ನಿತ್ಯ ಬಳಕೆಯಿಂದ ಕನ್ನಡದ ಉಳಿವು: ಡಾ.ಸುರೇಶ್‌ ಕುಮಾರ್‌

KannadaprabhaNewsNetwork |  
Published : Nov 11, 2024, 01:01 AM IST
ನರಸಿಂಹರಾಜಪುರ ರೋಟರಿ ಕ್ಲಬ್ ಆಶ್ರಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮೂಡಬಾಗಿಲು ಜ್ಞಾನ ಗಂಗೋತ್ರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಶ್ರೀಕಾಂತ್ ಅವರನ್ನು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಡಾ.ವಿಜಯಕುಮಾರ್, ರೋಟರಿ ಕ್ಲಬ್ ಅಧ್ಯಕ್ಷ ದಿವಾಕರ ಮತ್ತಿತರರು ಇದ್ದರು. | Kannada Prabha

ಸಾರಾಂಶ

ನರಸಿಂಹರಾಜಪುರ, ಕನ್ನಡವನ್ನು ಪ್ರತಿನಿತ್ಯ ಬಳಸಿದರೆ ಕನ್ನಡ ತಾನಾಗಿಯೇ ಉಳಿಯುತ್ತದೆ ಎಂದು ನರಸಿಂಹರಾಜಪುರದ ವೈದ್ಯ ಡಾ.ಸುರೇಶ್‌ ಕುಮಾರ್ ತಿಳಿಸಿದರು.

ರೋಟರಿ ಕ್ಲಬ್ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭ, ಸನ್ಮಾನ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಕನ್ನಡವನ್ನು ಪ್ರತಿನಿತ್ಯ ಬಳಸಿದರೆ ಕನ್ನಡ ತಾನಾಗಿಯೇ ಉಳಿಯುತ್ತದೆ ಎಂದು ನರಸಿಂಹರಾಜಪುರದ ವೈದ್ಯ ಡಾ.ಸುರೇಶ್‌ ಕುಮಾರ್ ತಿಳಿಸಿದರು.

ರೋಟರಿ ಕ್ಲಬ್ ಆಶ್ರಯದಲ್ಲಿ ಶನಿವಾರ ಸಂಜೆ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ , ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ಭಾಷೆ ಸಂಹವನಕ್ಕಾಗಿ ಬಳಸುವ ಮಾಧ್ಯಮವಾಗಿದೆ. ಕನ್ನಡ ಭಾಷೆಯನ್ನು ಪ್ರತಿಕ್ಷಣವೂ ಕೂಡ ತಪ್ಪಾಗಿ ಬಳಸಿ ಕೊಲ್ಲುತ್ತಿದ್ದೇವೆ ಎಂದು ವಿಷಾಧಿಸಿದರು.

ಕನ್ನಡ ಭಾಷೆ ಭಾವನೆಗಳನ್ನು ವ್ಯಕ್ತಪಡಿಸಲು ಇರುವ ಸಾಧನವಾಗಿದೆ. ಕನ್ನಡವನ್ನು ಉಳಿಸುವುದೂ ಬೇಡ, ಬೆಳೆಸುವುದೂ ಬೇಡ, ಕನ್ನಡವನ್ನು ಪ್ರತಿ ನಿತ್ಯ ಮಾತನಾಡುತ್ತಾ ಬಂದರೆ ಕನ್ನಡ ಭಾಷೆ ಬೆಳೆಯುತ್ತದೆ ಎಂದರು.ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ಜ್ಞಾನಗಂಗೋತ್ರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಜಿ.ಎ.ಶ್ರೀಕಾಂತ್ ಮಾತನಾಡಿ, ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನವಿದೆ. ಕನ್ನಡ ಭಾಷೆಗೆ ಅತೀ ಹೆಚ್ಚು ಅಂದರೆ 8 ಜ್ಞಾನಪೀಠ ಪ್ರಶಸ್ತಿಗಳು ಲಭಿಸಿವೆ. ಆದರೆ, ಕನ್ನಡನಾಡಿನಲ್ಲಿ ಕನ್ನಡವನ್ನು ಉಳಿಸಲೆಂದೇ ಕನ್ನಡ ಕಾವಲು ಸಮಿತಿ ಇರುವುದು ವಿಷಾದದ ಸಂಗತಿಯಾಗಿದೆ ಎಂದರು.ಇದೇ ಸಂದರ್ಭದಲ್ಲಿ ಮೂಡಬಾಗಿಲು ಜ್ಞಾನ ಗಂಗೋತ್ರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಶ್ರೀಕಾಂತ್‌ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಅಧ್ಯಕ್ಷ ಜಿ.ಆರ್.ದಿವಾಕರ ಮಾತನಾಡಿದರು. ಸಭೆಯಲ್ಲಿ ರೋಟರಿ ಕ್ಲಬ್ ಕಾರ್ಯದರ್ಶಿ ಮಧುವೆಂಕಟೇಶ್, ರೋಟರಿ ಕ್ಲಬ್‌ ಸದಸ್ಯರಾದ ಡಿ.ಸಿ.ದಿವಾಕರ,ಎಸ್.ಎಸ್.ಶಾಂತಕುಮಾರ್, ಬಿ.ಟಿ. ವಿಜಯಕುಮಾರ್, ಜಿ.ದಿವಾಕರ, ಎಂ.ಆರ್.ಸುಂದರೇಶ್, ಎಸ್.ಎನ್.ಲೋಕೇಶ್, ಎಚ್.ಡಿ.ವಿನಯ್, ಶೇಷಾಚಲ, ಮನೀಶ, ರಜತ್, ಚೇತನ್, ವಿದ್ಯಾನಂದಕುಮಾರ್, ಕೆ.ಎಸ್.ರಾಜಕುಮಾರ್, ಎನ್.ಕೆ.ಕಿರಣ್,ಧನಂಜಯ್, ಅಭಿಷೇಕ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಕ್ಷ್ಮೀ ಹೆಬ್ಬಾಳಕರ್‌ ಬ್ಯಾಟಿಂಗ್‌ಗೆ ಶಾಸಕ ಆಸೀಫ್ ಸೇಠ್ ಬೋಲ್ಡ್‌
ಮೆಟ್ರೋ ದರ ಏರಿಸಿದ್ದು ನಾವಲ್ಲ, ಕೇಂದ್ರ : ಸಿಎಂ ಸಿದ್ದರಾಮಯ್ಯ