ಕಾರಿಂಜ, ನರಹರಿಯಲ್ಲಿ ಆಟಿ ತೀರ್ಥಸ್ನಾನ

KannadaprabhaNewsNetwork |  
Published : Jul 26, 2025, 02:00 AM IST
ಕಾರಿಂಜ ಕ್ಷೇತ್ರಕ್ಕೆ ಸುರಿಯುತ್ತಿರುವ ಮಳೆಯಲ್ಲೂ ತೆರಲುತ್ತಿರುವ ಭಕ್ತರು | Kannada Prabha

ಸಾರಾಂಶ

ಬಂಟ್ವಾಳ ತಾಲೂಕಿನ ಪ್ರಮುಖ ಕ್ಷೇತ್ರಗಳಾದ ಪುರಾಣ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನ ಹಾಗೂ ಪ್ರಕೃತಿ ರಮಣೀಯ ನರಹರಿಪರ್ವತದ ಶ್ರೀ ಸದಾಶಿವ ದೇವಸ್ಥಾನ ಸಹಿತ ವಿವಿಧ ಕ್ಷೇತ್ರಗಳಲ್ಲಿ ಗುರುವಾರ ಆಟಿ ಅಮವಾಸ್ಯೆ ಪ್ರಯುಕ್ತ ತೀರ್ಥಸ್ನಾನ ,ವಿಶೇಷ ಉತ್ಸವ ನಡೆಯಿತು.

ಬಂಟ್ವಾಳ: ಎಡೆಬಿಡದೆ ಸುರಿದ ಮಳೆಯನ್ನು ಲೆಕ್ಕಿಸದೆ ಬಂಟ್ವಾಳ ತಾಲೂಕಿನ ಪ್ರಮುಖ ಕ್ಷೇತ್ರಗಳಾದ ಪುರಾಣ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನ ಹಾಗೂ ಪ್ರಕೃತಿ ರಮಣೀಯ ನರಹರಿಪರ್ವತದ ಶ್ರೀ ಸದಾಶಿವ ದೇವಸ್ಥಾನ ಸಹಿತ ವಿವಿಧ ಕ್ಷೇತ್ರಗಳಲ್ಲಿ ಗುರುವಾರ ಆಟಿ ಅಮವಾಸ್ಯೆ ಪ್ರಯುಕ್ತ ತೀರ್ಥಸ್ನಾನ ,ವಿಶೇಷ ಉತ್ಸವ ನಡೆಯಿತು.

ಕಾರಿಂಜೇಶ್ವರ ದೇವಸ್ಥಾನದ ಶಿವ- ಪಾರ್ವತಿ ದೇವಾಲಯ ಪ್ರವೇಶಿಸುವ ಮುನ್ನ ಮಹಿಳೆಯರು,ಪುರುಷರು,ಮಕ್ಕಳು ಸೇರಿದಂತೆ ಭಕ್ತರು ಸಾಲುಗಟ್ಟಿ ಬಂದು ಕ್ಷೇತ್ರದ ಗದಾತೀರ್ಥ ಕೆರೆಯಲ್ಲಿ ಬಾಗಿನ ಅರ್ಪಿಸಿ ತೀರ್ಥಸ್ನಾನಗೈದು ದೇವರ ದರ್ಶನ ಪಡೆದು ವಿಶೇಷಪೂಜೆ ಸಲ್ಲಿಸಿದರು.

ಮುಂಜಾನೆಯಿಂದಲೇ ಸ್ಥಳೀಯ ಓಂಕಾರ ಫ್ರೆಂಡ್ಸ್ ಮಧ್ವ, ಓಂಕಾರ ಮಹಿಳಾ ಘಟಕ, ಓಂಕಾರ ಶ್ರೀ ಶಾರದಾ ಭಜನಾ ಮಂದಿರ ಬೆಂಗತ್ತೋಡಿ ಇವರ ವತಿಯಿಂದ ಹಾಳೆ ಮರದ ಕೆತ್ತೆಯ ಕಷಾಯವನ್ನು ಭಕ್ತರಿಗೆ ವಿತರಿಸಲಾಯಿತು.

ನರಹರಿಯಲ್ಲೂ ಜನಸ್ತೋಮ:ಪ್ರವಾಸಿತಾಣ ನರಹರಿ ಪರ್ವತ ಸದಾಶಿವ ದೇವಸ್ಥಾನದಲ್ಲಿ ನೂರಾರು ಮಂದಿ ಭಕ್ತರು ಆಗಮಿಸಿ ತೀರ್ಥಸ್ನಾನ ಕೈಗೊಂಡರು.ಇಲ್ಲಿನ ಶಂಖ, ಚಕ್ರ, ಗದಾ, ಪದ್ಮವೆಂಬ ನಾಲ್ಕು ಕೆರೆಗಳಲ್ಲಿ ಭಕ್ತರು ಪುಣ್ಯಸ್ನಾನ ಮಾಡಿದರು. ಬೆಳಗ್ಗಿನಿಂದಲೇ ಸಾಲಾಗಿ ಭಕ್ತರು ಆಗಮಿಸಿದ್ದು, ಧಾರಾಕಾರ ಮಳೆಗೆ ಕೊಡೆ ಹಿಡಿದುಕೊಂಡೇ ಪರ್ವತದತ್ತ ಸಾಗಿದರು.

ನಸುಕಿನ ವೇಳೆಯೇ ಭಕ್ತರ ಸಾಲು ಕಂಡುಬಂತು. ಆಟಿ ಅಮಾವಾಸ್ಯೆ ಸಂದರ್ಭ ಇಲ್ಲಿನ ಪುಣ್ಯತೀರ್ಥಗಳ ಪವಿತ್ರ ಜಲದಲ್ಲಿ ಸ್ನಾನ ಮಾಡಿದರೆ, ಸರ್ವರೋಗ ಪರಿಹಾರವಾಗುತ್ತದೆ ಎಂಬ ನಂಬಿಕೆ ಇದೆ. ಈ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ಅಸುಪಾಸಿನ ಪರವೂರಿನ ಭಕ್ತರು ಪರ್ವತವೇರಿ ಕೆರೆಗಳಲ್ಲಿ ಮಿಂದು ದೇವರ ದರ್ಶನಗೈದು ವಿಶೇಷ ಪೂಜೆ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ