ವಿಶ್ವವಿದ್ಯಾಲಯದ 33ನೇ ನುಡಿಹಬ್ಬ ಪ್ರಯುಕ್ತ 60 ಪುಸ್ತಕಗಳ ಲೋಕಾರ್ಪಣೆ ಸಮಾರಂಭಕನ್ನಡಪ್ರಭ ವಾರ್ತೆ ಹೊಸಪೇಟೆ
ಕನ್ನಡ ವಿಶ್ವವಿದ್ಯಾಲಯದ ಮಂಟಪ ಸಭಾಂಗಣದಲ್ಲಿ 33ನೇ ನುಡಿಹಬ್ಬ ಪ್ರಯುಕ್ತ ಮಂಗಳವಾರ ಪ್ರಸಾರಾಂಗ ಹಮ್ಮಿಕೊಂಡಿದ್ದ 60 ಪುಸ್ತಕಗಳ ಲೋಕಾರ್ಪಣೆ ಸಮಾರಂಭವನ್ನು ಉದ್ಘಾಟಿಸಿ, ಪುಸ್ತಕ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಕನ್ನಡ ವಿಶ್ವವಿದ್ಯಾಲಯ ಒಂದು ಐಕಾನಿಕ್ ವಿಶ್ವವಿದ್ಯಾಲಯ ಆಗಿದೆ. ಇಂತಹ ವಿಶಿಷ್ಟವಾದ ವಿಶ್ವವಿದ್ಯಾಲಯ ನಮ್ಮಲ್ಲಿರುವುದು ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಹೆಮ್ಮೆಯ ವಿಷಯ. ವಿಶ್ವವಿದ್ಯಾಲಯಕ್ಕೆ ಬೇಕಾದ ಸಹಕಾರವನ್ನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕೊಡುಸುವೆ. ವಿಜಯನಗರ ಜಿಲ್ಲೆಗೆ ಇಂದು ಆದಾಯದ ಮೂಲ ಪ್ರವಾಸೋದ್ಯಮವಾಗಿದೆ. ಆದ್ದರಿಂದ ವಿಶ್ವವಿದ್ಯಾಲಯದಲ್ಲಿ ಹೋಟೆಲ್ ಮ್ಯಾನೇಜ್ಮೆಂಟ್ ಕೋರ್ಸ್ ಆರಂಭಿಸುವುದರ ಮೂಲಕ ದೇಶ, ವಿದೇಶಿ ಪ್ರವಾಸಿಗರಿಗೆ ಕನ್ನಡದ ದೇಶೀ ಆಹಾರ, ಕಲೆ, ಸಂಸ್ಕೃತಿಯನ್ನು ಪರಿಚಯಿಸುವ ಕೆಲಸ ಆಗಬೇಕು ಎಂದರು.ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವುದರ ಮೂಲಕ ಹಂಪಿಯ ಪ್ರವಾಸಿಗರಿಗೆ 25 ರೆಸ್ಟೋರೆಂಟ್ಗಳನ್ನು ತೆರೆಯುವ ಕೆಲಸವಾಗುತ್ತಿದೆ. ಹಂಪಿಯ ಸ್ಮಾರಕಗಳು ಮತ್ತು ಪರಿಸರವನ್ನು ನೋಡಲು ಬರುವ ಪ್ರವಾಸಿಗರು ಕನ್ನಡ ವಿಶ್ವವಿದ್ಯಾಲಯಕ್ಕೆ ಆಗಮಿಸಿ ಇಲ್ಲಿನ ಪುಸ್ತಕಗಳನ್ನು ಓದುವ ವಾತಾವರಣ ಸೃಷ್ಟಿಸಬೇಕು. ಹಂಪಿ ಉತ್ಸವದ ರೂವಾರಿ ಎಂ.ಪಿ. ಪ್ರಕಾಶ ಅವರು ಹಂಪಿ ಹಾಗೂ ಕನ್ನಡ ವಿಶ್ವವಿದ್ಯಾಲಯದ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು ಎಂದರು.
ಕನ್ನಡ ವಿಶ್ವವಿದ್ಯಾಲಯದ ಕುಲಸಚಿವ ಡಾ. ವಿಜಯ್ ಪೂಣ್ಣಚ್ಚ ತಂಬಂಡವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕನ್ನಡ ವಿವಿ ಪ್ರಸಾರಾಂಗದ ನಿರ್ದೇಶಕ ಡಾ. ಮಾಧವ ಪೆರಾಜೆ, ವಿವಿ ಸಹಾಯಕ ಕುಲಸಚಿವ ಎಂ.ಎಂ. ಶಿವಪ್ರಕಾಶ ಮತ್ತಿತರರಿದ್ದರು.