ಕಾರ್ಗಿಲ್ ವಿಜಯದಲ್ಲಿ ಭಾಗಿಯಾದ ಭಾರತೀಯ ಸೈನಿಕರ ತ್ಯಾಗ ಬಲಿದಾನಗಳ ಕುರಿತಾದ ಸಾಕ್ಷ್ಯ ಚಿತ್ರವನ್ನು ಪ್ರದರ್ಶಿಸಲಾಯಿತು.
ಕನ್ನಡಪ್ರಭ ವಾರ್ತೆ ಮಂಗಳೂರು
ಮಂಗಳೂರಿನ ಶಕ್ತಿ ನಗರದಲ್ಲಿರುವ ಶಕ್ತಿ ವಸತಿ ಶಾಲೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಶುಕ್ರವಾರ ಕಾರ್ಗಿಲ್ ವಿಜಯ ದಿವಸ್ ಆಚರಿಸಲಾಯಿತು.ಶಕ್ತಿ ವಸತಿ ಶಾಲಾ ಪ್ರಾಂಶುಪಾಲೆ ಬಬಿತಾ ಸೂರಜ್ ಮತ್ತು ವಿದ್ಯಾರ್ಥಿ ಪ್ರತಿನಿಧಿಗಳು ಪರಮ ವೀರಚಕ್ರ ಪ್ರಶಸ್ತಿ ಪಡೆದ ಸೈನಿಕರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಕಾರ್ಗಿಲ್ ವಿಜಯದಲ್ಲಿ ಭಾಗಿಯಾದ ಭಾರತೀಯ ಸೈನಿಕರ ತ್ಯಾಗ ಬಲಿದಾನಗಳ ಕುರಿತಾದ ಸಾಕ್ಷ್ಯ ಚಿತ್ರವನ್ನು ಪ್ರದರ್ಶಿಸಲಾಯಿತು.ಅಲ್ಲದೆ ಯುದ್ಧ ಸ್ಮಾರಕ ಕದ್ರಿ ಮಂಗಳೂರು ಇಲ್ಲಿ ನಡೆದ ಕಾರ್ಗಿಲ್ ವಿಜಯ ದಿವಸ ಆಚರಣೆಯಲ್ಲಿ ಶಕ್ತಿ ಪ್ರಾಥಮಿಕ ಶಾಲಾ ಮಕ್ಕಳು ಶಿಕ್ಷಕರೊಂದಿಗೆ ಭಾಗವಹಿಸಿದ್ದು ವಿಶೇಷವಾಗಿತ್ತು.ವಿದ್ಯಾರ್ಥಿನಿ ಭಾವಿಕಾ ದಿನದ ಪ್ರಾಮುಖ್ಯತೆಯನ್ನು ವಾಚಿಸಿದರು. ಹೇಮಿಲಾ ನಿರೂಪಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.