ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ಹಾಗೂ ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘಗಳ (ಸಿಐಟಿಯು) ನೇತೃತ್ವದಲ್ಲಿ ಬೀಡಿ ಕಂಪೆನಿಯ ಅವ್ಯವಸ್ಥೆಯ ವಿರುದ್ಧ ಕಾರ್ಕಳದಲ್ಲಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು.
ಕನ್ನಡಪ್ರಭ ವಾರ್ತೆ ಕಾರ್ಕಳ
ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ಹಾಗೂ ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘಗಳ (ಸಿಐಟಿಯು) ನೇತೃತ್ವದಲ್ಲಿ ಬೀಡಿ ಕಂಪೆನಿಯ ಅವ್ಯವಸ್ಥೆಯ ವಿರುದ್ಧ ಕಾರ್ಕಳದಲ್ಲಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು.ಹಲವು ಸಮಯದಿಂದ ಹಾಳಾದ ಬೀಡಿ ಎಲೆಗಳನ್ನು ಪೂರೈಕೆ ಮಾಡಲಾಗುತ್ತಿದ್ದು, ಸರಿಪಡಿಸಲು ಹಲವು ಬಾರಿ ಎಚ್ಚರಿಕೆಯನ್ನು ನೀಡಲಾಗಿತ್ತು. ಅದರೂ ಎಚ್ಚೆತ್ತುಕೊಳ್ಳದ ಕಂಪನಿಯ ವಿರುದ್ಧ ಸಂಘದ ಮುಖಂಡರು ಹಾಗೂ ಕಾರ್ಮಿಕರು ಸೇರಿ ಪ್ರತಿಭಟನೆ ನಡೆಸಿದರು. ಬಳಿಕ ಕಂಪನಿಗೆ ಮುತ್ತಿಗೆ ಹಾಕಲಾಯಿತು.ಪ್ರತಿಭಟನೆಯನ್ನುದ್ದೇಶಿಸಿ ಕಾರ್ಕಳ ತಾಲೂಕು ಬೀಡಿ ಕಾರ್ಮಿಕ ಸಂಘದ ಕಾರ್ಯದರ್ಶಿ ಕವಿರಾಜ್. ಎಸ್. ಕಾಂಚನ್, ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ಉಪಾಧ್ಯಕ್ಷೆ ಬಲ್ಕೀಸ್, ಕಾರ್ಯದರ್ಶಿ ಉಮೇಶ್ ಕುಂದರ್ ಮಾತನಾಡಿದರು.ಈ ವೇಳೆ ಸಮಜಾಯಿಷಿ ನೀಡಿದ ಕಂಪನಿಯ ಮ್ಯಾನೇಜರ್, ಹಳೇ ಬೀಡಿ ಎಲೆ ಖಾಲಿ ಮಾಡಿದ್ದು ಈಗ ಹೊಸ ಎಲೆ ಪೂರೈಕೆಯಾಗಿದೆ. ಎರಡು ದಿನಗಳಲ್ಲಿ ಹೊಸ ಎಲೆಯನ್ನು ಕಾರ್ಮಿಕರಿಗೆ ವಿತರಿಸಲಾಗುವುದು ಎಂದು ಭರವಸೆ ನೀಡಿದರು. ನಂತರ ಸಂಘದ ಮುಖಂಡರು ಹಾಗೂ ಕಾರ್ಮಿಕರು ಎಲೆ ಸಂಸ್ಕರಿಸುವ ಗೋಡೌನ್ ಗೆ ಹೋಗಿ ಪರಿಶೀಲಿಸಿದರು. ಬಳಿಕ ಪ್ರತಿಭಟನೆಯನ್ನು ವಾಪಸು ಪಡೆಯಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.