ಕನ್ನಡ ನಾಮಫಲಕ ಅಳವಡಿಸಲು ಕರವೇ ಕಾರ್ಯಕರ್ತರಿಂದ ಡೀಸಿಗೆ ಮನವಿ

KannadaprabhaNewsNetwork |  
Published : Aug 07, 2026, 01:15 AM IST
೬ಕೆಎಲ್‌ಆರ್-7ಜಿಲ್ಲೆಯಾಧ್ಯಂತ  ಕನ್ನಡ ನಮಫಲಕಗಳನ್ನು ಅಳವಡಿಸಲು ಕ್ರಮವಹಿಸಬೇಕೆಂದು ಕರವೇ ಪ್ರವೀಣ್ ಶಟ್ಟಿ ಬಣದ ಜಿಲ್ಲಾ ಮುಖಂಡರು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್.ರವಿಕುಮಾರ್‌ರಿಗೆ ಮನವಿಸಲ್ಲಿಸುತ್ತಿರುವುದು. | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಆಂಗ್ಲ ಭಾಷೆಯ ನಾಮಫಲಕಗಳನ್ನು ಶೇ.೮೦ರಷ್ಟು ಅಳವಡಿಸುವಂತೆ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕು.

ಕೋಲಾರ: ಜಿಲ್ಲೆಯಾದ್ಯಂತ ಪ್ರತಿಯೊಂದು ಅಂಗಡಿ, ಕಾರ್ಖಾನೆ, ಖಾಸಗಿ ಶಾಲೆ, ಮಸೀದಿ, ಮದರಸಾ ಹಾಗೂ ಖಾಸಗಿ ನರ್ಸಿಂಗ್ ಹೋಂಗಳಲ್ಲಿ ಮತ್ತು ಎಲ್ಲಾ ವಹಿವಾಟಿನ ಮಳಿಗೆಗಳ ಮೇಲೆ ಕಡ್ಡಾಯ ಕನ್ನಡ ನಾಮಫಲಕಗಳನ್ನು ಅಳವಡಿಸಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರವೇ ಪ್ರವೀಣ್ ಶಟ್ಟಿ ಬಣದ ಜಿಲ್ಲಾ ಮುಖಂಡರಿಂದ ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್‌ರಿಗೆ ಮನವಿ ಸಲ್ಲಿಸಿದರು.

ಕರವೇ ಪ್ರವೀಣ್ ಶಟ್ಟಿ ಬಣದ ಜಿಲ್ಲಾಧ್ಯಕ್ಷ ಚಂಬೆ ರಾಜೇಶ್ ಮಾತನಾಡಿ, ಜಿಲ್ಲೆಯಲ್ಲಿ ಆಂಗ್ಲ ಭಾಷೆಯ ನಾಮಫಲಕಗಳನ್ನು ಶೇ.೮೦ರಷ್ಟು ಅಳವಡಿಸುವಂತೆ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು. ಜಿಲ್ಲೆಯ ನಗರಸಭೆ ವ್ಯಾಪ್ತಿಗೆ ಬರುವ ಅಂಗಡಿ, ಕಾರ್ಖಾನೆ ಮಾಲೀಕರ ಸಭೆ ಕರೆದು, ಮುಂದಿನ ಸೆಪ್ಟೆಂಬರ್ ತಿಂಗಳೊಳಗೆ ಸರ್ಕಾರದ ಆದೇಶದಂತೆ ನಡೆದುಕೊಳ್ಳುವಂತೆ ಸೂಚಿಸಿದ್ದರೂ ಇಲ್ಲಿಯವರೆಗೂ ಯಾವುದೇ ಕ್ರಮಕೈಗೊಂಡಿಲ್ಲ, ಕೋಲಾರ ನಗರದಲ್ಲಿ ಯಥಾಸ್ಥಿತಿಯಾಗಿ ನಾಮಫಲಕಗಳು ಹಾಗೆಯೇ ಉಳಿದುಕೊಂಡಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಕರವೇ ಪ್ರವೀಣ್ ಶಟ್ಟಿ ಬಣದ ಜಿಲ್ಲಾ ಮುಖಂಡರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಿಸಿಎಂ ಡಾ. ಪರಮೇಶ್ವರ್‌ ಜನ್ಮದಿನಾಚರಣೆ
75 ಬುದ್ಧ ವಿಗ್ರಹ ವಿತರಣೆಗೆ ಚಾಲನೆ