ಕಾಪು: ವ್ಯಾಕ್ಯೂಮ್‌ ಕ್ಲೀನರ್‌ ಹಿಡಿದು ಕಚೇರಿ ಸ್ವಚ್ಛಗೊಳಿಸಿದ ತಹಸೀಲ್ದಾರ್‌

KannadaprabhaNewsNetwork |  
Published : Jun 02, 2024, 01:47 AM IST
 ಸ್ವತಃ  ತಹಶಿಲ್ದಾರ್   ವ್ಯಾಕ್ಯೂಮ್ ಕ್ಲೀನರ್ ಬಳಸಿ  ತಮ್ಮ  ಆಫೀಸ್ ಸ್ವಚ್ಚಗೊಳಿಸಿದ್ದಾರೆ . | Kannada Prabha

ಸಾರಾಂಶ

ಕಾಪು ತಾಲೂಕಿನ ಕಡಲ ಕಿನಾರೆ ಪ್ರದೇಶಗಳಾದ ಬಡಾ, ಉಚ್ಚಿಲ ಗ್ರಾಮಗಳಲ್ಲಿ ಸ್ವಚ್ಛತಾ ಕಾರ್ಯದಲ್ಲಿ ಕಾಪು ತಹಸೀಲ್ದಾರ್ ಪ್ರತಿಭಾ ಭಾಗವಹಿಸಿದರು. ಸ್ವತಃ ತಹಸೀಲ್ದಾರ್ ವ್ಯಾಕ್ಯೂಮ್ ಕ್ಲೀನರ್ ಬಳಸಿ ತಮ್ಮ ಕಚೇರಿಯನ್ನು ಸ್ವಚ್ಛಗೊಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಕಾಪು

ಕಚೇರಿಗಳನ್ನು ಸ್ವಚ್ಛವಾಗಿಡುವಂತೆ ಉಡುಪಿ ಜಿಲ್ಲಾಧಿಕಾರಿ ಆದೇಶದಂತೆ ಕಾಪು ತಹಸೀಲ್ದಾರ್ ಕಚೇರಿಯನ್ನು ಸ್ವಚ್ಛಗೊಳಿಸಲಾಯಿತು. ಸ್ವತಃ ತಹಸೀಲ್ದಾರ್ ವ್ಯಾಕ್ಯೂಮ್ ಕ್ಲೀನರ್ ಬಳಸಿ ತಮ್ಮ ಕಚೇರಿಯನ್ನು ಸ್ವಚ್ಛಗೊಳಿಸಿದ್ದಾರೆ.

ಸ್ವಂತ ಇಚ್ಛಾಶಕ್ತಿಯಿಂದ ಸಾರ್ವಜನಿಕರು ಸ್ವಚ್ಛತೆಯಲ್ಲಿ ತೊಡಗಬೇಕು, ಆಗ ನಮ್ಮ ನಗರ ಸ್ವಚ್ಚವಾಗುತ್ತದೆ. ಸ್ವಚ್ಛ ಪರಿಸರದಿಂದ ಮನುಷ್ಯನ ಆರೋಗ್ಯ ಉತ್ತಮವಾಗುತ್ತದೆ. ಸಾಂಕ್ರಾಮಿಕ ರೋಗಗಳು ಹರಡುವುದಿಲ್ಲ. ಬೀದಿಗಳಿಗೆ ಬರುವ ಸರ್ಕಾರಿ ಕಸದ ಗಾಡಿಗಳಿಗೆ ಕಸವನ್ನು ನೀಡಬೇಕು. ಎಲ್ಲೆಂದರಲ್ಲಿ ಎಸೆಯಬಾರದು. ಬ್ಲೇಡ್ ಮುಂತಾದ ಅಪಾಯಕಾರಿ ವಸ್ತುಗಳನ್ನು ಎಲ್ಲೆಂದರಲ್ಲಿ ಎಸೆಯಬೇಡಿ, ಸ್ವಚ್ಛತಾ ಸಿಬ್ಬಂದಿಯ ಬಗ್ಗೆಯೂ ಯೋಚಿಸಿ ಎಂದು ತಹಸೀಲ್ದಾರ್ ಪ್ರತಿಭಾ ಆರ್. ಹೇಳಿದ್ದಾರೆ.ಕಾಪು ತಾಲೂಕಿನ ಕಡಲ ಕಿನಾರೆ ಪ್ರದೇಶಗಳಾದ ಬಡಾ, ಉಚ್ಚಿಲ ಗ್ರಾಮಗಳಲ್ಲಿ ಸ್ವಚ್ಛತಾ ಕಾರ್ಯದಲ್ಲಿ ಕಾಪು ತಹಸೀಲ್ದಾರ್ ಪ್ರತಿಭಾ ಭಾಗವಹಿಸಿದರು. ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮೋಹನ್, ಜೇಮ್ಸ್,‌ ಗ್ರಾಮ ಅಭಿವೃದ್ಧಿ ಅಧಿಕಾರಿ ಸತೀಶ್, ಗ್ರಾಮ ಕರಣಿಕ ಜಗದೀಶ್, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸ್ವಚ್ಛತಾ ಸಿಬ್ಬಂದಿ ಹಾಗೂ ಇತರರು ಸಾಥ್ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಒರಿಜಿನಲ್‌ ಚಾಯ್ಸ್‌ ಬ್ಯಾಡ್‌ ಚಾಯ್ಸ್‌. ಸೆಲ್ಲಿಂಗ್ ವಿಸ್ಕಿ ಈಸ್‌ ರಿಸ್ಕಿ’ : ಜಡ್ಜ್‌
ಉಚಿತ ಆರೋಗ್ಯ 10ನೇ ಗ್ಯಾರಂಟಿ ಯೋಜನೆ- ವಸತಿ 8, ಇ-ಖಾತಾ 9ನೇ ಗ್ಯಾರಂಟಿ ಸ್ಕೀಂ : ಡಿಕೆಶಿ