ಕನ್ನಡ ವಿವಿ ಜಮೀನು ಪರಭಾರೆ: ಸಿಪಿಎಂ ಖಂಡನೆ

KannadaprabhaNewsNetwork |  
Published : Dec 03, 2025, 02:30 AM IST
2ಎಚ್‌ಪಿಟಿ3- ಹೊಸಪೇಟೆಯಲ್ಲಿ ಮಂಗಳವಾರ ಸಿಪಿಐಎಂ ಪಕ್ಷದ ವತಿಯಿಂದ ವಿಜಯನಗರ ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ ಅವರಿಗೆ ಕನ್ನಡ ವಿವಿ ಭೂಮಿ ಬಾಡಿಗೆ ನೀಡುವುದನ್ನು ಖಂಡಿಸಿ ಮನವಿಪತ್ರ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಇತ್ತೀಚಿನ ದಿನಗಳಲ್ಲಿ ಕನ್ನಡ ವಿಶ್ವವಿದ್ಯಾಲಯದ ಭೂಮಿ ವಿಷಯಕ್ಕೆ ಸಂಬಂಧಿಸಿದಂತೆ ಅನೇಕ ಊಹಾಪೋಹಗಳು ಚರ್ಚೆಯಾಗುತ್ತಿವೆ.

ಹೊಸಪೇಟೆ: ಕನ್ನಡ ವಿಶ್ವವಿದ್ಯಾಲಯದ ಭೂಮಿಯನ್ನು ಬೇರೆಯವರಿಗೆ ಬಾಡಿಗೆ ನೀಡುವುದು ಮತ್ತು ಪರಭಾರೆ ಮಾಡುವುದನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಸಿಪಿಎಂ ವತಿಯಿಂದ ವಿಜಯನಗರ ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

ಇತ್ತೀಚಿನ ದಿನಗಳಲ್ಲಿ ಕನ್ನಡ ವಿಶ್ವವಿದ್ಯಾಲಯದ ಭೂಮಿ ವಿಷಯಕ್ಕೆ ಸಂಬಂಧಿಸಿದಂತೆ ಅನೇಕ ಊಹಾಪೋಹಗಳು ಚರ್ಚೆಯಾಗುತ್ತಿವೆ. 2010ರ ಆಸುಪಾಸಿನಲ್ಲಿ ಕನ್ನಡ ವಿಶ್ವವಿದ್ಯಾಲಯದ 80 ಎಕರೆಯಲ್ಲಿ ಥೀಮ್ ಪಾರ್ಕ್ ಸ್ಥಾಪಿಸುವಾಗಲು ಭೂಮಿ ನೀಡುವುದನ್ನುಸಿಪಿಐಎಂ ಕಟುವಾಗಿ ವಿರೋಧಿಸಿತ್ತು. ಕನ್ನಡ ವಿಶ್ವವಿದ್ಯಾಲಯದ ಅಸ್ತಿತ್ವದ ಉಳಿವಿಗೆ ಬೆನ್ನೆಲುಬಾಗಿ ನಿಂತಿತ್ತು. 1991ರಲ್ಲಿ ಪ್ರಾರಂಭವಾದ ವಿಶ್ವವಿದ್ಯಾಲಯ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳುವಲ್ಲಿ ಅನೇಕ ಸಾಧಕ- ಬಾಧಕಗಳನ್ನು ಕಂಡಿದೆ. ಇಂತಹ ಸಂದರ್ಭದಲ್ಲಿ ಅನುದಾನ, ನೇಮಕಾತಿ ವಿಚಾರಗಳಲ್ಲಿ ಸಾಕಷ್ಟು ಚರ್ಚೆಗಳನ್ನು ಹುಟ್ಟು ಹಾಕಿದೆ. ನಾಡಿನ ಗರಿಮೆಯಾದ ಹಂಪಿ ಕನ್ನಡ ವಿಶ್ವವಿದ್ಯಾಲಯ ರಾಜ್ಯದಲ್ಲದೆ ದೇಶದಲ್ಲಿ ತನ್ನದೇಯಾದ ಹಿರಿಮೆಯನ್ನು ಉಳಿಸಿಕೊಂಡಿದೆ. ಇಂತಹ ವಿಶ್ವವಿದ್ಯಾಲಯಕ್ಕೆ ಇನ್ನು ಅನೇಕ ಅವಕಾಶಗಳು, ಅನುದಾನ, ಮೂಲ ಸೌಲಭ್ಯಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.

ಕನ್ನಡ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಭೂಮಿಯನ್ನು ಗುತ್ತಿಗೆ ಕೊಡುವ ವಿಷಯದಲ್ಲಿ ಅನೇಕ ಊಹಾಪೋಹಗಳ ಚರ್ಚೆಗೆ ಬಂದಿವೆ. ಇಂಥ ವಿಷಯಗಳು ಚರ್ಚೆಗೆ ಬಂದಿರುವುದು ಖೇದಕರ ಸಂಗತಿಯಾಗಿದೆ. ಕನ್ನಡ ವಿಶ್ವವಿದ್ಯಾಲಯ ತನ್ನ ವಿಶಾಲತೆಯನ್ನು ಹೆಚ್ಚಿಸಿಕೊಳ್ಳಬೇಕಾದಂತ ಅನಿವಾರ್ಯತೆಯು ನಮ್ಮ ನಾಡಿಗಿದೆ. ಇದನ್ನು ಮರೆಮಾಚಿ ಕನ್ನಡ ವಿಶ್ವವಿದ್ಯಾಲಯದ ಒಳಗಡೆ ಇರುವ 100 ಎಕರೆಯಲ್ಲಿ ಕೆಇಬಿ ಸಂಸ್ಥೆಯಿಂದ ಸೋಲಾರ್ ಘಟಕ ಸ್ಥಾಪಿಸಲು ಭೂಮಿಯನ್ನು ಬಾಡಿಗೆ ಪಡೆದು, ಮುಂದೊಂದು ದಿನ ಪರಭಾರೆ ಮಾಡಿಕೊಳ್ಳುವ ಸಂಭವ ಇದೆ ಎನ್ನುವ ಆತಂಕವಿದೆ. ಇದನ್ನು ಸಿಪಿಎಂ ತೀವ್ರವಾಗಿ ಖಂಡಿಸಿದೆ. ಯಾವುದೇ ಕಾರಣಕ್ಕೂ ಭೂಮಿಯನ್ನು ಲೀಜ್‌ ಅಥವಾ ಬಾಡಿಗೆ ಕೊಡುವ ಪ್ರಯತ್ನ ಮಾಡಬಾರದು ಎಂದು ಸಿಪಿಎಂ ಮುಖಂಡರು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಸಿಪಿಎಂ ಪಕ್ಷದ ಮುಖಂಡರಾದ ಆರ್. ಬಾಸ್ಕರ್ ರೆಡ್ಡಿ, ಎನ್‌. ಯಲ್ಲಾಲಿಂಗ, ವಿ. ಸ್ವಾಮಿ, ಬಿಸಾಟಿ ಮಹೇಶ್‌ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು