ಮಾಳ-ತನಿಕೋಡು ಗೇಟ್ ರಸ್ತೆ ಅಭಿವೃದ್ಧಿ: ಸಂಸದ ಪರಿಶೀಲನೆ

KannadaprabhaNewsNetwork |  
Published : May 30, 2026, 02:30 AM IST
ಮಾಳ-ತನಿಕೋಡು ಗೇಟ್ ರಸ್ತೆಯನ್ನು ಅಭಿವೃದ್ಧಿಪಡಜಿಸಲು ಸಂಸದ ಕೋಟ ಸ್ಥಳ ಪರಿಶೀಲನೆ ಮಾಡಿದರು. | Kannada Prabha

ಸಾರಾಂಶ

ಇಲ್ಲಿನ ಮಾಳ ಗೇಟ್‌ನಿಂದ ಎಸ್.ಕೆ. ಬಾರ್ಡರ್ ಮೂಲಕ ಶೃಂಗೇರಿಯ ತನಿಕೋಡು ಗೇಟ್‌ವರೆಗಿನ 29 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಕುರಿತು ಸಂಬಂಧಿತ ಅಧಿಕಾರಿಗಳೊಂದಿಗೆ ಶುಕ್ರವಾರ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಚರ್ಚೆ ನಡೆಸಿದರು.

ಕಾರ್ಕಳ : ಇಲ್ಲಿನ ಮಾಳ ಗೇಟ್‌ನಿಂದ ಎಸ್.ಕೆ. ಬಾರ್ಡರ್ ಮೂಲಕ ಶೃಂಗೇರಿಯ ತನಿಕೋಡು ಗೇಟ್‌ವರೆಗಿನ 29 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಕುರಿತು ಸಂಬಂಧಿತ ಅಧಿಕಾರಿಗಳೊಂದಿಗೆ ಶುಕ್ರವಾರ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಚರ್ಚೆ ನಡೆಸಿದರು.

ಈ ಹೆದ್ದಾರಿ ಅಭಿವೃದ್ಧಿಗೆ ಸುಮಾರು 550 ಕೋಟಿ ರು. ವೆಚ್ಚದ ಪ್ರಸ್ತಾವನೆ ಕೇಂದ್ರ ಸರ್ಕಾರದ ಮುಂದಿದ್ದು, ಕಾಮಗಾರಿಗೆ ಅಗತ್ಯವಿರುವ ಅರಣ್ಯ ಭೂಮಿ ಸಂಬಂಧಿತ ಪ್ರಕ್ರಿಯೆಗಳು ಪ್ರಗತಿಯಲ್ಲಿವೆ. ಮಾಳ ಗೇಟ್ ಆರಂಭದಿಂದ ರಸ್ತೆ ಇಕ್ಕೆಲಗಳಲ್ಲಿ ಬರುವ ಅರಣ್ಯ ತೆರವುಗೊಳಿಸಲು ಕಂದಾಯ ಇಲಾಖೆ ಮೂಲಕ ಅರಣ್ಯ ಇಲಾಖೆಗೆ ಸುಮಾರು 50 ಎಕರೆ ಜಾಗವನ್ನು ವರ್ಗಾಯಿಸಬೇಕಾಗಿದೆ. ಈ ಸಂಬಂಧ ಕಡತ ವಿಲೇವಾರಿಗಾಗಿ ಶನಿವಾರ ಶಿವಮೊಗ್ಗ ಜಿಲ್ಲಾಧಿಕಾರಿ ಅವರನ್ನು ಭೇಟಿ ಮಾಡಲು ಸಮಯ ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಇಲಾಖೆ ಮಾಹಿತಿ ಪ್ರಕಾರ ಹಿಂದೆ ಗುಲಗುಂಜಿ ಮನೆ, ಕೊರ್ಕನಹಳ್ಳಿ ಸೇರಿದಂತೆ ಮೂರು ಸೇತುವೆಗಳು ಮಂಜೂರಾಗಿದ್ದರೂ ಅರಣ್ಯ ಇಲಾಖೆ ಅನುಮತಿ ಸಿಗದ ಕಾರಣ ಕಾಮಗಾರಿ ರದ್ದಾಗಿತ್ತು. ಇದೀಗ ಅಗತ್ಯ ಅನುಮತಿ ದೊರಕುವ ನಿರೀಕ್ಷೆಯಲ್ಲಿ ರಸ್ತೆ ಇಕ್ಕೆಲಗಳಲ್ಲಿ ಗಡಿ ಗುರುತು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಮತ್ತು ಕಂದಾಯ ಇಲಾಖೆ ಪ್ರಸ್ತಾಪಿತ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಿದರೆ 1999ರಿಂದ ಅಂದರೆ ಸುಮಾರು 25 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಮಾಳ-ತನಿಕೋಡು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಶೀಘ್ರ ಚಾಲನೆ ಸಿಗಲಿದೆ ಎಂದು ಸಂಸದ ಕೋಟ ವಿಶ್ವಾಸ ವ್ಯಕ್ತಪಡಿಸಿದರು.ರಾ.ಹೆ. ಇಲಾಖೆಯ ನವೀನ್ ರಾಜ್, ಅರಣ್ಯ ಇಲಾಖೆಯ ಅರುಣ್, ಸತೀಶ್ ನಾಯಕ್, ಸುಬ್ರಹ್ಮಣ್ಯ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪುರಸಭೆ ನಿರ್ಲಕ್ಷ್ಯ ಧೋರಣೆ ಆರೋಪ: ಮಾಜಿ ಸದಸ್ಯ ಪ್ರತಿಭಟನೆ
ಕೊಡಗು ಜಿಲ್ಲೆಗೆ ಸಚಿವ ಸ್ಥಾನ ನಿರೀಕ್ಷೆ!