ಬಸ್ ನಿಲ್ದಾಣದಲ್ಲಿ ಪೆಟ್ರೋಲ್ ಬಂಕ್‌ ಅನುಮತಿಗೆ ಕನ್ನಡಿಗರ ಕರವೇ ವಿರೋಧ

KannadaprabhaNewsNetwork |  
Published : Oct 19, 2025, 01:00 AM IST
ದೊಡ್ಡಬಳ್ಳಾಪುರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಿ.ಎಸ್.ಚಂದ್ರಶೇಖರ್‌ ಮಾತನಾಡಿದರು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ನಗರ ಮಧ್ಯ ಭಾಗದಲ್ಲಿರುವ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪೆಟ್ರೋಲ್‌ ಬಂಕ್‌ ತೆರೆಯಲು ಅನುಮತಿ ನೀಡಿರುವ ಪ್ರಕ್ರಿಯೆ ಖಂಡನೀಯ, ಈ ಬಸ್‌ ನಿಲ್ದಾಣ ಪ್ರದೇಶವನ್ನು ಉಳಿಸಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದು ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಬಿ.ಎಸ್.ಚಂದ್ರಶೇಖರ್ ಅಭಿಪ್ರಾಯಪಟ್ಟರು.

ದೊಡ್ಡಬಳ್ಳಾಪುರ: ನಗರ ಮಧ್ಯ ಭಾಗದಲ್ಲಿರುವ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪೆಟ್ರೋಲ್‌ ಬಂಕ್‌ ತೆರೆಯಲು ಅನುಮತಿ ನೀಡಿರುವ ಪ್ರಕ್ರಿಯೆ ಖಂಡನೀಯ, ಈ ಬಸ್‌ ನಿಲ್ದಾಣ ಪ್ರದೇಶವನ್ನು ಉಳಿಸಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದು ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಬಿ.ಎಸ್.ಚಂದ್ರಶೇಖರ್ ಅಭಿಪ್ರಾಯಪಟ್ಟರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸ್ ನಿಲ್ದಾಣದ ಜಾಗದಲ್ಲಿ ಬಸ್ ಡಿಪೋ ಸಹ ಇದೆ. ಬಸ್ ನಿಲ್ದಾಣ ಹಾಗೂ ಡಿಪೋ ಎರಡೂ ಇರುವ ಈ ಸ್ಥಳ, ನಗರದ ಎರಡು ಪ್ರಮುಖ ರಸ್ತೆಗಳ ಮಧ್ಯಭಾಗದಲ್ಲಿದೆ. ಡಿಪೋ ಚಟುವಟಿಕೆಗಳನ್ನು ಹೊರತುಪಡಿಸಿ, ಬಸ್‌ ನಿಲ್ದಾಣದ ಭಾಗದಲ್ಲಿ ಯಾವುದೇ ಸಕ್ರಿಯ ಸಂಚಾರ ನಡೆಯುತ್ತಿಲ್ಲ. ಇನ್ನೊಂದು ಕಡೆ ಹಳೆ ಬಸ್ ನಿಲ್ದಾಣದ ಪ್ರದೇಶ ಕೆಎಸ್ಆರ್‌ಟಿಸಿ ಹಾಗೂ ಬಿಎಂಟಿಸಿ ಎರಡೂ ಬಸ್ಸುಗಳ ಸಂಚಾರ ಕೇಂದ್ರವಾಗಿದೆ ಎಂದರು.

ದಿನದಿಂದ ದಿನಕ್ಕೆ ಈ ನಮ್ಮ ನಗರವು ಅತಿವೇಗದಲ್ಲಿ ಬೆಳೆಯುತ್ತಿದೆ. ಹೆಚ್ಚುತ್ತಿರುವ ಕೈಗಾರಿಕೆಗಳು ಹಾಗೂ ಕ್ವಿನ್ ಸಿಟಿ ಅಂತಹ ಯೋಜನೆಗಳು ನಮ್ಮ ನಗರದ ಮೌಲ್ಯವನ್ನು ಇನ್ನಷ್ಟು ಎತ್ತರಕ್ಕೆ ತೆಗೆದುಕೊಂಡು ಹೋಗುತ್ತಿವೆ. ಇಂತಹ ಸಂದರ್ಭದಲ್ಲಿ ನಗರದ ಮಧ್ಯ ಭಾಗದಲ್ಲಿರುವ ಈ ಹೊಸ ಬಸ್ ನಿಲ್ದಾಣವನ್ನು ನಮ್ಮ ಬಳಕೆಗೆ ಬರುವಂತೆ ಯೋಚಿಸಿ, ಬಳಸಿಕೊಳ್ಳುವುದು ನಮ್ಮ ಕೈಯಲ್ಲಿದೆ. ಸಂಚಾರ ದಟ್ಟಣೆಯು ದಿನೇ ದಿನೇ ಹೆಚ್ಚುತ್ತಿರುವ ಈ ಸಮಯದಲ್ಲಿ, ಮಧ್ಯಭಾಗದಲ್ಲಿರುವ ಡಿಪೋವನ್ನು ಹೊರವಲಯಕ್ಕೆ ಸ್ಥಳಾಂತರಿಸಿ, ಇರುವ ಜಾಗದ ಸಂಪೂರ್ಣ ಉಪಯೋಗವನ್ನು ಬಸ್ ನಿಲ್ದಾಣದ ಉದ್ದೇಶಕ್ಕಾಗಿ ಬಳಸಿಕೊಂಡು, ಕೆಎಸ್ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್ ನಿಲ್ದಾಣವನ್ನಾಗಿಸಿಕೊಂಡು ಜನಸಾಮಾನ್ಯರಿಗೆ ಸಹಾಯ ಮಾಡುವುದು ನಮ್ಮ ಉದ್ದೇಶ ಎಂದರು.

ರಾಜ್ಯ ಮುಖಂಡರಾದ ಪಿ ವಾಸು, ನರೇಂದ್ರ, ಅರವಿಂದಪ್ಪ, ರಮೇಶ್, ತಾ.ಕಾರ್ಯಧ್ಯಕ್ಷ ಪ್ರದೀಪ್, ಕಾರ್ಮಿಕ ಘಟಕದ ಶಿವ ಶಂಕರ್ ರೆಡ್ಡಿ, ಜಿಲ್ಲಾ ಯುವ ಘಟಕ ಅಧ್ಯಕ್ಷ ರಂಜಿತ್ ಗೌಡ, ರಾಧಾ ಮಣಿ, ತಾಯೇ ಗೌಡ, ಸಾಸಲು ಹೋಬಳಿ ಅಧ್ಯಕ್ಷ ಲಕ್ಷ್ಮೀ ನಾರಾಯಣಪ್ಪ ಉಪಸ್ಥಿತರಿದ್ದರು.

16ಕೆಡಿಬಿಪಿ2-ದೊಡ್ಡಬಳ್ಳಾಪುರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಿ.ಎಸ್.ಚಂದ್ರಶೇಖರ್‌ ಮಾತನಾಡಿದರು.

PREV

Recommended Stories

ಪಕ್ಷದ ಗೆಲುವಿಗೆ ಕಾರ್ಯಕರ್ತೆಯರು ಶ್ರಮಿಸಿ
ಪ್ರತಿಮೆ ಭಗ್ನಗೊಳಿಸಿದ ಕಿಡಿಗೇಡಿಗಳಿಗೆ ಉಗ್ರ ಶಿಕ್ಷೆ ವಿಧಿಸಿ