ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಅವರು ಕರಾಟೆ ಫೈಟಿಂಗ್ ಮತ್ತು ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು 2 ಚಿನ್ನದ ಪದಕ ಸಹಿತ ಎರಡನೇ ಬಾರಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರು ಈ ಹಿಂದೆ ಹಾಸನದಲ್ಲಿ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದರು. ಅವರು ಸೆನ್ಸಾಯಿ ಅಬ್ದುಲ್ ರೆಹಮಾನ್ ಅವರಲ್ಲಿ ತರಬೇತು ಪಡೆದಿದ್ದರು. ಅವರು ಉಜಿರೆ ಗಾಂಧಿನಗರ ನಿವಾಸಿ, ಉದ್ಯಮಿ ಬಿ ಎಚ್ ಇಬ್ರಾಹಿಂ-ನೂರ್ ಜಹಾನ್ ದಂಪತಿ ಪುತ್ರ.
ಶೋರಿನ್ ರಿಯು ಕರಾಟೆ ಅಸೋಸಿಯೇಶನ್ ನ ಚೀಫ್ ಇನ್ಸ್ಟ್ರಕ್ಟರ್ ರೆನ್ಶಿ ನದೀಮ್, ಸಂಘಟನಾ ಅಧ್ಯಕ್ಷ ರೆನ್ಶಿ ರಾಜೇಶ್, ಕಾರ್ಯದರ್ಶಿ ಸ್ವಾಮಿಪ್ರಸಾದ್ ಮತ್ತು ದೈಹಿಕ ಶಿಕ್ಷಣ ಕಾಲೇಜು ಪ್ರಾಚಾರ್ಯ ಧನಂಜಯ ಶೆಟ್ಟಿ ಉಪಸ್ಥಿತರಿದ್ದು ಪ್ರಶಸ್ತಿ ಪತ್ರ ವಿತರಿಸಿ ,ಗೌರವಿಸಿದರು.