ಕನ್ನಡಪ್ರಭ ವಾರ್ತೆ ರಾಮನಗರ
ನಗರದ ಐಜೂರು ವೃತ್ತದಲ್ಲಿ ಕೇರಳ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದ ಕಾರ್ಯಕರ್ತರು, ಕಾಸರಗೋಡಿನಲ್ಲಿ ಕನ್ನಡ ಶಾಲೆಗಳನ್ನು ಮುಚ್ಚುವ ಜೊತೆಗೆ ಮಲೆಯಾಳಿ ಭಾಷೆಯನ್ನು ಹೇರುತ್ತಿರುವುದನ್ನು ಖಂಡಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್ , ಕೇರಳದಲ್ಲಿ ಕನ್ನಡಿಗರ ಮೇಲೆ ದಬ್ಬಾಳಿಕೆ ಮಾಡಲಾಗುತ್ತಿದೆ. ಕನ್ನಡ ಶಾಲೆಗಳಲ್ಲಿ ಮಳೆಯಾಳಿ ಭಾಷೆ ಕಲಿಯುವುದನ್ನು ಕಡ್ಡಾಯಗೊಳಿಸಿರುವುದು ಖಂಡನೀಯ. ಕಾಸರಗೋಡು ಸಂಪೂರ್ಣ ಕನ್ನಡಿಗರು ಇರುವ ಜಿಲ್ಲೆ. ಕನ್ನಡಿಗರಿಗೆ ಆಗ್ತಿರುವ ಅನ್ಯಾಯದ ಬಗ್ಗೆ ಸರ್ಕಾರ ಗಮನಹರಿಸಬೇಕು. ಕೂಡಲೇ ಕನ್ನಡಿಗರ ಹಕ್ಕುಗಳ ರಕ್ಷಣೆಗೆ ಸರ್ಕಾರ ಮುಂದಾಗಬೇಕು. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿರೋದು ಸ್ವಾಗತಾರ್ಹ ಎಂದರು.ಈ ಸಮಸ್ಯೆಗೆ ಶಾಶ್ವತ ಪರಿಹಾರ ಬೇಕು. ಕೂಡಲೇ ಸಿಎಂ ವಿಶೇಷ ಅಧಿವೇಶನ ಕರೆದು ಚರ್ಚೆ ಮಾಡಬೇಕು.
ಪ್ರತಿಭಟನೆಯಲ್ಲಿ ಕರುನಾಡ ಸೇನೆ ರಾಜ್ಯ ಉಪಾಧ್ಯಕ್ಷ ಎಂ.ಜಗದೀಶ್ , ಮುಖಂಡರಾದ ಸಿ.ಎಸ್.ಜಯಕುಮಾರ್, ಗಂಗಾಧರ್, ಭಾಗ್ಯ ,ಸುದಾಮ, ವೆಂಕಟಲಕ್ಷ್ಮೀ, ಕೆ.ಜಯರಾಮು, ವಿಜಯಕುಮಾರ್, ಕುಮಾರ್, ಪ್ರಸನ್ನ, ಶಿವಮೂರ್ತಿ, ಕೆಂಪರಾಜು, ಹೇಮಂತ್, ಪಿ.ಸುರೇಶ್, ಗಿರೀಶ್, ನಾರಾಯಣಸ್ವಾಮಿ, ಮಹದೇವ್ ಮತ್ತಿತರರು ಭಾಗವಹಿಸಿದ್ದರು.