ಕಾರ್ಕಳ: ಬಿಜೆಪಿ ಕಾರ್ಕಳ ಮಂಡಲದ ಅಧ್ಯಕ್ಷ ನವೀನ್ ನಾಯಕ್ ಅವರ ನೇತೃತ್ವದಲ್ಲಿ ಭಾನುವಾರ ಕಾರ್ಕಳದ ವಿಕಾಸ ಜನಸೇವಾ ಕಚೇರಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.ಯೋಗವು ಭಾರತದ ಪ್ರಾಚೀನ ಪರಂಪರೆಯ ಅಮೂಲ್ಯ ಕೊಡುಗೆ. ಇದು ಶರೀರ, ಮನಸ್ಸು ಮತ್ತು ಆತ್ಮವನ್ನು ಒಂದುಗೂಡಿಸಿ ಸಮಗ್ರ ಆರೋಗ್ಯ ನೀಡುತ್ತದೆ. ‘ವಸುದೈವ ಕುಟುಂಬಕಂ’ ಭಾವನೆಯೊಂದಿಗೆ ಯೋಗವು ವಿಶ್ವವನ್ನು ಬೆಸೆಯುವ ಸೇತುವೆಯಾಗಿದೆ. ಯೋಗವನ್ನು ದಿನಚರಿಯ ಭಾಗವಾಗಿಸಿ, ಆರೋಗ್ಯವಂತ ಹಾಗೂ ಶಾಂತಿಯುತ ಸಮಾಜ ನಿರ್ಮಿಸೋಣ ಎಂಬ ಪ್ರಧಾನಿಗಳಾದ ನರೇಂದ್ರ ಮೋದಿಯವರ ಮಾತಿನಂತೆ ಜೂನ್ 21ರಂದು ದೇಶದೆಲ್ಲೆಡೆ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತದೆ.
ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ರವೀಂದ್ರ ಮಡಿವಾಳ, ಪ್ರಧಾನ ಕಾರ್ಯದರ್ಶಿ ಬೋಳ ಸತೀಶ್ ಪೂಜಾರಿ, ಪಕ್ಷದ ವಕ್ತಾರ ರವೀಂದ್ರ ಮೊಯ್ಲಿ, ರಾಜ್ಯ ಯುವಮೋರ್ಚಾ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ ನಗರ ಅಧ್ಯಕ್ಷರಾದ ನಿರಂಜನ್ ಜೈನ್, ಯೋಗೀಶ್ ಸಾಲ್ಯಾನ್ ಹಾಗೂ ಪಕ್ಷದ ಪ್ರಮುಖರು, ಯುವ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.