ಕಾರ್ಕಳ: ಬಿಜೆಪಿ ಮಹಿಳಾ ಮೋರ್ಚಾದಿಂದ ‘ಶ್ರಾವಣ ಸಂಭ್ರಮ’ ಕಾರ್ಯಕ್ರಮ

KannadaprabhaNewsNetwork |  
Published : Sep 04, 2024, 02:01 AM IST
ಬಿಜೆಪಿಕಾರ್ಕಳ ಮಹಿಳಾ ಮೋರ್ಚಾದಿಂದ “ಶ್ರಾವಣ ಸಂಭ್ರಮ” ಕಾರ್ಯಕ್ರಮ | Kannada Prabha

ಸಾರಾಂಶ

ಮಹಿಳೆಯರು ಪ್ರಮುಖವಾಗಿ ಆಚರಿಸುವ ಸಾಲು-ಸಾಲು ಹಬ್ಬಗಳು ಶ್ರಾವಣ ಮಾಸದಲ್ಲಿ ಬರುತ್ತದೆ. ತುಳುನಾಡಿನ ಗ್ರಾಮೀಣ ಜನರ ಬದುಕು, ಜನಪದೀಯ ಆಚರಣೆಗಳು ಅವಲಂಬಿತವಾಗಿರುವುದರಿಂದ ಬಿಜೆಪಿ ಕಾರ್ಕಳ ಮಹಿಳಾ ಮೋರ್ಚಾ ಜಾನಪದ ಸಂಸ್ಕೃತಿಯ ಉಳಿವಿಗಾಗಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದೆ.

ಕನ್ನಡಪ್ರಭ ವಾರ್ತೆ ಕಾರ್ಕಳ

ಬಿಜೆಪಿ ಕಾರ್ಕಳ ಮಂಡಲದ ಮಹಿಳಾ ಮೋರ್ಚಾದಿಂದ ತುಳುನಾಡಿನ ಸಂಸ್ಕೃತಿ-ಸಂಪ್ರದಾಯ-ಸಂಸ್ಕಾರಗಳನ್ನು ಬಿಂಬಿಸುವ ವಿನೂತನ ಕಾರ್ಯಕ್ರಮ ಶ್ರಾವಣ ಸಂಭ್ರಮ ಕಾರ್ಕಳದ ಶ್ರೀರಾಮಕ್ಷತ್ರಿಯ ಸಭಾಭವನದಲ್ಲಿ ವಿಜೃಂಭಣೆಯಿಂದ ಜರುಗಿತು.

ಮಹಿಳೆಯರು ಪ್ರಮುಖವಾಗಿ ಆಚರಿಸುವ ಸಾಲು-ಸಾಲು ಹಬ್ಬಗಳು ಶ್ರಾವಣ ಮಾಸದಲ್ಲಿ ಬರುತ್ತದೆ. ತುಳುನಾಡಿನ ಗ್ರಾಮೀಣ ಜನರ ಬದುಕು, ಜನಪದೀಯ ಆಚರಣೆಗಳು ಅವಲಂಬಿತವಾಗಿರುವುದರಿಂದ ಬಿಜೆಪಿ ಕಾರ್ಕಳ ಮಹಿಳಾ ಮೋರ್ಚಾ ಜಾನಪದ ಸಂಸ್ಕೃತಿಯ ಉಳಿವಿಗಾಗಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದೆ.

ಸಂಪ್ರದಾಯದಂತೆ ಮಹಿಳೆಯರನ್ನು ಅರಿಶಿನ, ಕುಂಕುಮ ಹಚ್ಚಿ, ಹೂವು, ಬಳೆ, ರವಿಕೆ ಕಣ ನೀಡಿ ಸ್ವಾಗತಿಸಲಾಯಿತು. ಮುತ್ತೈದೆಯರಿಗೆ ಬಾಗಿನ ಸಮರ್ಪಣೆ ಮಾಡುವ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಕಳ ವಿಧಾನಸಭಾ ಕ್ಷೇತ್ರದ ವಿವಿಧ ಮಹಾಶಕ್ತಿಕೇಂದ್ರಗಳಿಂದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸುಮಾರು 22 ತಂಡಗಳಲ್ಲಿ ಭಾಗವಹಿಸಿ ದೇಶಭಕ್ತಿಗೀತೆ, ಜಾನಪದ ಹಾಡು ಮತ್ತು ನೃತ್ಯಗಳ ಪ್ರದರ್ಶನ ನೀಡಿ ಅದ್ಭುತವಾದ ಮನೋರಂಜನಾ ಲೋಕ ಸೃಷ್ಟಿಸಿದ್ದರು.ಕಾರ್ಯಕ್ರಮದ ಕೊನೆಯಲ್ಲಿ ನಡೆದ ಅಭಿನಂದನಾ ಸಭಾ ಕಾರ್ಯಕ್ರಮವನ್ನು ಪಕ್ಷದ ಹಿರಿಯ ಮಾರ್ಗದರ್ಶಕ ಮತ್ತು ಉದ್ಯಮಿ ಬೋಳ ಪ್ರಭಾಕರ ಕಾಮತ್ ಉದ್ಘಾಟಿಸಿ ಮಾತನಾಡಿ, ಗೃಹ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಮಹಿಳೆಯರು ರಾಜಕೀಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಶ್ರಾವಣ ಮಾಸದ ಮಹತ್ವವನ್ನು ಅರಿತು ಅನೇಕ ಆಚರಣೆಗಳನ್ನು ಮೆಲುಕು ಹಾಕುವುದು ಶ್ಲಾಘನೀಯ ಎಂದರು.ಶಾಸಕ ಸುನಿಲ್ ಕುಮಾರ್ ಮಾತನಾಡಿ, ಮಹಿಳಾ ಮೋರ್ಚಾದ ಕಾರ್ಯಕ್ರಮದಿಂದ ಹಿರಿಯ ಸದಸ್ಯರೆಲ್ಲರೂ ಅತ್ಯಂತ ಉತ್ಸಾಹದಿಂದ ಈ ಸಂಭ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿನೂತನ ಚರಿತ್ರೆಗೆ ಮುನ್ನುಡಿ ಬರೆದಿರುವುದು ತುಂಬಾ ಹೆಮ್ಮೆಯ ಸಂಗತಿ ಎಂದು ಹೇಳಿದರು.ಮಹಿಳಾ ಮೋರ್ಚಾದ ತಾಲೂಕು ಅಧ್ಯಕ್ಷೆ ವಿನಯಾ ಬಂಗೇರ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷ ಸಂಧ್ಯಾ ರಮೇಶ್, ಕಾರ್ಕಳ ಮಂಡಲ ಅಧ್ಯಕ್ಷ ನವೀನ್ ನಾಯಕ್, ಮಹಾವೀರ ಹೆಗ್ಡೆ, ಶ್ಯಾಮಲ ಕುಂದರ್, ಸತೀಶ್ ಶೆಟ್ಟಿ ಮುಟ್ಲುಪಾಡಿ, ಅನಿತಾ ಮರವಂತೆ, ರೇಷ್ಮಾ ಉದಯ ಶೆಟ್ಟಿ, ಸವಿತಾ ಕೋಟ್ಯಾನ್, ಸುಗಂಧಿ, ಕವಿತಾ ಹರೀಶ್ ಮೊದಲಾದವರು ಉಪಸ್ಥಿತರಿದ್ದರು. ಸುಮಾ ರವಿಕಾಂತ್ ಮತ್ತು ಕಾವ್ಯ ಕಣಜಾರು ಕಾರ್ಯಕ್ರಮ ನಿರೂಪಿಸಿದರು. ಮಮತಾ ಸುವರ್ಣ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!