ಗಡಿ ತಾಲೂಕಿನಲ್ಲಿ ಕನ್ನಡ ಬೆಳೆಯಲಿ

KannadaprabhaNewsNetwork |  
Published : Aug 18, 2025, 12:00 AM IST
ಜೋಯಿಡಾ 17  ರವಿವಾರ | Kannada Prabha

ಸಾರಾಂಶ

ರಾಜ್ಯದ ಗಡಿ ತಾಲೂಕಿನಲ್ಲಿ ಕನ್ನಡ ಬೆಳೆಯಬೇಕು. ಇಲ್ಲಿನ ಮಿತ್ರ ಭಾಷಿಕರು ಕನ್ನಡವನ್ನು ನಿರರ್ಗಳವಾಗಿ ಮಾತನಾಡುವಂತಾಗಬೇಕು.

ಜೋಯಿಡಾ: ರಾಜ್ಯದ ಗಡಿ ತಾಲೂಕಿನಲ್ಲಿ ಕನ್ನಡ ಬೆಳೆಯಬೇಕು. ಇಲ್ಲಿನ ಮಿತ್ರ ಭಾಷಿಕರು ಕನ್ನಡವನ್ನು ನಿರರ್ಗಳವಾಗಿ ಮಾತನಾಡುವಂತಾಗಬೇಕು. ನಮ್ಮ ಕನ್ನಡ ಭಾಷೆ, ನೆಲದ ಮೇಲಿನ ಪ್ರೀತಿ ಗೌರವ ಮೂಡುವಂತಾಗಬೇಕು ಎಂದು ರಾಜ್ಯ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ ಹಾನಗಲ್ ಹೇಳಿದರು.

ಅವರು ತಾಲೂಕಿನ ಉಳವಿ ಚೆನ್ನಬಸವೇಶ್ವರ ಪ್ರೌಢಶಾಲೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಗ್ರಾಪಂ ಉಳವಿ, ಚೆನ್ನಬಸವೇಶ್ವರ ಟ್ರಸ್ಟ್‌ ಸಹಯೋಗದಲ್ಲಿ ಉಳವಿ ಚೆನ್ನಬಸವೇಶ್ವರ ಪ್ರೌಢಶಾಲೆಯಲ್ಲಿ ನಡೆದ ಕನ್ನಡ ಕಲಿಕಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಜೋಯಿಡಾ ಗಡಿ ತಾಲೂಕು ಏಳು ಭಾಷೆಗಳನ್ನಾಡುವ ವಿಶಿಷ್ಟ ಗಡಿ ತಾಲೂಕು. ಇಲ್ಲಿನ ಬಹುತೇಕ ಮಿತ್ರ ಭಾಷಿಕರು ಕನ್ನಡವನ್ನು ಅರ್ಥೈಸಿಕೊಳ್ಳುತ್ತಾರೆ. ಆದರೆ ಮಾತನಾಡುವವರು ಕಡಿಮೆ. ಇಲ್ಲಿನ ಗ್ರಾಮೀಣ ಭಾಗದ ಮಕ್ಕಳಲ್ಲಿಯೂ ಕನ್ನಡದ ಕೊರತೆ ಎದ್ದು ಕಾಣುತ್ತಿದೆ. ಇಲ್ಲಿ ಕನ್ನಡ ಕಲಿಕಾ ಕೇಂದ್ರವನ್ನು ಸ್ಥಾಪಿಸುವ ಮೂಲಕ ಮುಂದಿನ ದಿನದಲ್ಲಿ ಇಲ್ಲಿ ಎಲ್ಲರೂ ಕನ್ನಡವನ್ನು ಕಲಿಯಲು ಸಹಕಾರಿಯಾಗಲಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಉಳವಿ ಗ್ರಾಪಂ ಅಧ್ಯಕ್ಷ ಮಂಜುನಾಥ ಮೊಕಾಶಿ, ನಮ್ಮ ತಾಲೂಕಿಗೆ ಕಲಿಕಾ ಕೇಂದ್ರದ ಅವಶ್ಯಕತೆ ಇದೆ. ಪ್ರಾಧಿಕಾರದ ಕಾರ್ಯದರ್ಶಿಯಲ್ಲಿ ಮನವಿ ಮಾಡಿದ ತಕ್ಷಣವೇ ನಮಗೆ ಎರಡು ಕಲಿಕಾ ಕೇಂದ್ರಕ್ಕೆ ಮಂಜೂರಿ ನೀಡಿದರು. ಅವರೇ ಸ್ವತಃ ಇಲ್ಲಿಗೆ ಬಂದು ಉದ್ಘಾಟಿಸಿ ಕೊಟ್ಟಿರುವುದು ಹೆಮ್ಮೆಯ ಸಂಗತಿ. ಸಮಸ್ತ ಜನತೆಯ ಪರವಾಗಿ ಅಭಿನಂದಿಸುತ್ತೇನೆ ಎಂದರು.

ಕಸಾಪ ಅಧ್ಯಕ್ಷ ಪಾಂಡುರಂಗ ಪಟಗಾರ, ನಂದಿಗದ್ದೆ ಗ್ರಾಪಂ ಅಧ್ಯಕ್ಷ ಅರುಣ ದೇಸಾಯಿ ಮಾತನಾಡಿದರು.

ಕ್ಯಾಪ್ಶನ್‌: ಜೋಯಿಡಾದ ಉಳವಿ ಚೆನ್ನಬಸವೇಶ್ವರ ಪ್ರೌಢಶಾಲೆಯಲ್ಲಿ ನಡೆದ ಕನ್ನಡ ಕಲಿಕಾ ಕೇಂದ್ರ ಉದ್ಘಾಟಿಸಿ ರಾಜ್ಯ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ ಹಾನಗಲ್ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌