ಕಾರ್ಕಳ-ಪಡುಬಿದ್ರಿ ಟೋಲ್ ಖಂಡನೀಯ: ರೇಷ್ಮಾ ಉದಯ ಶೆಟ್ಟಿ

KannadaprabhaNewsNetwork |  
Published : Aug 02, 2024, 12:46 AM ISTUpdated : Aug 02, 2024, 12:47 AM IST
ರೇಶ್ಮಾ1 | Kannada Prabha

ಸಾರಾಂಶ

ಕಾರ್ಕಳ ರಸ್ತೆಯಲ್ಲಿ ಟೋಲ್ ಗೇಟನ್ನು ವೈಜ್ಞಾನಿಕವಾಗಿ ಅಳವಡಿಸುವುದು ಸಾಧ್ಯವಾಗದ ಮಾತು. ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತು ಸದ್ರಿ ಟೋಲ್ ಸಂಗ್ರಹ ಪ್ರಸ್ತಾಪವನ್ನು ಕೈಬಿಡದೇ ಇದ್ದಲ್ಲಿ ಅನ್ಯಾಯದ ವಿರುದ್ಧ ಸಂಘಟಿತ ಹೋರಾಟ ಅನಿವಾರ್ಯವೆನಿಸಲಿದೆ ಎಂದು ರೇಷ್ಮಾ ಉದಯ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ಪ್ರಸಕ್ತ ಹೆಜಮಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಕೇಂದ್ರವಿದೆ. ಇದೀಗ ಇಲ್ಲಿನ ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿ ಕೇವಲ 3 ಕಿ.ಮೀ. ವ್ಯಾಪ್ತಿಯಲ್ಲಿ ಮತ್ತೊಂದು ಟೋಲ್ ಸಂಗ್ರಹ ಕೇಂದ್ರ ತೆರೆಯಲು ರಾಜ್ಯ ಸರ್ಕಾರ ತಯಾರಿ ನಡೆಸುತ್ತಿರುವುದು ಅತ್ಯಂತ ಖಂಡನೀಯ ಎಂದು ಜಿ.ಪಂ. ಮಾಜಿ ಸದಸ್ಯೆ ಹಾಗೂ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ತಿಳಿಸಿದ್ದಾರೆ.ಈಗಾಗಲೇ ಎಲ್ಲಾ ಮೂಲಭೂತ ಆದ್ಯತೆಗಳ ಹಾಗೂ ಅಗತ್ಯ ವಸ್ತುಗಳ ವಿಪರೀತ ಬೆಲೆ ಏರಿಕೆಯಿಂದ ಜನ ಕಂಗೆಟ್ಟಿದ್ದಾರೆ. ಈ ಬಾರಿ ಮಳೆಯ ರುದ್ರ ನರ್ತನದಿಂದ ರೈತಾಪಿ ವರ್ಗ ಕಂಗಾಲಾಗಿದ್ದಾರೆ. ಈ ಸಂದಿಗ್ಧ ಸನ್ನಿವೇಶದಲ್ಲಿ 3 ಕಿ.ಮೀ. ವ್ಯಾಪ್ತಿಯಲ್ಲಿ ಎರಡೆರಡು ಕಡೆ ಟೋಲ್ ತೆತ್ತು ಸಂಚರಿಸುವುದು ಜನರಿಗೆ ಅತೀವ ಹೊರೆಯಾಗಲಿದೆ.ಕಾರ್ಕಳ ರಸ್ತೆಯಲ್ಲಿ ಟೋಲ್ ಗೇಟನ್ನು ವೈಜ್ಞಾನಿಕವಾಗಿ ಅಳವಡಿಸುವುದು ಸಾಧ್ಯವಾಗದ ಮಾತು. ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತು ಸದ್ರಿ ಟೋಲ್ ಸಂಗ್ರಹ ಪ್ರಸ್ತಾಪವನ್ನು ಕೈಬಿಡದೇ ಇದ್ದಲ್ಲಿ ಅನ್ಯಾಯದ ವಿರುದ್ಧ ಸಂಘಟಿತ ಹೋರಾಟ ಅನಿವಾರ್ಯವೆನಿಸಲಿದೆ ಎಂದು ರೇಷ್ಮಾ ಉದಯ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನ ಬಿಲ್‌ ಬಾಕಿದಾರರಿಗೆ ಶುಭ ಸುದ್ದಿ : ಬಡ್ಡಿ, ದಂಡ ಪೂರ್ಣ ಮನ್ನಾ।
ಡ್ರಗ್ಸ್‌ ದಂಧೆಯಲ್ಲಿ ಕಾಂಗ್ರೆಸ್‌ ನಿಕಟವರ್ತಿಗಳ ಕೈವಾಡ: ಶಾಸಕ ಅಶ್ವತ್ಥನಾರಾಯಣ