ಕನ್ನಡಪ್ರಭ ವಾರ್ತೆ ಹನೂರು
ಪಟ್ಟಣದ ಪಿಎಂ ಶ್ರೀ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಅರಣ್ಯ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.
ಮಕ್ಕಳಲ್ಲಿ ಅವರದೇ ಆದಂತಹ ಪ್ರತಿಭೆಗಳು ಅಡಗಿರುತ್ತದೆ. ಇಂತಹ ಪ್ರತಿಭೆಗಳು ಅನಾವರಣವಾಗಲಿಕ್ಕೆ ಚಿತ್ರಕಲೆಯಂತಹ ಸ್ಪರ್ಧೆ ತುಂಬಾ ಅವಶ್ಯಕತೆಯಾಗಿದೆ. ಇದರಿಂದ ಮಕ್ಕಳಲ್ಲಿ ಏಕಾಗ್ರತೆ ಹೆಚ್ಚುವ ಮೂಲಕ ಆಸಕ್ತಿ ಹೆಚ್ಚುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ನಮ್ಮ ಪಾತ್ರ ಏನು ಎಂಬುದನ್ನು ಸಹ ಅರಿತುಕೊಳ್ಳಬಹುದು. ಹಾಗಾಗಿ ನಮ್ಮ ತಾಲೂಕಿನಲ್ಲಿ ಇಂತಹ ಕಾರ್ಯಕ್ರಮ ನಡೆಯುತ್ತಿರುವುದು ಮಕ್ಕಳಿಗೆ ಒಂದು ಸುವರ್ಣ ಅವಕಾಶವಾಗಿದೆ ಎಂದು ಅಭಿಪ್ರಾಯಪಟ್ಟರು.ಸುದ್ದಿ ಮಾಧ್ಯಮವೊಂದು ಈ ರೀತಿಯ ಸಾಮಾಜಿಕ ಕಳಕಳಿಯನ್ನು ಮೆರೆಯುತ್ತಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಹನೂರು ತಾಲೂಕಿನ ಬಹುಭಾಗ ಅರಣ್ಯ ಪ್ರದೇಶದಿಂದ ಕೂಡಿದೆ. ಪ್ರತಿನಿತ್ಯ ಅರಣ್ಯ ಮತ್ತು ಮಾನವ ಸಂಘರ್ಷ ನಡೆಯುತ್ತಿರುತ್ತದೆ. ಮಾನವ ಮತ್ತು ವನ್ಯಜೀವಿ ಹೊಂದಾಣಿಕೆಯಿಂದ ಬದುಕಬೇಕಾದ ಅನಿವಾರ್ಯತೆ ಇರುವುದರಿಂದ ಅರಣ್ಯ ಮತ್ತು ವನ್ಯಜೀವಿಗಳ ಅರಿವು ಅತ್ಯಗತ್ಯ. ಈ ಹಿನ್ನಲೆಯಲ್ಲಿ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಉತ್ತಮ ವೇದಿಕೆ ನಿರ್ಮಾಣ ಮಾಡಿದೆ. ಈ ಸಂಸ್ಥೆಯ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಅರಣ್ಯ ಸಚಿವರೊಡನೆ ಚಾಲನೆ ನೀಡಿದ್ದಾರೆ. ರಾಜ್ಯಾದ್ಯಂತ ಈ ಒಂದು ಕಾರ್ಯಕ್ರಮ ನಡೆಯುತ್ತಿದ್ದು, ನಮ್ಮ ಭಾಗದ ಮಕ್ಕಳು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಲಿ, ನಮ್ಮ ಭಾಗದಲ್ಲಿ ಮುಂಗಾರು ಮಳೆ ಸಮರ್ಪಕವಾಗಿ ಬರುವುದಿಲ್ಲ. ನಮ್ಮ ಜಿಲ್ಲೆ ಉತ್ತಮ ಗಾಳಿ ಹೊಂದಿರುವ ಜಿಲ್ಲೆಗಳಲ್ಲಿ 4ನೇ ಸ್ಥಾನ ಪಡೆದಿರುವುದು ಹೆಮ್ಮೆಯ ವಿಷಯ ಎಂದರು.
ತಾಲೂಕು ದಂಡಾಧಿಕಾರಿ ಚೈತ್ರಾ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಇಸಒಗಳಾದ ಅಶೋಕ್ , ರವೀಂದ್ರ, ಚಿನ್ನಪ್ಪಯ್ಯ, ಮಹೇಶ್, ವೆಂಕಟರಾಜು, ನಲಿಕಲಿ ಕೃಷ್ಣ, ಶಿವಮಲ್ಲು ಹಾಗೂಮುಖಂಡರಾದ ಅಮೋಘ, ವೃಷಬೇಂದ್ರ ಹಾಗೂ ಕನ್ನಡಪ್ರಭ