ಕಾರ್ಕಳ: ಫಲಾನುಭವಿಗಳಿಗೆ ಶಾಸಕ ಸವಲತ್ತು ವಿತರಣೆ

KannadaprabhaNewsNetwork |  
Published : Mar 02, 2025, 01:15 AM IST
ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಣೆ ಮಾಡಿದರು. | Kannada Prabha

ಸಾರಾಂಶ

ಶಾಸಕ ವಿ. ಸುನೀಲ್ ಕುಮಾರ್ ಕಾರ್ಕಳ, ಕುಕ್ಕುಂದೂರು, ದುರ್ಗಾ, ಇರ್ವತ್ತೂರು, ಕಾಂತಾವರ, ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಫಲಾನುಭವಿಗಳಿಗೆ ಸವಲತ್ತುಗಳನ್ನು ಇತ್ತೀಚೆಗೆ ಕಾರ್ಕಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ವಿತರಣೆ ಮಾಡಿದರು.

ಕನ್ನಡಪ್ರಭ ವಾರ್ತೆ ಕಾರ್ಕಳ

ಕಾರ್ಕಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕ . ವಿ. ಸುನೀಲ್ ಕುಮಾರ್ ಕಾರ್ಕಳ, ಕುಕ್ಕುಂದೂರು, ದುರ್ಗಾ, ಇರ್ವತ್ತೂರು, ಕಾಂತಾವರ, ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಣೆ ಮಾಡಿದರು.

ಕಂದಾಯ ಇಲಾಖೆಗೆ ಸಂಬಂಧಿಸಿದಂತೆ 26 ಫಲಾನುಭವಿಗಳಿಗೆ 94ಸಿ / 94ಸಿಸಿಯಡಿ ಹಕ್ಕುಪತ್ರ ವಿತರಣೆ ಮಾಡಲಾಯಿತು. ಕಾರ್ಮಿಕ ಇಲಾಖೆಯಿಂದ 30 ಫಲಾನುಭವಿಗಳಿಗೆ ವೆಲ್ಡರ್ ಕಿಟ್, ಟೆಲ್ಸ್ ಕಿಟ್, ಎಲೆಕ್ಟ್ರಿಷಿಯನ್ ಕಿಟ್ ಗಳನ್ನು ವಿತರಿಸಿದರು. ಕುಕ್ಕುಂದೂರು ಹಾಗೂ ಕಾಂತಾವರ ಗ್ರಾಮ ಪಂಚಾಯಿತಿಯ ಮೂವರು ಎಸ್‌, ಎಸ್‌ಟಿ ಫಲಾನುಭವಿಗಳಿಗೆ ಸಹಾಯಧನ ವಿತರಣೆ ಮಾಡಿದರು.

ಈ ಸಂದರ್ಭ ಮಾತನಾಡಿದ ಶಾಸಕ ಸುನಿಲ್‌ ಕುಮಾರ್‌, ಸರ್ಕಾರದ ವಿವಿಧ ಯೋಜನೆಯಡಿ ಸಿಗುವ ಸೌಲಭ್ಯವನ್ನು ಪಡೆದು ತಮ್ಮ ಕೆಲಸದಲ್ಲಿ ಈಗ ನೀಡುವ ಉಪಕರಣಗಳನ್ನು ಉಪಯೋಗಿಸಿಕೊಳ್ಳಬೇಕು. ಹಾಗೂ 94ಸಿ ಅಡಿ ಹಕ್ಕುಪತ್ರ ಪಡೆದವರು ಈ ಕ್ಷಣದಿಂದ ಜಾಗದ ಮಾಲೀಕರೆ ಆಗಿದ್ದು ನಿರ್ಭೀತಿಯಿಂದ ಅದೇ ಜಾಗದಲ್ಲಿ ವಾಸಿಸಬಹುದು ಎಂದು ತಿಳಿಸಿದರು

ಈ ಕಾರ್ಯಕ್ರಮದಲ್ಲಿ ಕಾರ್ಕಳ ತಾಲೂಕು ತಹಸೀಲ್ದಾರ್‌ ಪ್ರದೀಪ್, ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಕೆ.ಜಿ., ಪುರಸಭೆ ಅಧ್ಯಕ್ಷ ಯೋಗಿಶ್ ದೇವಾಡಿಗ, ಕುಕ್ಕುಂದೂರು ಗ್ರಾ.ಪಂ. ಅಧ್ಯಕ್ಷ ಉಷಾ ಕೆ. ಹಾಗೂ ವಿವಿಧ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು ಅಧಿಕಾರಿಗಳು ಹಾಗೂ ಫಲಾಭವಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ