರರಿಗೆ ಕನ್ನಡ ಕಲಿಸಿ
ನರಸಾಪುರ ವ್ಯಾಪ್ತಿಯಲ್ಲಿ ಅಭಿವೃದ್ಧಿಗಾಗಿ ಈಗಾಗಲೇ ೩೫ ಕೋಟಿ ಅನುದಾನ ಬಿಡುಗಡೆ ಮಾಡಿ ಕಾಮಗಾರಿಗಳು ನಡೆಯುತ್ತಿವೆ. ಈ ಭಾಗದಲ್ಲಿ ಸರ್ಕಾರಿ ರಾಜಕಾಲುವೆ, ಕೆರೆ, ಜಾಗಗಳನ್ನು ಒತ್ತುವರಿಯಾಗಿ ಅನ್ಯ ಕಾರ್ಯಗಳಿಗೆ, ಸರ್ಕಾರಿ ಕಚೇರಿಗಳಿಗೆ ಜಾಗವಿಲ್ಲವಾಗಿದೆ ಸ್ಮಶಾನಕ್ಕೆ ಕೂಡಲೇ ಜಾಗ ಗುರುತಿಸಿ ಜಾಗ ಮಂಜೂರು ಮಾಡಿಸುವ ಜವಾಬ್ದಾರಿ ನಮ್ಮದು ಎಂದರು.ಡಿಸಿಸಿ ಬ್ಯಾಂಕ್ ನಿರ್ದೇಶಕ ಖಾಜಿಕಲ್ಲಹಳ್ಳಿ ಮುನಿರಾಜು, ಸೂಲೂರು ಗ್ರಾಪಂ ಅಧ್ಯಕ್ಷ ಪೆಮ್ಮಶೆಟ್ಟಿಹಳ್ಳಿ ಸುರೇಶ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಕಾರ್ಯದರ್ಶಿ ವೀರೇಂದ್ರ ಪಾಟೀಲ್, ವೈದ್ಯ ಡಾ.ನಾರಾಯಣಸ್ವಾಮಿ ಲಕ್ಷ್ಮೀಸಾಗರ ಸುನಿಲ್ ಕುಮಾರ್, ಮುಖಂಡರಾದ ನರಸಾಪುರ ನವೀನ್, ಜಾಲಿ ಬಾಬು, ಎಂ.ಟಿ.ಬಿ ಶ್ರೀನಿವಾಸ್, ಕನ್ನಡಸೇನೆಯ ಚಂದ್ರು ಇದ್ದರು.